ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

Date:

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅಂಗವಾಗಿ ಎರಡು ದಿವಸ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು.

ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ʼಗಡಿಭಾಗವನ್ನು ಡಾ.ಬಸವಲಿಂಗ ಪಟ್ಟದ್ದೇವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಮತ್ತು ಅಧ್ಯಾತ್ಮಿಕವಾಗಿ ಬೆಳಗಿಸುವ ಕೆಲಸ ಮಾಡಿದ್ದಾರೆ. ಅವರ ಅಮೃತ ಮಹೋತ್ಸವ ಸವಿನೆನಪಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಿದ್ದು ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜ್ಯರಿಗೆ ಕೃತಜ್ಞತೆ ಸಲ್ಲಿಸಬೇಕುʼ ಎಂದು ಹೇಳಿದರು.

ʼಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಿತಿಯಿಂದ ಆ.23, 24ರಂದು ಎರಡು ದಿನ ʼಪೂಜ್ಯರು ನಡೆದು ಬಂದ ದಾರಿʼ ವಿಷಯದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ವಿವಿಧ ಗೋಷ್ಠಿಯಲ್ಲಿ ನಾಡಿನ ಸಾಹಿತಿ, ಚಿಂತಕರು, ಬುದ್ದಿಜೀವಿಗಳು, ಉಪನ್ಯಾಸಕರು ಭಾಗವಹಿಸಿ ವಿವಿಧ ವಿಷಯಗಳ ಮೇಲೆ ಬೆಳಕು ಚೆಲ್ಲಲ್ಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 21 at 5.50.27 PM

ಶನಿವಾರ (ಆ.23) ಬೆಳಿಗ್ಗೆ 10 ಗಂಟೆಗೆ ಪೂಜ್ಯರು ನಡೆದು ಬಂದ ದಾರಿ ರಾಷ್ಟ್ರೀಯ ವಿಚಾರ ಸಂಕಿರಣ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ತೆಲಂಗಾಣ ರಾಜ್ಯದ ಪಂಚಮಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಿಲಂಗಾ ವಿರಕ್ತ ಮಠದ ಸಂಗನ ಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸೂರ್ಯ ಫೌಂಡೇಶನ್ ಅಧ್ಯಕ್ಷ ಅನಂತ ಬಿರಾದಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ನಡೆಯುವ ʼಶ್ರೀಗಳ ಜೀವನ ಸಾಧನೆʼ ಕುರಿತು ಕಲಬುರಗಿ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಶಿವಗಂಗಾ ರುಮ್ಮಾ ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಸೋಮನಾಥ ಯಾಳವಾರ ಅಧ್ಯಕ್ಷತೆ ವಹಿಸುವರು.

ಮಧ್ಯಾಹ್ನ 3 ಗಂಟೆಗೆ ನಡೆಯುವ ʼಬಸವತತ್ವ ಸಾರ್ವಕಾಲಿಕತೆಗೊಳಿಸುವಲ್ಲಿ ಶ್ರೀಗಳ ಕೊಡುಗೆʼ ಗೋಷ್ಠಿಯಲ್ಲಿ ಧಾರವಾಡ ಪ್ರಗತಿಪರ ಚಿಂತಕ ಡಾ.ಸಿದ್ದನಗೌಡ ಪಾಟೀಲ್ ಉಪನ್ಯಾಸ ನೀಡಲಿದ್ದಾರೆ. ಹೈದರಾಬಾದ್ ಉಸ್ಮಾನಿಯಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಲಿಂಗಣ್ಣ ಗೊನಾಳ ಅಧ್ಯಕ್ಷತೆ ವಹಿಸುವರು. ಸಂಜೆ 5 ಗಂಟೆಗೆ ನಡೆಯುವ ʼಶ್ರೀಗಳ ಪ್ರಯತ್ನದ ಫಲಗಳು ಮತ್ತು ಬಸವ ಕನಸುಗಳುʼ ಗೋಷ್ಠಿಯಲ್ಲಿ ಕಲಬುರಗಿ ಪ್ರಗತಿಪರ ಚಿಂತಕ ಆರ್.ಕೆ.ಹುಡುಗಿ ಉಪನ್ಯಾಸ ನೀಡುವರು. ನಿವೃತ್ತ ಪ್ರಾಚಾರ್ಯ ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ್ ಅಧ್ಯಕ್ಷತೆ ವಹಿಸುವರು.

ಆ.24 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ʼಅಕ್ಷರ ಸಂತ ಡಾ.ಬಸವಲಿಂಗ ಪಟ್ಟದ್ದೇವರುʼ ಗೋಷ್ಠಿಯಲ್ಲಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕಿರಣ ಗಾಜನೂರು ಉಪನ್ಯಾಸ ನೀಡಲಿದ್ದಾರೆ. ಸಹಾಯಕ ಪ್ರಾಧ್ಯಾಪಕ ಡಾ.ವಿಕ್ರಮ ವಿಸಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ನಡೆಯುವ ʼಹಿರೇಮಠವನ್ನು ಬಸವ ಮಠವನ್ನಾಗಿಸಿದ ಪೂಜ್ಯರುʼ ವಿಷಯದ ಮೇಲೆ ಬೆಂಗಳೂರಿನ ಚಿಂತಕ ಡಾ.ವಾಸು ಎಚ್.ವಿ. ಮಾತನಾಡಲಿದ್ದಾರೆ. ಡಾ.ಗುರುಲಿಂಗಪ್ಪ ಧಬಾಲೆ ಅಧ್ಯಕ್ಷತೆ ವಹಿಸುವರು.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ʼಅಂದು ಮಧ್ಯಾಹ್ನ 3 ಗಂಟೆಗೆ ʼಅನಾಥ ಬಡಮಕ್ಕಳ ಬಾಳಿಗೆ ಬೆಳಕಾದ ಶ್ರೀಗಳುʼ ಗೋಷ್ಠಿಯಲ್ಲಿ ಕಲಬುರಗಿ ಸಾಹಿತಿ ಪ್ರಕಾಶ ಗಿರಿಮಲ್ಲನವರ ಉಪನ್ಯಾಸ ನೀಡುವರು. ಸಾಹಿತಿ ಡಾ.ಕಲ್ಯಾಣರಾವ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಯಂಕಾಲ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಬೀದರ್ ಬಸವಸೇವಾ ಪ್ರತಿಷ್ಠಾನದ ಡಾ.ಗಂಗಾಬಿಕಾ ಅಕ್ಕ ಸಾನ್ನಿಧ್ಯ ವಹಿಸುವರು. ಬೀದರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್.ಬಿರಾದಾರ್ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ದಿನೇಶ ಅಮೀನಮಟ್ಟು ಸಮಾರೋಪ ನುಡಿ ನುಡಿಯಲ್ಲಿದ್ದಾರೆʼ ಎಂದು ಶ್ರೀಗಳು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...