ಬೀದರ್‌ | ಸೈಬರ್ ವಂಚನೆ ಬಗ್ಗೆ ಎಚ್ಚರವಹಿಸಿ : ಪ್ರೊ.ಬಿ.ಎಸ್.ಬಿರಾದಾರ್

Date:

ಇಂದಿನ ಡಿಜಿಟಲ್ ಯುಗದ ವ್ಯವಹಾರದಲ್ಲಿ ಸೈಬರ್ ವಂಚನೆ ಹಾಗೂ ಮೋಸಗಳು ನಿರಂತರವಾಗಿ ನಡೆಯುತ್ತಿದ್ದು, ಇದರ ಬಗ್ಗೆ ಹೆಚ್ಚು ಎಚ್ಚರವಹಿಸಿ, ಜನಸಾಮಾನ್ಯರು ಜಾಗೃತಗೊಳ್ಳಬೇಕಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ತಿಳಿಸಿದರು.

ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ʼಡಿಜಿಟಲ್ ತಂತ್ತಜ್ಞಾನ ಹಾಗೂ ಸೈಬರ್ ಸೆಕ್ಯೂರಿಟಿ ಅರಿವುʼ ಹಮ್ಮಿಕೊಂಡಿದ್ದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಪ್ರತಿದಿನ ಎಲ್ಲಾದರೂ ಒಂದು ಕಡೆ ಸೈಬರ್ ಅಪರಾಧಗಳು ಜರುಗುತ್ತಲೇ ಇವೆ. ವಂಚಕರು ವಿನೂತನ ತಂತ್ರಜ್ಞಾನದಿಂದ ಜನರಿಗೆ ಮೋಸ ಮಾಡುತ್ತಿದ್ದಾರೆʼ ಎಂದರು.

ಭಾಲ್ಕಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಶಿವಾನಂದ ಪವಾಡಶೆಟ್ಟಿ ಮಾತನಾಡಿ, ʼವ್ಯಕ್ತಿಗಳ ವೈಯಕ್ತಿಕ ಮಾಹಿತಿ ಅವರಿಗೆ ಗೊತ್ತಿಲ್ಲದಂತೆಯೇ ವಂಚಕರಿಗೆ ಸುಲಭವಾಗಿ ದೊರೆಯುತ್ತಿರುವುದು ದುರಂತವಾಗಿದೆ. ಪ್ರತಿಯೊಬ್ಬರು ತಮ್ಮ ಡಿವೈಸ್‍ಗಳನ್ನು ಅತ್ಯಂತ ಜಾಗೃತಿ ವಹಿಸಿ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮೊಬೈಲ್ ಬಳಕೆಯ ಸಂದರ್ಭದಲ್ಲೂ ಸಹ ಸದಾ ಎಚ್ಚರ ವಹಿಸಬೇಕಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಲ್ಕಿ ಗ್ರಾಮೀಣ ಪೊಲೀಸ್ ವೃತ್ತ ನಿರೀಕ್ಷಕ ಗುರುಪಾದ ಬಿರಾದಾರ ಮಾತನಾಡಿ, ʼವಾಟ್ಸ್‌ಆ್ಯಪ್‌, ಫೇಸ್‍ಬುಕ್, ಟ್ವಿಟರ್, ಇನ್ಸ್ಟಾಗ್ರಾಂ ಬಳಕೆದಾರರು ಯಾವುದೋ ಗ್ರೂಪಿಗೆ ಅಡ್ಮಿನ್ ಆಗಿದ್ದರೆ ಆ ಗ್ರೂಪಿಗೆ ಅಪರಾಧದ ಅಂಶಗಳು ಹರಿದಾಡಿದರೆ ಅದರ ಅಡ್ಮಿನ್ ಅವರನ್ನು ಜವಾಬ್ದಾರರಾಗಿ ಮಾಡಲಾಗುತ್ತದೆ. ವಂಚಕರಿಂದ ಫೇಕ್‍ಕಾಲ್, ಹನಿಟ್ರ್ಯಾಪ್, ವಿಡಿಯೋ ಕಾಲ್, ಓಟಿಪಿ ಬಳಕೆ ಹಾಗೂ ಎಟಿಎಮ್ ಮೋಸದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದಿನ ಆಧುನಿಕ ಯುಗದಲ್ಲಿ ಇವುಗಳ ನಿಯಂತ್ರಣ ತುರ್ತಾಗಿದೆ. ಇಲ್ಲದಿದ್ದರೆ ಅಮಾಯಕರು ಮೋಸಗಾರರ ವಂಚನೆಗೆ ಒಳಗಾಗುತ್ತಾರೆʼ ಎಂದರು.

ʼಯಾರೇ ಮೋಸಕ್ಕೆ ಒಳಗಾದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲೆಯಲ್ಲಿನ ಸೈಬರ್ ಅಪರಾಧ ಕೇಂದ್ರಕ್ಕೆ ದೂರು ಸಲ್ಲಿಸಬಹುದು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಕೆ ಮಾಡುವಾಗ ಜಾಗೃತರಾಗಿರಬೇಕು. ಸುಳ್ಳು ಕರೆಗಳಿಗೆ ಮೋಸ ಹೋಗದಂತೆ ನಿಗಾವಹಿಸಬೇಕುʼ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಂಸ್ಕೃತಿಕ ಅಧ್ಯಯನವು ಆಧುನಿಕ ಸಂಶೋಧನೆಯ ಭಾಗ : ದುಶಾನ್ ಡೀಕ್

ರಾಷ್ಟ್ರೀಯ ಮಾಹಿತಿ ಕೇಂದ್ರದ ಕೆ.ಶ್ರೀನಿವಾಸ, ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶಾಂತಲಿಂಗ ಸಾವಳಗಿ, ನಾಗಭೂಷಣ ಕಮಠಾಣೆ, ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯಕ್‌, ಕುಲಸಚಿವೆ(ಆಡಳಿತ) ಸುರೇಖಾ, ಶಿಕ್ಷಣ ನಿಕಾಯದ ಡೀನ್ ಡಾ.ಮಲ್ಲಿಕಾರ್ಜುನ ಕನಕಟ್ಟೆ, ವಾಣಿಜ್ಯ ಹಾಗೂ ನಿರ್ವಹಣಾ ನಿಕಾಯದ ಡೀನ್ ಡಾ.ಶರಣಪ್ಪ ಮಲಗೊಂಡ, ಧನ್ನೂರಾ ಪೊಲೀಸ್ ಉಪನಿರೀಕ್ಷಕ ವಿಶ್ವರಾಧ್ಯ ಹಾಗೂ ಬೀದರ ಜಿಲ್ಲಾಧಿಕಾರಿಗಳ ಕಛೇರಿಯ ಅಜಿತಕುಮಾರ, ಭರತರಾಜ್ ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...