ಬೀದರ್‌ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

Date:

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪದಾಧಿಕಾರಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಬೀದರ್ ನಗರದಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ʼವಕ್ಫ್ ತಿದ್ದುಪಡಿಯಿಂದ ಸಂವಿಧಾನದ 14, 25, 26 ಮತ್ತು 29ನೇ ವಿಧಿಗಳಲ್ಲಿ ಪರಿಗಣಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮಗಳಿಗೆ ಈ ವಿಧಿಗಳ ಪ್ರಕಾರ ರಕ್ಷಣೆ ಒದಗಿಸಲಾಗಿದೆ. ವಕ್ಫ್ ರಕ್ಷಣೆ ಮತ್ತು ಆಸ್ತಿಗೆ ಲಭ್ಯವಿರುವ ನಿಬಂಧನೆಗಳನ್ನು ಕೊನೆಗೊಳಿಸುವ ಮೂಲಕ ಅದನ್ನು ಮುಸ್ಲಿಂ ಸಮುದಾಯದವರೊಂದಿಗೆ ತಾರತಮ್ಯ ಮಾಡಲಾಗುತ್ತಿದೆʼ ಎಂದು ಆತಂಕ ವ್ಯಕ್ತಪಡಿಸಿದರು.

ʼಧಾರ್ಮಿಕ ಸ್ವಾತಂತ್ರ‍್ಯದ ಹಕ್ಕು (ಪರಿಚ್ಛೇದ 25) ಮತ್ತು ಸ್ವಂತ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕಿಗೆ (ಪರಿಚ್ಛೇದ 26 ಮತ್ತು 29) ವಿರುದ್ಧವಾಗಿದೆ.1995ರ ವಕ್ಫ್‌ ಕಾಯ್ದೆಗೆ ಇತ್ತೀಚೆಗೆ ತಂದಿರುವ ತಿದ್ದುಪಡಿ ತಾರತಮ್ಯದಿಂದ ಕೂಡಿದೆ. ಸಂವಿಧಾನದ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ. ಧಾರ್ಮಿಕ ಆಚರಣೆ ಮತ್ತು ಆಯಾ ಧಾರ್ಮಿಕ ಸಂಸ್ಥೆಗಳನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದಕ್ಕೆ ಅಡ್ಡಿಪಡಿಸುತ್ತದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸರ್ಕಾರ ವಕ್ಫ್‌ ಆಸ್ತಿ ವಶಕ್ಕೆ ಪಡೆದು ಅದರ ಮೇಲೆ ಮಾಲೀಕತ್ವ ಸಾಧಿಸಲು ಹೊರಟಿದೆ. ಈ ರೀತಿಯ ಅನೇಕ ಬದಲಾವಣೆಗಳನ್ನು ತರಲಾಗಿದೆ. ಮುಸ್ಲಿಂ ಸಮುದಾಯದವರಿಗೆ ಅನ್ಯಾ ಯವಾಗಿದೆ. ಈ ಹಿಂದಿನಂತೆ ಕಾಯ್ದೆ ಮುಂದುವರಿಸಿಕೊಂಡು ಹೋಗಲು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಕಳೆದ ಮೂರು ವರ್ಷದಲ್ಲಿ 39 ಬಾಲ ಕಾರ್ಮಿಕರ ರಕ್ಷಣೆ : ಬೇಕಿದೆ ಇನ್ನಷ್ಟು ಬಿಗಿ ಕ್ರಮ!

ಮಂಡಳಿಯ ಪ್ರಮುಖರಾದ ಅಬ್ದುಲ್‌ ಖದೀರ್‌, ಗುರುನಾಥ ಗಡ್ಡೆ, ಡಾ.ಸಿ.ಆನಂದರಾವ್‌, ಕ್ಲೇ ಡಿಸೋಜಾ, ವಿಲ್ಸನ್‌ ಫರ್ನಾಂಡಿಸ್‌, ಫಾದರ್‌ ಡೆರ್ರಿಕ್‌, ಅಸೀಮ್‌ ಖಾನ್‌, ಜಗದೀಶ್ವರ ಬಿ., ಮುಹಮ್ಮದ್‌ ಅಮೀನ್‌ ನವಾಜ್‌, ಎಂ.ಎ.ಮುಕ್ತದೀರ್‌, ದೀಪ ನಂದಿ, ಅಸ್ಮಾ ಸುಲ್ತಾನ, ಸಂತೋಷ ಜೋಳದಾಪಕೆ, ವಿಠ್ಠಲದಾಸ ಪ್ಯಾಗೆ, ಮುಹಮ್ಮದ್‌ ನಿಜಾಮುದ್ದೀನ್‌ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...