ಬೀದರ್ | ಔರಾದ ಪಟ್ಟಣ ಪಂಚಾಯತಿಗೆ ಒಲಿಯುವುದೇ ಪುರಸಭೆ ಭಾಗ್ಯ?

Date:

ಬೀದರ್ ಜಿಲ್ಲೆಯಲ್ಲಿ ಬೀದರ್ ಮತ್ತು ಬಸವಕಲ್ಯಾಣ ನಗರಸಭೆ ಹಗೂ ಹುಮನಾಬಾದ್, ಭಾಲ್ಕಿ, ಚಿಟಗುಪ್ಪ ಮತ್ತು ಹಳ್ಳಿಖೇಡ್(ಬಿ) ಪುರಸಭೆಗಳಿವೆ. ಆದರೆ, ತಾಲೂಕು ಕೇಂದ್ರ ಆಗಿರುವ ಔರಾದ ಇನ್ನೂ ಪಟ್ಟಣ ಪಂಚಾಯತಿ ಆಗಿಯೇ ಉಳಿದಿರುವುದು ವಿಪರ್ಯಾಸ.

ಔರಾದ ಕರ್ನಾಟಕದ ತುತ್ತ ತುದಿಯಲ್ಲಿರುವ ತಾಲೂಕು. ಔರಾದ ಪಟ್ಟಣದಿಂದ ಹತ್ತು ಕಿ.ಮೀ ದಾಟಿದರೆ ಅತ್ತ ಮಹಾರಾಷ್ಟ್ರ, ಇತ್ತ ತೆಲಂಗಾಣ ರಾಜ್ಯಗಳಿವೆ. ಹೀಗೆ ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡ ತಾಲೂಕು ಬೀದರ್‌ ಜಿಲ್ಲೆಯಲ್ಲಿಯೇ ಹಿಂದುಳಿತ ತಾಲೂಕೆಂಬ ಹಣೆಪಟ್ಟಿ ಕಟ್ಟಿಕೊಂಡಿದೆ.

ಈ ಹಿಂದೆ ಮಂಡಲ್ ಪಂಚಾಯತಿಗೆ ಒಳಪಟ್ಟಿದ್ದ ಔರಾದ ಸ್ಥಳೀಯ ಆಡಳಿತ, ನಂತರ ದಿನಗಳಲ್ಲಿ ಪಟ್ಟಣ ಪಂಚಾಯತಿ ಆಗಿ ಮೇಲ್ದರ್ಜೆಗೇರಿತು.‌ ಜನಸಂಖ್ಯೆಗೆ ಅನುಗುಣವಾಗಿ ಕಾಲಕ್ರಮೇಣ ಮೇಲ್ದರ್ಜೆಗೆ ಏರಬೇಕಾದ ಸ್ಥಳೀಯ ಆಡಳಿತ ಇನ್ನೂ ಹಾಗೇ ಉಳಿದಿರುವುದು ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯನ್ನು ತೋರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ಮೂಲಕ ಸ್ಥಳೀಯ ಸಂಸ್ಥೆಗಳು ಹುಟ್ಟಿಕೊಂಡವು. ಜನಸಂಖ್ಯೆಗೆ ಅನುಗುಣವಾಗಿ ಕಾಲಕ್ರಮೇಣ ಆಡಳಿತಗಳು ಬದಲಾಗಬೇಕೆಂಬ ನಿಯಮಗಳು ಇದ್ದರೂ, ಬದಲಾವಣೆ ಆಗದೇ ಇರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಅರ್ಹತೆ ಇದ್ದರೂ ಪುರಸಭೆಯಾಗಿ ಮೇಲ್ದರ್ಜೆಗೇರದೆ ಉಳಿದ ಜಿಲ್ಲೆಯ ಏಕೈಕ ಪಟ್ಟಣ ಪಂಚಾಯತಿ ಔರಾದ ಎಂಬಂತಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಬರೋಬ್ಬರಿ 840 ಕಿ.ಮೀ. ಹಾಗೂ ಬೀದರ್ ಜಿಲ್ಲಾ ಕೇಂದ್ರದಿಂದ 42 ಕಿ.ಮೀ. ದೂರವಿರುವ ಔರಾದ ಇತರೆ ತಾಲೂಕುಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಹಿಂದಿದೆ. ಔರಾದ ಪಟ್ಟಣ ಪಂಚಾಯತಿ ಹೇಳಿಕೊಳ್ಳುವಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಆಗಾಗ್ಗೆ ಪಟ್ಟಣದ ಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯೇ ಇದಕ್ಕೆ ಉದಾಹರಣೆ.

2011 ಜನಗಣತಿ ಪ್ರಕಾರ ಔರಾದ ಪಟ್ಟಣದ ಜನಸಂಖ್ಯೆ 19,849 ಇತ್ತು.‌ ಇದೀಗ 25,000ಕ್ಕೂ ಅಧಿಕ ದಾಟಿದೆ. ಈ ಹಿಂದೆ ಇದ್ದ 14 ವಾರ್ಡ್ ಸದಸ್ಯರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅಂದರೆ, ಪುರಸಭೆಗೆ ಬೇಕಾಗುವ ಎಲ್ಲ ಅರ್ಹತೆಯನ್ನು ಔರಾದ ಪಟ್ಟಣ ಪಂಚಾಯತಿ ಹೊಂದಿದೆ.‌ ಈ ಬಗ್ಗೆ ಎಲ್ಲ ಪ್ರಸ್ತಾವನೆ ಹಿಂದಿನ ಸರ್ಕಾರದ ಅವಧಿಯಲ್ಲಿ ಸಲ್ಲಿಸಲಾಗಿದೆ. ಆರ್ಥಿಕ ಮಾನ್ಯತೆ ಪಡೆಯದ ಕಾರಣ ಹಾಗೇ ಉಳಿದಿದೆ. ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರ ಮೇಲೆ ಒತ್ತಡ ಹೇರಿದರೆ ಪಟ್ಟಣದ ಜನರ ಕನಸು ಈಡೇರಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.

“ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕನಸಾಗಿಯೇ ಉಳಿದಿದೆ. ಇದೀಗ ಹೊಸ ಸರ್ಕಾರದ ಅವಧಿಯಲ್ಲಿ ಖಂಡಿತ ಆಗುತ್ತೆ, ಇನ್ನೊಮ್ಮೆ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕುಮಾರ್ ದೇಶಮುಖ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಇಚ್ಚಾಶಕ್ತಿ ತೋರುವರೇ ಇಬ್ಬರು ಸಚಿವರು

ಇಂದಿನ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಅಂದು ಔರಾದ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಔರಾದ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವೆ’ ಎಂದು ಭರವಸೆ ನೀಡಿದರು. ಆದರೆ, ನಂತರದ ದಿನಗಳಲ್ಲಿ ಇಚ್ಚಾಶಕ್ತಿ ತೋರಲಿಲ್ಲ.

ಕಳೆದ ಬಾರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಪಶು ಸಂಗೋಪನಾ ಸಚಿವರಾಗಿದ್ದ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ಜನರ ಬೇಡಿಕೆಗೆ ಸ್ಪಂದಿಸಿ ಕನಸು ಈಡೇರಿಸಬಹುದಿತ್ತು. ಆದರೆ, ಅವರೂ ಇಚ್ಚಾಶಕ್ತಿ ತೋರಲಿಲ್ಲ ಎನ್ನುತ್ತಾರೆ ಸ್ಥಳೀಯರು. ಇದೀಗ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದೆ. ಮತ್ತೊಮ್ಮೆ ಪೌರಾಡಳಿತ ಖಾತೆ ಬೀದರ್ ಜಿಲ್ಲೆಯವರಿಗೆ ಒಲಿದಿದೆ. ಈಗ ಬೀದರ್ ಶಾಸಕ ರಹೀಂ ಖಾನ್ ಪೌರಾಡಳಿತ ಸಚಿವರಾಗಿದ್ದಾರೆ. ಅಂದಿನ ಪೌರಾಡಳಿತ ಸಚಿವ ಈಶ್ವರ ಖಂಡ್ರೆಯವರು ಔರಾದ ಜನತೆಗೆ ನೀಡಿದ ಭರವಸೆಯನ್ನು ಇಂದಿನ ಪೌರಾಡಳಿತ ಸಚಿವ ರಹೀಂ ಖಾನ್ ಈಡೇರಿಸುವರೇ ಎಂಬುದು ಪಟ್ಟಣದ ಜನರ ನಿರೀಕ್ಷೆಯಾಗಿದೆ.

ಈ ಸುದ್ದಿ ಓದಿದ್ದೀರಾ?: ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ಸರ್ವರ್ ಸಮಸ್ಯೆ; ಹೊರರೋಗಿಗಳ ಆಕ್ರೋಶ

ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ತಾಲೂಕು ಕೇಂದ್ರವೂ ಅಲ್ಲ, ಜನಸಂಖ್ಯೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಬಲಾಬಲ ರಾಜಕೀಯ ನಾಯಕರ ಇಚ್ಚಾಶಕ್ತಿಯ ಕಾರಣದಿಂದ ನೇರವಾಗಿ ಪುರಸಭೆಯಾಗಿದೆ. ಆದರೆ, ಔರಾದ ತಾಲೂಕು ಕೇಂದ್ರವಾಗಿದ್ದರೂ ಸಹ ಪಟ್ಟಣ ಪಂಚಾಯತಿ ಆಗಿಯೇ ಉಳಿದಿರುವುದು ಜನರ ಬೇಡಿಕೆಗಳಿಗೆ ಬೆಲೆ ಇಲ್ಲದಂತಾಗಿದೆ. ಈಗಲಾದರೂ ಜಿಲ್ಲೆಯ ಉಸ್ತುವಾರಿ ಸಚಿವರು, ಪೌರಾಡಳಿತ ಸಚಿವರು ಇಚ್ಚಾಶಕ್ತಿ ತೋರಿ ಬಹುದಿನಗಳ ಕನಸು ಈಡೇರಿಸಬೇಕೆಂದು ಪಟ್ಟಣದ ಜನರ ಒತ್ತಾಯಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...