ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಎಸ್ಎಸ್ಪಿ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.
ʼವಾರ್ಷಿಕ ₹2.5 ಲಕ್ಷದ ಒಳಗೆ ಆದಾಯ ಹೊಂದಿದ ಪಾಲಕರ ಮಕ್ಕಳು ಆದಾಯ, ಜಾತಿ ಪ್ರಮಾಣ ಪತ್ರ, ಸ್ಯಾಟ್ಸ್ ಸಂಖ್ಯೆ, ಎನ್ಪಿಸಿಇ ಲಿಂಕ್ ಹೊಂದಿದ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬಹುದುʼ ಎಂದು ಹೇಳಿದ್ದಾರೆ.
ಬಾಕಿ ಇರುವ ಬೀದರ್ ತಾಲ್ಲೂಕಿನ 53 ಶಾಲೆಗಳ ಮುಖ್ಯಶಿಕ್ಷಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಆಗಮಿಸಿ ಐಎನ್ಒ ಆಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʼಬೀದರ್ ತಾಲ್ಲೂಕಿನಲ್ಲಿ ನಡೆಯುತ್ತಿರುವ ವೃತ್ತಿಪರ ಕಾಲೇಜು, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಎಂಪಾವರ್ಮೆಂಟ್ ಅಧಿಕಾರಿ ನೋಂದಣಿಯಾಗದಿದ್ದಲ್ಲಿ ಆಯಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರಾತಿ ಸಾಧ್ಯವಾಗುವುದಿಲ್ಲ. ಹೀಗಾಗಿ ಎಲ್ಲ ಕಾಲೇಜುಗಳ ಮುಖ್ಯಸ್ಥರು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ ಎಂಪಾವರ್ಮೆಂಟ್ ಅಧಿಕಾರಿ ಆಗಿ ನೋಂದಣಿ ಮಾಡಿಸಿಕೊಳ್ಳಬೇಕುʼ ಎಂದು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8792103222, 9845944285 ಅಥವಾ 8197157805 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.





