ಬೀದರ್ | ಮಸ್ಕಲ್ ಸರ್ಕಾರಿ ಶಾಲೆಯ ಮಕ್ಕಳಿಗೆ ಅವಿರತ ಟ್ರಸ್ಟ್‌ನಿಂದ ಉಚಿತ ನೋಟ್ ಬುಕ್ ವಿತರಣೆ

Date:

ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.

ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ ಹದಿನೆಂಟು ವರ್ಷಗಳಿಂದ ಬೆಂಗಳೂರಿನ ಅವಿರತ ಟ್ರಸ್ಟ್ ರಾಜ್ಯದ ನಾನಾ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಪ್ರತಿವರ್ಷ ನೋಟ್ ಪುಸ್ತಕಗಳನ್ನು ಪೂರೈಸಿ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದೇವೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಕ ದಿಲೀಪ ಚಂದಾ ಮಾತನಾಡಿ, ‘ಬಸವಾದಿ ಶರಣರ ದಾಸೋಹ ತತ್ವದಿಂದ ಅವಿರತ ಟ್ರಸ್ಟ್ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರಿ ಶಾಲೆಯಲ್ಲಿ ಓದುವುದು ಮಕ್ಕಳು ಕೀಳರಿಮೆ ಪಡದೆ ಉನ್ನತ ಗುರಿ ತಲುಪಲು ಪ್ರಯತ್ನಿಸಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಶಿವಪುತ್ರ ಮುಕ್ರಂಬೆ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರ, ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಿದೆ. ಸ್ವಂತ ಹಣದಲ್ಲಿ ಉಚಿತವಾಗಿ ನೋಟ್ ಬುಕ್ ವಿತರಿಸುವ ಅವಿರತ ಟ್ರಸ್ಟ್ ಕಾರ್ಯ ಶ್ಲಾಘನೀಯ ‘ ಎಂದು ನುಡಿದರು.

1004080883

ಸಾಮಾಜಿಕ ಕಾರ್ಯಕರ್ತರಾದ ವಿನೋದ್ ರತ್ನಾಕರ್, ಸುಭಾಷ ಲಾಧಾ, ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅವಿರತ ಟ್ರಸ್ಟ್ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಲಾಯಿತು. ಶಾಲೆಯ ಹಳೆ ವಿದ್ಯಾರ್ಥಿ ರಾಜಕುಮಾರ ಮೇತ್ರೆ ಅವರು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ ಮಾಡಿದರು.

ಇದನ್ನೂ ಓದಿ : ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಎಸ್‌ಡಿಎಂಸಿ ಅಧ್ಯಕ್ಷ ಶರಣಬಸವ ಚಿದ್ರೆ, ಗ್ರಾಮದ ಪ್ರಮುಖರಾದ ವಿಜಯಕುಮಾರ್ ಪಾಟೀಲ್, ಸತೀಶ್, ಸಂಗೀತಾ, ಮೀನಾಕ್ಷಿ, ಭಾಗ್ಯಶ್ರೀ, ಸಿದ್ರಾಮ್ ಪಾಟೀಲ್, ಈಶ್ವರ್ ಸ್ವಾಮಿ, ನಾಗಯ್ಯ ಸ್ವಾಮಿ, ಸಂತೋಷ್ ಚ್ಯಾರೆ, ಕೈಲಾಸ ಸ್ವಾಮಿ, ಶಿವು ಕೋಳಿ, ಭಗವಂತ, ಶಿಕ್ಷಕರಾದ ಸಂತೋಷ್, ಮಮತಾಜ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಅವಿರತ ಟ್ರಸ್ಟ್‌ನ ವೆಂಕಟ ಚಿಟ್ಟಾ, ಸಕ್ಪಾಲ್ ಕಾಂಬಳೆ ಪ್ರಾರ್ಥನೆ ನಡೆಸಿಕೊಟ್ಟರು. ಶಿಕ್ಷಕ ಬಸವರಾಜ ಪಾಂಚಾಳ ಸ್ವಾಗತಿಸಿದರು. ನವನಾಥ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...