ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

Date:

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ರಂಗೋಲಿ, ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ರಂಗೋಲಿ ಸ್ಪರ್ಧೆ ವಿಜೇತರಿಗೆ ₹10 ಸಾವಿರ ಪ್ರಥಮ, ₹6 ಸಾವಿರ ದ್ವಿತೀಯ ಹಾಗೂ ₹4 ಸಾವಿರ ತೃತೀಯ ಬಹುಮಾನ ನೀಡಲಾಗುವುದು. 15 ವರ್ಷ ಮೇಲ್ಪಟ್ಟವರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಸ್ಪರ್ಧಾಳುಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ಬಿ.ವಿ. ಭೂಮರಡ್ಡಿ ಕಾಲೇಜು ಆವರಣದಲ್ಲಿ ಕನಿಷ್ಠ 5 ಅಡಿ x 5 ಅಡಿಯ ರಂಗೋಲಿ ಬಿಡಿಸಬೇಕಾಗಲಿದೆʼ ಎಂದು ಹೇಳಿದ್ದಾರೆ.

ಆಸಕ್ತರು ಹೆಸರು ನೋಂದಣಿಗೆ ಗುಂಡಪ್ಪ ಬಳತೆ (9448407946), ಚಂದ್ರಕಾಂತ ಮಿರ್ಚೆ (9886599511), ಉಮೇಶ ಪಾಟೀಲ (8123197936) ಅಥವಾ ಜಯದೇವಿ ಯದಲಾಪುರೆ  (8105595123) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲ ಬಸವಣ್ಣ, ಶರಣರ ವೇಷಧಾರಿ ಸ್ಪರ್ಧೆ :

ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ವಿಜೇತರಿಗೆ ₹5 ಸಾವಿರ ಪ್ರಥಮ, ₹3 ಸಾವಿರ ದ್ವಿತೀಯ ಮತ್ತು ₹2 ಸಾವಿರ ತೃತೀಯ ಬಹುಮಾನ ಕೊಡಲಾಗುವುದು ಎಂದು ಹೇಳಿದ್ದಾರೆ.

4 ವರ್ಷದಿಂದ 8 ವರ್ಷದ ಒಳಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳು ಸಂಜೆ 4ಕ್ಕೆ ಬಸವ ಮುಕ್ತಿ ಮಂದಿರದಲ್ಲಿ ಸೇರಬೇಕು. ಅಲ್ಲಿಂದ ಬಿ.ವಿ. ಭೂಮರಡ್ಡಿ ಕಾಲೇಜಿನ ಬಸವ ಸಂಸ್ಕೃತಿ ಅಭಿಯಾನದ ಬಹಿರಂಗ ಸಭೆಯ ವೇದಿಕೆ ವರೆಗೆ ಪಥ ಸಂಚಲನದಲ್ಲಿ ಪಾಲ್ಗೊಳ್ಳಬೇಕು. ಬಹಿರಂಗ ಸಭೆಯಲ್ಲಿ ವಿಜೇತರ ಹೆಸರು ಪ್ರಕಟಿಸಿ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಆಸಕ್ತರು ಹೆಸರು ನೋಂದಣಿಗೆ ರಾಚಯ್ಯ ಸ್ವಾಮಿ (ಮೊ: 8123958468), ವಿಶ್ವನಾಥ ಕಣಜಿ (9731631287), ವಿಶ್ವನಾಥ ಬೆಮಳಗಿ (9342354500), ಬಸವರಾಜ ತಳವಾಡೆ (9900583351) ಅಥವಾ ಶಿವರಾಜ ಶ್ರೀಮಂಗಲೆ (9900605957) ಅವರನ್ನು ಸಂಪರ್ಕಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ಕೊಡಲಾಗುವುದು. ನಿರ್ಣಾಯಕರ ತೀರ್ಪು ಅಂತಿಮ ಎಂದು ಹೇಳಿದ್ದಾರೆ.

1004305240
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...