ಬೀದರ್ | ಮಕ್ಕಳನ್ನು ಕೈ ಬೀಸಿ ಕರೆಯುವ ‘ಅರಿವು ಕೇಂದ್ರ’

Date:

ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ.

ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ, ಸಾಹಿತ್ಯ, ನಾಟಕ, ಇತಿಹಾಸ, ಆರೋಗ್ಯ, ಕೃಷಿ, ಶಿಕ್ಷಣ, ಪಠ್ಯ ಪುಸ್ತಕ, ವಿಜ್ಞಾನ, ಚರಿತ್ರೆ, ಕಾನೂನು, ಪಂಚಾಯತ್ ರಾಜ್, ಸ್ಪರ್ಧಾತ್ಮಕ ಪುಸ್ತಕಗಳು ಸೇರಿದಂತೆ ಒಟ್ಟಾರೆ 4 ಸಾವಿರ ಪುಸ್ತಕಗಳಿವೆ.

ಮಕ್ಕಳು ದಿನಪತ್ರಿಕೆ, ಪುಸ್ತಕ ಓದುವ ಹವ್ಯಾಸ ಬೆಳೆಸುವ ಜೊತೆಗೆ ಕಂಪ್ಯೂಟರ್, ಪೇಂಟಿಂಗ್ ತರಬೇತಿ ಸಹ ನೀಡಲಾಗುತ್ತದೆ. ದೇಸಿ ಕ್ರೀಡೆಗಳ ಝಲಕ್ ಸಹ ಇಲ್ಲಿ ನೋಡಲು ಸಿಗುತ್ತದೆ. ರೈತರ, ಕೂಲಿ ಕಾರ್ಮಿಕರ, ನರೇಗಾ ಕಾರ್ಮಿಕರ ಮಕ್ಕಳಿಗಾಗಿ ಈ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಮಕ್ಕಳಿಗೆ ಆಟ, ಪಾಠದ ಜೊತೆಗೆ ತಂತ್ರಜ್ಞಾನ ತರಬೇತಿ, ಐತಿಹಾಸಿಕ ಪರಂಪರೆ ಕಲಿಸುವ ಪ್ರಯತ್ನ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003749141
ಕಂಪ್ಯೂಟರ್‌ ಕಲಿಕೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು

ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೀದರ ಕೋಟೆ, ಕರೇಜ್, ಪಾಪನಾಶ ಕೆರೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಹಿತಿ ನೀಡಲಾಗಿದೆ. ಮಕ್ಕಳೆಲ್ಲರೂ ಅಲ್ಲೇ ವನಭೋಜನ ಸವಿದದ್ದು ವಿಶೇಷವಾಗಿತ್ತು.

’15ನೇ ಹಣಕಾಸು ಯೋಜನೆಯ ಆರ್‌ಡಿಪಿಆರ್‌ನ ಓದು ಬೆಳಕು ಯೋಜನೆಯಡಿ ಈ ಅರಿವು ಕೇಂದ್ರ ಸ್ಥಾಪಿಸಲಾಗಿದ್ದು. ಗ್ರಾಮೀಣ ಭಾಗದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಧ್ಯೇಯದೊಂದಿಗೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಹೇಳಿದರು.

ಇದನ್ನೂ ಓದಿ : ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

1003749142
ಆಟದಲ್ಲಿ ತೊಡಗಿರುವ ವಿದ್ಯಾರ್ಥಿಗಳು

ಅಲಿಯಾಬಾದ್ ಗ್ರಾಮ ಪಂಚಾಯಿತಿ ಪಿಡಿಒ ಶರತ್‌ಕುಮಾರ್ ಮಾತನಾಡಿ, ‘ಅರಿವು ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ದಿನನಿತ್ಯ ಸಾಕಷ್ಟು ಮಕ್ಕಳು ಇಲ್ಲಿಗೆ ಓದಲು ಬರುತ್ತಿರುವುದು ಕಂಡು ಖುಷಿ ತರಿಸಿದೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...