ಬೀದರ್‌ | ಬಸವಣ್ಣನವರೇ ಇಷ್ಟಲಿಂಗದ ಜನಕ : ಬಸವಲಿಂಗ ಪಟ್ಟದ್ದೇವರು

Date:

ಭಾಲ್ಕಿ ತಾಲ್ಲೂಕಿನ ಬೊಳೇಗಾಂವ ಗ್ರಾಮದಲ್ಲಿ ಈಚೆಗೆ ನಡೆದ ಧಡ್ಡೇಶ್ವರರ ಜಾತ್ರಾ ಮಹೋತ್ಸವದಲ್ಲಿ ಗೋರ್ಟಾ ಮಠದ ರಾಜಶೇಖರ ಶಿವಾಚಾರ್ಯರು ಇಷ್ಟಲಿಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ ಎಂಬ ಹೇಳಿಕೆ ನೀಡಿದ್ದು, ಅದು ಸತ್ಯಕ್ಕೆ ದೂರವಾದದ್ದು ಎಂದು ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

’12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ದೇವಾಲಯ ಸಂಸ್ಕೃತಿಯನ್ನು ಬಹಿಷ್ಕರಿಸಿ, ವಿನೂತನವಾಗಿರತಕ್ಕಂತಹ ಇಷ್ಟಲಿಂಗವನ್ನು ಎಲ್ಲರ ಕರಸ್ಥಲಕ್ಕೆ ನೀಡಿದರು. ಅದಕ್ಕಾಗಿ ಬಸವಣ್ಣನವರನ್ನು ಇಷ್ಟಲಿಂಗದ ಜನಕ ಎಂದು ಕರೆಯುತ್ತಾರೆ’ ಎಂದು ತಿಳಿಸಿದರು.

ʼಭಾರತೀಯ ಸಂಸ್ಕೃತಿಯಲ್ಲಿ ಶಿವಲಿಂಗ ಆರಾಧನೆ ಪುರಾತನವಾದದ್ದು. ಪೌರಾಣಿಕ ಶಿವನ ಪ್ರತೀಕವಾಗಿ ಶಿವಾಲಯಗಳಲ್ಲಿ ಸ್ಥಾವರ ಲಿಂಗದ ಸ್ಥಾಪನೆ ಮಾಡಲಾಗುತ್ತದೆ. ಭಾರತ ದೇಶದಲ್ಲಿ ಪ್ರಾಚೀನ ಶಿವಾಲಯಗಳಿವೆ. ಅವೆಲ್ಲ ಶಿವಾಲಯಗಳಲ್ಲಿ ಸ್ಥಾವರಲಿಂಗ ಸ್ಥಾಪಿಸಲಾಗಿದೆ. ಸ್ಥಾವರ ಲಿಂಗ ಪೂಜೆ ಮಾಡುವ ಪರಂಪರೆ ನಡೆದು ಬಂದಿದೆ. ಪ್ರವಾಸದಲ್ಲಿ ಪೂಜೆಗಾಗಿ ಸ್ಥಾವರಲಿಂಗದ ಸಣ್ಣ ರೂಪವನ್ನು ಜೊತೆಗೆ ಇಟ್ಟುಕೊಂಡು ಪೂಜಿಸುವ ಪರಂಪರೆ ಇದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಾಲಯಗಳಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಮಹಿಳೆಯರಿಗೆ ಅವಕಾಶ ಇರಲಿಲ್ಲ. ಅದಕ್ಕಾಗಿ 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಇಷ್ಟಲಿಂಗವನ್ನು ಎಲ್ಲರ ಕರಸ್ಥಲಕ್ಕೆ ನೀಡಿದರು. ಬಸವಯುಗದ ಹಾಗೂ ಬಸವೋತ್ತರ ಯುಗದ  ಅನೇಕ ಶರಣರ ನೂರಾರು ವಚನಗಳಲ್ಲಿ ಇದಕ್ಕೆ ಆಧಾರವಿದೆ. ಷಟಸ್ಥಲ ಜ್ಞಾನಿ ಚನ್ನಬಸವಣ್ಣನವರು ತಮ್ಮ ಒಂದು ವಚನದಲ್ಲಿ ʼಇಷ್ಟಲಿಂಗ ಬಸವಣ್ಣನವರಿಂದಲೇ ನಿರ್ಮಾಣವಾದದ್ದುʼ ಎಂದು ಸ್ಪಷ್ಟಪಡಿಸಿದ್ದಾರೆ.

“ʼಆದಿ ಬಸವಣ್ಣ, ಅನಾದಿ ಲಿಂಗವೆಂದೆಂಬರು ಹುಸಿ ಹುಸಿ, ಈ ನುಡಿಯ ಕೇಳಲಾಗದು, ಆದಿ ಲಿಂಗ, ಅನಾದಿ ಬಸವಣ್ಣನು. ಲಿಂಗವು ಬಸವಣ್ಣನ ಉದರದಲ್ಲಿ ಹುಟ್ಟಿತ್ತು, ಜಂಗಮವು ಬಸವಣ್ಣ ಉದರದಲ್ಲಿ ಹುಟ್ಟಿತ್ತು, ಪ್ರಸಾದವು
ಬಸವಣ್ಣನನುಕರಿಸಲಾಯಿತ್ತು. ಇಂತೀ ತ್ರಿವಿಧಕ್ಕೆ ಬಸವಣ್ಣನೆ ಕಾರಣನೆಂದರಿದೆನಯ್ಯಾ ಕೂಡಲಚೆನ್ನಸಂಗಮದೇವಾ” ಇಂತಹ ನೂರಾರು ವಚನಗಳ ಆಧಾರ ನೀಡಬಹುದು ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ʼಕನಕ ಯುವ ಪುರಸ್ಕಾರʼಕ್ಕೆ ರವೀಂದ್ರ ಲಂಜವಾಡಕರ್‌ ಆಯ್ಕೆ

ʼ12ನೇ ಶತಮಾನದಿಂದ ಇತ್ತೀಚಿನವರೆಗೆ ವಚನ ಸಾಹಿತ್ಯದ ಅಧ್ಯಯನ ನಡೆಸಿದ ಸಂಶೋಧಕರು ಬಸವಣ್ಣನವರಿಂದಲೇ ಇಷ್ಟಲಿಂಗ ಆವಿಷ್ಕಾರ ಆಯಿತ್ತು ಎಂದು ಒಮ್ಮತದಿಂದ ಒಪ್ಪಿಕೊಳ್ಳುತ್ತಾರೆ. ಈ ಸತ್ಯವನ್ನು ಅರಿಯದ ರಾಜಶೇಖರ ಶಿವಾಚಾರ್ಯರು ಹೇಳಿರುವ ನುಡಿಗಳು ಬಸವತತ್ವಕ್ಕೆ ಅಪಚಾರ ಬಗೆಯುತ್ತವೆ. ಅದಕ್ಕಾಗಿ ಅವರು ಇನ್ನು ಮುಂದೆಯಾದರೂ ಈ ರೀತಿಯ ಹೇಳಿಕೆ ನೀಡಿ ಬಸವಭಕ್ತರ ಭಾವನೆಗೆ ಧಕ್ಕೆ ತರಬಾರದುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...