ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ 2025-26ನೇ ಸಾಲಿನ ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಆರೋಗ್ಯ, ಸಾಹಿತ್ಯ, ಚಿತ್ರಕಲೆ, ಸಂಗೀತ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ, ಶಿಕ್ಷಣ ಸೇವಾ ರತ್ನ, ಶೇಕ್ ಫಾತಿಮಾ ಶಿಕ್ಷಣ ಸೇವಾ ರತ್ನ, ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯಾಧ್ಯಕ್ಷ ಸಂಗಮೇಶ ಖನ್ನಿನಾಯ್ಕರ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.

ಜನವರಿಯಲ್ಲಿ ಹಮ್ಮಿಕೊಳ್ಳಲಾಗುವ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಊರಾಗ ಏನ ಧಂದೆ ಇಲ್ಲಾ, ಶಾರದಾಗ ದುಡಿಯಾಕ ಹೋಗ್ಯಾನ!
ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ. ಆಸಕ್ತರು ಮನೆ ಸಂಖ್ಯೆ 19-2-243/1 ಆನಂದ ನಗರ, ಬೀದರ್-585401 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪಾಂಡುರಂಗ ಬೆಲ್ದಾರ್ (9449411557), ಸೂರ್ಯಕಾಂತ ಸಿಂಗೆ (9972684985), ಬಲವಂತರಾವ್ ರಾಠೋಡ್ (9482949135), ಕಲಾಲ್ ದೇವಿಪ್ರಸಾದ್ (9845605148), ಶಕೀಲ್ ಅಹಮ್ಮದ್ ಜಾಫ್ರಿ (8050420014) ಅಥವಾ ಸುವರ್ಣ ವಾಘಮಾರೆ (9535747581) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.





