ಬೀದರ್‌ | ಸಾಮಾಜಿಕ ನ್ಯಾಯದ ಹರಿಕಾರ ಬಾಬಾ ಸಾಹೇಬ್‌ ಅಂಬೇಡ್ಕರ್‌ : ಅಪ್ಪಗೆರೆ ಸೋಮಶೇಖರ್

Date:

ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನವನ್ನು ಮರೆತರೆ ಭಾರತ ದೇಶಕ್ಕೆ ಭವಿಷ್ಯವಿಲ್ಲ ಎಂದು ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ಹೇಳಿದರು.

ಔರಾದ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ʼ75 ವರ್ಷಗಳು ಕಳೆದರೂ ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಅನುಮಾನಗಳಿರುವುದು ವಿಪರ್ಯಾಸʼ ಎಂದು ಬೇಸರ ವ್ಯಕ್ತಪಡಿಸಿದರು.

ʼಎಲ್ಲ ಜಾತಿ, ವರ್ಗ ಮತ್ತು ಧರ್ಮದ ಜನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನದ ಋಣದ ಮಕ್ಕಳು ಎಂಬುದನ್ನು ಮರೆಯಕೂಡದು. ಡಾ.ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕ, ದಮನಿತರ ನಾಯಕ, ಅಸ್ಪ್ರಶ್ಯರ ನಾಯಕ ಎಂದು ನೋಡುತ್ತಿರುವುದು ದುರಂತವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆತ್ಮವಂಚನೆಯಿಂದ ಬದುಕುತ್ತಿರುವ ನಾವುಗಳು, ಅಂಬೇಡ್ಕರ್ ಅವರನ್ನು ಏಪ್ರಿಲ್ 14, ಡಿಸೆಂಬರ್ 6ಕ್ಕೆ ಸೀಮಿತಗೊಳಿಸುತ್ತಿದ್ದು, ನಿರ್ದಿಷ್ಟ ವ್ಯಾಪ್ತಿಯನ್ನು ಮೀರಿ ಅಂಬೇಡ್ಕರ್ ಅವರನ್ನು ನೋಡಬೇಕಿದೆ. ಸಾಮಾಜಿಕ ನ್ಯಾಯದಡಿ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸಿದ ಬಾಬಾ ಸಾಹೇಬರು ಎಲ್ಲ ಸಮುದಾಯದ ನಾಯಕ ಎಂಬುದು ಮೊದಲು ಮನಗಾಣಬೇಕಿದೆ. ಮಹಿಳಾ, ರೈತವಾದಿ, ಅರ್ಥಶಾಸ್ತ್ರಜ್ಞ ಅಂಬೇಡ್ಕರ್ ಅವರು ಈ ಜಗತ್ತು ಕಂಡ ಶ್ರೇಷ್ಠ ನಾಯಕʼ ಎಂದು ತಿಳಿಸಿದರು.

IMG 20250423 150516
ಪ್ರಾಧ್ಯಾಪಕ ಡಾ.ಅಪ್ಪಗೆರೆ ಸೋಮಶೇಖರ್ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಸಂಸದ ಸಾಗರ ಖಂಡ್ರೆ ಮಾತನಾಡಿ, ʼಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ನಮ್ಮೆಲ್ಲರಿಗೂ ಮೂಲಭೂತ ಹಕ್ಕು ದೊರೆತಿವೆ. ಅನೇಕರಿಗೆ ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಅರಿವು ಇಲ್ಲ. ನಾವು ಸಂವಿಧಾನ ಓದಿದಾಗ ಮಾತ್ರವೇ ನಮಗೆ ಕಾನೂನು ಮತ್ತು ನಮ್ಮ ಹಕ್ಕುಗಳ ಬಗ್ಗೆ ಹೆಚ್ಚಿನ ಜ್ಞಾನ ತಿಳಿದುಕೊಳ್ಳಲು ಸಾಧ್ಯ. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದಿಂದಲೇ ಅತ್ಯಂತ ಕಿರಿಯ ವಯಸ್ಸಿನವನಾದ ನಾನು ಸಂಸದನಾಗಲು ಸಾಧ್ಯವಾಗಿದೆʼ ಎಂದರು.

ಇದೇ ವೇಳೆ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಮಾಜಿ ಎಂಎಲ್ಸಿ ಕೆ. ಪುಂಡಲೀಕರಾವ್, ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ, ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ, ಸುನೀಲ ಕಸ್ತೂರೆ ಅವರಿಗೆ ಗೌರವಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಮಕ್ಕಳಿಗೆ ಹಾಗೂ ವೈದ್ಯಕೀಯ, ಐಐಟಿ, ಜೆಇಇ ಶಿಕ್ಷಣ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. 

ಈ ಸುದ್ದಿ ಓದಿದ್ದೀರಾ? 2014ರಿಂದ ಈವರೆಗೆ ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಭಯೋತ್ಪಾದಕರ ದಾಳಿಗಳು!

ಭಂತೆ ಧಮ್ಮಾನಂದ, ತಹಸೀಲ್ದಾರ ಮಹೇಶ ಪಾಟೀಲ, ಉತ್ಸವ ಸಮಿತಿ ಅಧ್ಯಕ್ಷ ಸುನೀಲಕುಮಾರ ದೇಶಮುಖ, ಮುಖಂಡರಾದ ಡಾ. ಭೀಮಸೇನ ಶಿಂಧೆ ಮಾರುತಿ ಬೌದ್ಧೆ, ರಾಮಣ್ಣ ವಡೆಯರ, ಅಮರ ಜಾಧವ, ಖ್ಯಾತ ಗಾಯಕ ಅಜೇಯ ದೇಹಾಡೆ, ಝರೇಪ್ಪಾ ವರ್ಮಾ, ಸೂರ್ಯಕಾಂತ ಸಿಂಗೆ, ಚೇತನ ಕಪ್ಪೆಕೇರಿ, ಧನರಾಜ ಮುಸ್ತಾಪೂರೆ, ಶರಣಪ್ಪ ಪಾಟೀಲ, ಸೋಪಾನರಾವ ಡೋಂಗರೆ, ರಾಜಕುಮಾರ ಡೊಂಗರೆ, ಶಿವಕುಮಾರ ಕಾಂಬಳೆ, ಪ್ರಕಾಶ ಭಂಗಾರೆ, ರತ್ನದೀಪ ಕಸ್ತೂರೆ, ಸುನೀಲ ಮಿತ್ರಾ, ಲಕ್ಷಣ ತುರೆ, ತುಳಸಿರಾಮ ಬೇಂದ್ರೆ, ಚಂದ್ರಕಾಂತ ನಿರ್ಮಳೆ, ಆನಂದ ಕಾಂಬಳೆ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...