ಬೀದರ್‌ | ಬಸವಾದಿ ಶರಣರು ನಡೆ-ನುಡಿ ಸಿದ್ಧಾಂತ ವೀರರು : ವಿಜಯಶ್ರೀ ಬಶೆಟ್ಟಿ

Date:

ಹನ್ನೆರಡನೆಯ ಶತಮಾನದ ಬಸವಾದಿ ಶರಣರು ನುಡಿ ವೀರರು ಅಷ್ಟೇ ಅಲ್ಲದೆ ನಡೆ ಸಿದ್ಧಾಂತದ ವೀರರಾಗಿದ್ದರು ಎಂದು ಡಾ.ವಿಜಯಶ್ರೀ ಬಶೆಟ್ಟಿ ನುಡಿದರು

ಬೀದರ್‌ನ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ವಚನಾಮೃತ ಕನ್ನಡ ಸಂಘದಿಂದ ಈಚೆಗೆ ಆಯೋಜಿಸಿದ್ದ ಶಿವಶರಣೆ ಬೊಂತಾದೇವಿ ಹಾಗೂ ಶಿವಶರಣ ಮರುಳ ಶಂಕರದೇವ ಕುರಿತಾದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸಮಾಜದಲ್ಲಿ ರಾಜಪ್ರಭುತ್ವ, ಪ್ರಜಾಪ್ರಭುತ್ವ ನಂತರ ಈಗ ಪ್ರಜ್ಞಾಪ್ರಭುತ್ವ ಬರಬೇಕಾದ ಅವಶ್ಯಕತೆ ಇದೆʼ ಎಂದರು.

ಶಿವಶರಣೆ ಬೊಂತಾದೇವಿ ಅವರ ಬದುಕು-ಬರಹ ಕುರಿತು ಜಯದೇವಿ ಯದಲಾಪುರೆ ಅವರು ಮಾತನಾಡಿ, ʼ12ನೇ ಶತಮಾನದಲ್ಲಿ ಬಸವಣ್ಣವರ ಕೀರ್ತಿ ಕಾಶ್ಮೀರದ ರಾಜ ಮನೆತನದ ಬೊಂತಾದೇವಿಗೆ ತಲುಪಿ ರಾಜವೈಭವ ಬದಿಗೊತ್ತಿ ಕಲ್ಯಾಣದ ಕಡೆ ಮುಖ ಮಾಡಿದರುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೊಂತಾದೇವಿ ಅವರ ಮೂಲ ಹೆಸರು ʼನಿಜದೇವಿʼ ಎಂಬ ಹೆಸರು ಪಡೆದ ಬೊಂತಾದೇವಿ ಕಲ್ಯಾಣಕ್ಕೆ ಬಂದು ಶರಣ ಸಂಕುಲದೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ವಚನಗಳನ್ನು ರಚಿಸಿದರು. ಅವರು ಬರೆದ ಆರು ವಚನ ಮಾತ್ರ ಲಭ್ಯವಾಗಿವೆ. ಸಮಾನತೆಯ ಸಮಾಜದ ಕನಸು ಕಂಡಿದ್ದ ಅವರು ತಮ್ಮ ವಚನಗಳಲ್ಲಿ ಬೇಧ-ಭಾವ ತೊಡೆದು ಸಮಾನತೆ ಸಮಾಜದಿಂದ ನೆಮ್ಮದಿ ಕಾಣಲು ಸಾಧ್ಯವೆಂಬ ವಿಚಾರ ಮಂಡಿಸಿದರುʼ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಮಾತನಾಡಿ, ʼಶರಣ ಮರುಳಶಂಕರದೇವರು 35 ವಚನಗಳನ್ನು ರಚಿಸಿದ್ದಾರೆ. ಅವರು ಬಸವಣ್ಣನವರ ಮಹಾಮನೆಯಲ್ಲಿ ಬರುವ ಅತಿಥಿಗಳಿಗೆ ಉಣ ಬಡಿಸುವ ಕಾಯಕ ಮಾಡುತ್ತಿದ್ದರು. ಮರುಳು ಶಂಕರದೇವರ ಘನ ವ್ಯಕ್ತಿತ್ವವನ್ನು ಅಲ್ಲಮಪ್ರಭುಗಳಿಗೆ ಪರಿಚಯವಾದ ಬಳಿಕ ಅವರನ್ನು ಅನುಭವ ಮಂಟಪದ ಸದಸ್ಯರನ್ನಾಗಿಸಿದರುʼ ಎಂದು ಹೇಳಿದರು.

ಬರುವ ನವೆಂಬರ್‌ 22 ಮತ್ತು 23 ರಂದು ಬೀದರ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ʼವಚನ ಸಾಹಿತ್ಯೋತ್ಸವʼ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಿದ್ರಾಮಪ್ಪ ಮಾಸಿಮಾಡೆ ತಿಳಿಸಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಮುಖ್ಯ ಅತಿಥಿಗಾಳಗಿ ಭಾಗ್ಯಲಕ್ಷ್ಮಿ ಗುರುಮೂರ್ತಿ, ಸಿದ್ದಪ್ಪಾ ಜ್ಯಾಂತೆ ಹಾಗೂ ಕನ್ನಡ, ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ರೇಣುಕಾ ಎನ್.ಬಿ, ರೇಣುಕಾ ಮಳ್ಳಿ ಅವರು ವಚನ ಗಾಯನ ನಡೆಸಿಕೊಟ್ಟರು. ಶಿಕ್ಷಕ ಬಸವರಾಜ ಬಿರಾದಾರ ನಿರೂಪಿಸಿದರು. ಅಂಬಿಕಾ ಬಿರಾದಾರ ಸ್ವಾಗತಿಸಿದರು. ಶ್ರೀಕಾಂತ ಬಿರಾದಾರ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರವೀಣ ಮ್ಯೂಜಿಕ್ ಅಕಾಡೆಮಿಯ ಮಕ್ಕಳು ನಾಡಗೀತೆ ಹಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...