ಬೀದರ್‌ | ಬಸವ ಧರ್ಮಪೀಠ ಒಡೆಯಲು ಭಾಲ್ಕಿ ಶ್ರೀ ಮುಖ್ಯ ಕಾರಣ : ಚನ್ನಬಸವಾನಂದ ಸ್ವಾಮೀಜಿ

Date:

ಲಿಂಗಾನಂದ ಸ್ವಾಮೀಜಿ ಹುಟ್ಟು ಹಾಕಿರುವ ಬಸವ ಧರ್ಮಪೀಠವನ್ನು ಒಡೆಯಲು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಮುಖ್ಯ ಕಾರಣರು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧಕ್ಷ್ಯ ಚನ್ನಬಸವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಬೀದರ್‌ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼರಂಭಾಪುರಿ ಶ್ರೀಗಳ ದಸರಾ ದರ್ಬಾರ ವಿರೋಧಿಸಲು ನಮಗೆ ಆಹ್ವಾನಿಸುವ ಭಾಲ್ಕಿ ಶ್ರೀಗಳು, ಬಸವ ಸಂಸ್ಕೃತಿ ಅಭಿಯಾನಕ್ಕೆ ನಮ್ಮನ್ನು ಕರೆಯುವುದಿಲ್ಲ. ಇವರ ದ್ವಂದ್ವ, ತುಷ್ಠೀಕರಣ ನೀತಿಗೆ ನಮ್ಮ ವಿರೋಧವಿದೆʼ ಎಂದರು.

ಕೂಡಲ ಸಂಗಮ ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರನ್ನು ಪದೇ ಪದೇ ಭಾಲ್ಕಿ ಹಿರೇಮಠಕ್ಕೆ ಕರೆಸಿಕೊಂಡು ಹಿರಿಯ ಮತ್ತು ಕಿರಿಯ ಸ್ವಾಮೀಜಿಗಳು ಕಿವಿಯೂದುವ ಕೆಲಸ ಮಾಡುತ್ತಿದ್ದು, ಇದನ್ನು ಕೈಬಿಡಬೇಕು. ನೀವು ಹಿರಿಯರು ಎನ್ನುವ ಕಾರಣಕ್ಕೆ ನಿಮಗೆ ಗೌರವ ಕೊಡುತ್ತಿದ್ದೇವೆ. ಭಾಲ್ಕಿ ಶ್ರೀಗಳು ಬಸವ ಧರ್ಮಪೀಠ ಒಡೆಯುವ ಕೆಲಸ ಕೈಬಿಡದಿದ್ದರೆ ಭಾಲ್ಕಿ ಹಿರೇಮಠದ ಮುಂದೆ ಉಗ್ರ ಹೋರಾಟ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 11, 12ರಂದು 4ನೇ ಸ್ವಾಭಿಮಾನಿ ಕಲ್ಯಾಣ ಪರ್ವ:

ಅಕ್ಟೋಬರ್ 11 ಹಾಗೂ 12 ರಂದು ಬಸವಕಲ್ಯಾಣದ ಹೊರವಲಯದಲ್ಲಿರುವ ಸಸ್ತಾಪುರ ಬಂಗ್ಲಾದಲ್ಲಿರುವ ಎಂ.ಎಂ.ಬೇಗ್ ಸಭಾಮಂಟಪದಲ್ಲಿ 4ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ʼಕಳೆದ ಮೂರು ವರ್ಷಗಳಿಂದ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಚರಿಸಿಕೊಂಡು ಬರುತ್ತಿದ್ದು ಈ ವರ್ಷ ಸಹ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ನಾನಾ ರಾಜ್ಯಗಳಿಂದ ಸುಮಾರು 255 ಸಾವಿರ ಬಸವ ಭಕ್ತರುಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆʼ ಎಂದು ಮಾಹಿತಿ ನೀಡಿದರು.

ʼಹೊರಗಿನಿಂದ ಬರುವ ಭಕ್ತರಿಗೆ ವಸತಿ ಹಾಗೂ ಪ್ರಸಾದ ವ್ಯವಸ್ಥೆ ಇರುತ್ತದೆ. ಆದ್ದರಿಂದ ಅರ್ಥಪೂರ್ಣ ಹಾಗೂ ಭಕ್ತಿಭಾವದಿಂದ ಕೂಡಿರುವ ನಾಲ್ಕನೇ ಸ್ವಾಭಿಮಾನಿ ಕಲ್ಯಾಣ ಪರ್ವದಲ್ಲಿ ಬಸವಾನುಯಾಯಿಗಳು, ಬಸವಭಕ್ತರು, ಬಸವ ನಿಷ್ಠರು, ಬಸವ ತತ್ವ ಪ್ರಚಾರಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಕಳೆ ಹೆಚ್ಚಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ಇದನ್ನೂ ಓದಿ : ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ, ಲಿಂಗಾಯತ ಧರ್ಮ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ ಹಾಗೂ ಪ್ರಮುಖರಾದ ಬಸವಂತರಾವ ಬಿರಾದಾರ, ಮಲ್ಲಿಕಾರ್ಜುನ ಜೈಲರ್, ಗಿರಿಜಮ್ಮ ಧಾರವಾಡ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...