ಬೀದರ್‌ | ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ : ಸಚಿವ ಈಶ್ವರ ಖಂಡ್ರೆ

Date:

ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ, ಏನೂ ಹೇಸಲು ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಮಿಷ ಒಡ್ಡುತ್ತಿರುವ ವಿಚಾರಕ್ಕೆ ಮಾತನಾಡಿದ ಅವರು, ʼಅಧಿಕಾರದ ದಾಹಕ್ಕಾಗಿ ಏನೂ ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ಹಿಂದೆ 17 ಜನ ಶಾಸಕರನ್ನು ಖರೀದಿಸಿದ್ದು ಎಲ್ಲರಿಗೂ ಗೊತ್ತಿದೆ. ಇದಕ್ಕಿಂತ ದೊಡ್ಡ ಪುರಾವೆ ಬೇಕಾ ಎಂದು ಪ್ರಶ್ನಿಸಿದರು.

ʼಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಕೊಡಬೇಕು. ಮಂತ್ರಿಯಾಗಲು 500 ಕೋಟಿ ರೂ. ಕೊಡಬೇಕು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼವಕ್ಫ್ ವಿವಾದ ಹುಟ್ಟು ಹಾಕಿದ್ದೇ ಬಿಜೆಪಿಯವರು, ಜನರಿಗೆ ಮೊದಲು ನೋಟಿಸ್ ನೀಡಿದ್ದು ಅವರೇ. ಈಗ ಅವರೇ ಆರೋಪ ಮಾಡುತ್ತಾರೆ. ಕಾಂಗ್ರೆಸ್‌ನವರು ನೋಟಿಸ್‌ ಕೊಟ್ಟಿದ್ದಾರೆ ಎಂದು ತೀರ್ಪು ನೀಡುವವರು ಬಿಜೆಪಿಯವರೇ. ಇದನ್ನೂ ಜನ ಅರ್ಥ ಮಾಡಿಕೊಳ್ಳುತ್ತಾರೆ. ಬಿಜೆಪಿ ಪಕ್ಷದ ಮನೆಗೆ ನೂರು ಬಾಗಿಲುಗಳು ಆಗಿವೆ. ಪಶ್ಚಾತ್ತಾಪಕ್ಕೆ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿದ್ದಾರೆʼ ಎಂದು ಟೀಕಿಸಿದರು.

ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಪಿಎಲ್‌ ಕಾರ್ಡ್ ಕೊಡಬೇಕು ಎಂಬ ನಿಯಮವಿದೆ. ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದು ಖಂಡ್ರೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

‌ಸರ್ಕಾರಿ ನೌಕರರು, ಸಾಹುಕಾರರು, ತೆರಿಗೆ ಪಾವತಿಸುವವರೂ ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಅಂಥವರ ಕಾರ್ಡ್‌ ರದ್ದಾಗಲಿವೆ. ಸರ್ಕಾರ ಅರ್ಹರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...