ಬೀದರ್‌ | ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟ ಬೇಂದ್ರೆ : ಅನಂತ ಕೃಷ್ಣ ದೇಶಪಾಂಡೆ

Date:

ಕನ್ನಡ ನಾಡು ಕಂಡ ಒಬ್ಬ ಅಪರೂಪದ ಶಬ್ದ ಗಾರುಡಿಗ ದ.ರಾ. ಬೇಂದ್ರೆ ಅವರಾಗಿದ್ದು, ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟಿದ್ದರು ಎಂದು ಹಿರಿಯ ರಂಗಕರ್ಮಿ ಅನಂತ ಕೃಷ್ಣ ದೇಶಪಾಂಡೆ ನುಡಿದರು.

ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿರುವ ಮೂಡಲ ಬೆಳಕು-ಬೇಂದ್ರೆ ಜೀವನ ದರ್ಶನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇಂದ್ರೆ ಅವರ ಭೌತಿಕ ಮತ್ತು ಬೌದ್ಧಿಕ ವ್ಯಕ್ತಿತ್ವ ಅನಾವರಣಗೊಳಿಸಿದರು.

‌ʼಹಣೆಯಲ್ಲಿ ತಿಲಕ, ಕಣ್ಣಿಗೆ ಕನ್ನಡಕ, ತಲೆ ಮೇಲೆ ಟೋಪಿ, ಕೈದಾಗ ಛತ್ರಿ, ಜೊತೆಗೆ ಕೋಟು, ಪಂಚೆ ಹಾಕಿ ಥೇಟ್ ಬೇಂದ್ರೆ ಅವರಂತೆ ವೇಷ ತೊಟ್ಟು ಅವರ ಕಾವ್ಯಗಳು ತನ್ಮೂಲಕ ಹೇಳಿಕೊಟ್ಟ ಹಿರಿಯ ರಂಗಕರ್ಮಿ ಅನಂತ ಕೃಷ್ಣ ದೇಶಪಾಂಡೆ ಗಡಿ ಜನರಿಗೆ ಸಾಕ್ಷಾತ ದ.ರಾ ಬೇಂದ್ರೆ ಅವರ ಧಾಟಿಯಲ್ಲಿ ಮಾತನಾಡಿ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೇಂದ್ರೆ ಅವರು ಉತ್ಸಾಹದ ಚಿಲುಮೆಯಾಗಿ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮ ಮೂಡಿಸಬಲ್ಲ ಕವನಗಳು ರಚನೆಗೆ ಒತ್ತು ನೀಡಿದರು. ʼರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನʼ ಎಂಬ ಅರಿವು ಮೂಡಿದರು. ನರಬಲಿ ಕವನದಿಂದ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದ ಬೇಂದ್ರೆ ಕೆಲ ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದ್ದು, ಆ ಸಮಯದಲ್ಲಿ ‘ನಾನು ಬಡವಿ ಆತ ಬಡವ ಒಲವೇ ನಮ್ಮ ಬದುಕು’ ಎಂಬ ಕವಿತೆ ರಚಿಸಿದರುʼ ಎಂದರು.

WhatsApp Image 2025 10 13 at 5.21.18 PM 1
ಸಾಧಕರಾದ ಡಾ.ಶಿವಲಿಂಗ ಹೇಡೆ, ಡಾ.ಚಂದ್ರಕಾಂತ ಮೇತ್ರೆ, ಯುವರತ್ನ ಪ್ರಶಸ್ತಿ ಪುರಸ್ಕೃತ ಸುಧಾಕರ ಕೊಳ್ಳುರ್ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಲಾಯಿತು

ʼದೇಶ ಹಾಗೂ ಜನಸಾಮಾನ್ಯರ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಅವರು ಆಧ್ಯಾತ್ಮ ಹಾಗೂ ಕನ್ನಡದ ಬಗ್ಗೆ ಅತೀವ ಕಾಳಜಿ ಹೊಂದಿದ್ದರು. ತನ್ನ ʼನಾಕುತಂತಿʼ ಮೂಲಕ ಕನ್ನಡಕ್ಕೆ ಎರಡನೇ ಜ್ಞಾನಪೀಠ ಪ್ರಶಸ್ತಿ ದೊರೆಕಿಸಿಕೊಟ್ಟ ಬೇಂದ್ರೆ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆʼ ಎಂದು ಅಭಿಮಾನ ವ್ಯಕ್ತಪಡಿಸಿದರು.

ಕಸಾಪ ತಾಲ್ಲೂಕಾಧ್ಯಕ್ಷ ಬಿ.ಎಂ. ಅಮರವಾಡಿ ಮಾತನಾಡಿ, ʼಕನ್ನಡ ಮತ್ತು ಮರಾಠಿ ಸಂಸ್ಕೃತಿಯ ಕೊಂಡಿಯಾದ ಬೇಂದ್ರೆ ಅವರ ವಿಚಾರಗಳು ಸೌಹಾರ್ದತೆ, ಸಾಮರಸ್ಯಕ್ಕೆ ಸದಾ ಆದರ್ಶವಾಗಿವೆ. ಮಾತೃಭಾಷೆ ಮರಾಠಿಯಾಗಿದ್ದರೂ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಧೀಮಂತ ಕವಿ ನಮ್ಮ ನೆಚ್ಚಿನ ಬೇಂದ್ರೆ ಅಜ್ಜʼ ಎಂದರು.

ಕಸಾಪ ಜಿಲ್ಲಾ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಪಿಎಚ್‌ಡಿ ಪದವಿ ಹೊಂದಿರುವ ಡಾ.ಶಿವಲಿಂಗ ಹೇಡೆ, ಡಾ.ಚಂದ್ರಕಾಂತ ಮೇತ್ರೆ, ಯುವರತ್ನ ಪ್ರಶಸ್ತಿ ಪುರಸ್ಕೃತ ಸುಧಾಕರ ಕೊಳ್ಳುರ್ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕು. ಆರಾಧ್ಯ ಅಮರವಾಡಿ ಕುರುಡು ಕಾಂಚಾಣಾ ಗೀತೆ ಪ್ರಸ್ತುತಪಡಿದಳು. ರೇಣುಕಾಸ್ವಾಮಿ ಬೇಂದ್ರೆ ಕುರಿತು ಕವನ ವಾಚನ ಮಾಡಿದರು.

ಇದನ್ನೂ ಓದಿ : ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆತ ಪ್ರಕರಣ : ದಲಿತ ಸೇನೆ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಆರ್.ಆರ್.ಕೆ ಸಮಿತಿ ಸದಸ್ಯ ಬಸವಕುಮಾರ್ ಮೀಸೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೀಲಕುಮಾರ್ ದೇಶಮುಖ, ಕಾಲೇಜು ಪ್ರಾಚಾರ್ಯೆ ಡಾ.ಪ್ರೇಮಾ ಹೂಗಾರ, ಕನ್ನಡಪರ ಹೋರಾಟಗಾರ ಬಸವರಾಜ ಶೆಟಕಾರ, ಶಿವಶಂಕರ ಟೋಕರೆ, ಡಾ.ವೈಜಿನಾಥ ಬುಟ್ಟೆ, ಗುರುನಾಥ ದೇಶಮುಖ, ಮಲ್ಲಿಕಾರ್ಜುನ ಟಂಕಸಾಲೆ, ಅಂಬಾದಾಸ ನೆಳಗೆ, ಅಮರಸ್ವಾಮಿ ಸ್ಥಾವರಮಠ, ಗೋವಿಂದ ಪಾಟೀಲ್, ಬಾಲಾಜಿ ಹಲಬರ್ಗೆ, ಉತ್ತಮ, ಸಿಕಂದರ್ ಚವ್ಹಾಣ, ತುಳಸಿರಾಮ ಮಾನೆ, ಕೈಲಾಸಪತಿ ಕೇದಾರೆ, ರವಿ ಡೋಳೆ ಸೇರಿದಂತೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...