ಬೀದರ್‌ | ರಾಜಸತ್ತೆ ಬದಿಗೊತ್ತಿ ಪ್ರಜಾಸತ್ತೆಯನ್ನು ಮುನ್ನೆಲೆಗೆ ತಂದ ಬಸವಣ್ಣ : ಬಸವರಾಜ ಬಲ್ಲೂರ್

Date:

ಬಸವಣ್ಣನವರ ವಚನಗಳು ಕುರುಡರು ಆನೆ ಮುಟ್ಟಿ ಅಂದಾಜಿಸಿದಂತಿವೆ ಎಂದು ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ನುಡಿದರು.

ಬೀದರ್‌ ನಗರದ ಆರ್‌ಆರ್‌ಕೆ ಪದವಿ ಕಾಲೇಜಿನಲ್ಲಿ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಇಂದಿಗೂ ಅವುಗಳ ಆಳ ಅಧ್ಯಯನ, ಅರ್ಥ ವಿವರಣೆಗೆ ನಿಲುಕದಂತಿವೆ. ಅಂದು ಚಾಲನೆಯಲ್ಲಿದ್ದ ರಾಜಸತ್ತೆಯನ್ನು ಬದಿಗೊತ್ತಿ ಮೊದಲ ಬಾರಿಗೆ ಪ್ರಜಾಸತ್ತೆಯನ್ನು ಮುನ್ನೆಲೆಗೆ ತಂದರು. ಈ ಕಾರಣಕ್ಕಾಗಿಯೇ ಕೆಳ ವರ್ಗದ ಮಹಿಳೆಯರೂ ವಚನ ರಚನೆಯಲ್ಲಿ ತೊಡಗಿಸಿಕೊಳ್ಳಲು, ಆಯ್ದಕ್ಕಿ ಲಕ್ಕಮ್ಮನಂಥವರು ಅಂದೇ ಭ್ರಷ್ಟಾಚಾರದ ನಿರ್ಮೂಲನೆಗೆ ಅಂತಃಶಕ್ತಿಯನ್ನು ತಂದುಕೊಳ್ಳಲು ಸಾಧ್ಯವಾಯಿತು. ಅಂತಹ ಶಕ್ತಿ ತುಂಬಿದವರೇ ಬಸವಣ್ಣನವರುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼತನ್ನ ಸಂಬಂಧಗಳನ್ನು ತಳ ಸಮುದಾಯದವರೊಂದಿಗೆ ಅಪವರ್ಗೀಕರಣಗೊಳಿಸಿಕೊಳ್ಳುತ್ತಾರೆ. ತನ್ನ ಹುಟ್ಟನ್ನೇ ನಿರಾಕರಿಸುತ್ತ, ಕೆಳ ವರ್ಗಕ್ಕೆ ಸೇರಿಸಿಕೊಳ್ಳುವ ಶಕ್ತಿ ಅವರಲ್ಲಿತ್ತು. ತನ್ನ ಜೀವನದುದ್ದಕ್ಕೂ ಉತ್ತಮ ಮನುಷ್ಯರ, ಉತ್ತಮ ಸಮಾಜದಲ್ಲಿ ಜಾತಿ, ಮತ, ವರ್ಗ, ವರ್ಣಗಳ ಭೇದಗಳಿರಬಾರದೆಂದು ನುಡಿದರು. ಬಸವ ಜಯಂತಿಯ ಆಚರಣೆ ಮಾಡುವುದು ಅಂದರೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರ್ಥ. ಬಸವ ಜಯಂತಿಯ ಉತ್ಸವ ಅಂದರೆ ದೀನ ದಲಿತರ, ಕಾಯಕ ಜೀವಿಗಳ, ಜನಪರ, ಜೀವಪರ ಜಗತ್ತಿನ ಉತ್ಸವವೇ ಆಗಿದೆʼ ಎಂದು ನುಡಿದರು.

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼ900 ನೂರು ವರ್ಷಗಳ ಹಿಂದೆಯೇ ಬಸವಣ್ಣನವರು ಅನುಭವ ಮಂಟಪವೆಂಬ ಪಾರ್ಲಿಮೆಂಟ್ ನಮಗೆ ಕೊಟ್ಟಿದ್ದಾರೆ. ಅಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಶಿಕ್ಷಣದ ವಿಷಯದಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರ್ಥಪೂರ್ಣವಾಗಿ ನಿಭಾಯಿಸಬೇಕುʼ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್‌ಆರ್‌ಕೆ ಶಿಕ್ಷಣ ಸಮಿತಿಯ ಅಧ್ಯಕ್ಷ ಪ್ರಫುಲ್ ಪಾಂಡೆ ವಹಿಸಿದ್ದರು. ಶರಣಪ್ಪ ದೇಶಮುಖ, ಧನರಾಜ ತಾಂಡೂರೆ, ಶ್ರೀಕಾಂತ ಪಾಟೀಲ, ಮನೋಜಕುಮಾರ ಕುಲಕರ್ಣಿ, ಗುರುನಾಥ ಅಕ್ಕಣ್ಷನವರು ಮುಖ್ಯ ಅತಿಥಿಗಳಾಗಿದ್ದರು. ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ಎಂ.ಮಚ್ಚೆ ಅವರು ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಂಡಯ್ಯ ಸ್ವಾಮಿ ಸ್ವಾಗತಿಸಿದರು. ತಾಲ್ಲೂಕು ಕಸಾಪದ ಉಪಾಧ್ಯಕ್ಷ ಜಗನ್ನಾಥ ಕಮಲಾಪುರೆ ನಿರೂಪಿಸಿದರು. ಗೌರವ ಕಾರ್ಯದರ್ಶಿ ಉಮೇಶ ಜಾಬಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...