ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ: ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ

Date:

ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್‌) ನಡೆದಿರುವ ಅಕ್ರಮ, ಅವ್ಯವಸ್ಥೆಯನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಿ ಆಸ್ಪತ್ರೆಗೆ ಹೊಸ ಕಾಯಕಲ್ಪ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಈ ಸಂಬಂಧ ʼಬ್ರಿಮ್ಸ್‌ನ ಅಕ್ರಮಗಳ ತನಿಖೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಪತ್ರ ಬರೆದಿರುವ ಅವರು, ʼಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಇತ್ತೀಚೆಗೆ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಿದ್ದು, ಆಸ್ಪತ್ರೆಯ ಅವ್ಯವಸ್ಥೆ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇದು ಸರ್ಕಾರವನ್ನು ಮತ್ತು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನನ್ನು ಮುಜುಗರಕ್ಕೀಡು ಮಾಡುತ್ತಿದೆʼ ಎಂದು ತಿಳಿಸಿದ್ದಾರೆ.

ʼಮಳೆ ಬಂದಾಗ ಆಸ್ಪತ್ರೆಯ ನೆಲದಿಂದ ನೀರಿನ ಬುಗ್ಗೆ ಉಕ್ಕುತ್ತದೆ. ಈ ಬಗ್ಗೆ ನಾನು ಲಿಖಿತ ಸೂಚನೆ ನೀಡಿದ್ದರೂ ದುರಸ್ತಿ ಆಗಿಲ್ಲ. ಜೊತೆಗೆ ಇಲ್ಲಿ ನಿರ್ಲಕ್ಷ್ಯವೂ ಇದೆ. ಕಳೆದ ಕೆಲವು ತಿಂಗಳ ಹಿಂದೆ ನೇಮಕಾತಿ ಪ್ರಕ್ರಿಯೆಯ ಯಾವುದೇ ನಿಯಮ ಪಾಲಿಸದೆ, ಸರ್ಕಾರದ ಪರವಾನಗಿ ಪಡೆಯದೆ, ಸಂದರ್ಶನವನ್ನೂ ನಡೆಸದೆ ನೇಮಕಾತಿ ಮಾಡಲಾಗಿದ್ದ 40ಕ್ಕೂ ಹೆಚ್ಚು ತಜ್ಞ ವೈದ್ಯರಿಗೆ ವೇತನ ನೀಡದೆ ವಜಾ ಮಾಡಲಾಗಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳ ರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಂತಾಗಿದೆʼ ಎಂದು ಸಚಿವರು ನಡವಳಿಯಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬ್ರಿಮ್ಸ್ ಆಸ್ಪತ್ರೆಯಲ್ಲಿ ಔಷಧ ಖರೀದಿಯಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸರ್ಕಾರಿ ಆಸ್ಪತ್ರೆಗಳು ಬಡ ರೋಗಿಗಳ ಪಾಲಿಗೆ ಆಶಾಕಿರಣವಾಗಬೇಕು. ಆದರೆ‌, ಬ್ರಿಮ್ಸ್ ನಿರ್ದೇಶಕ ಶಿವಕುಮಾರ್ ಶೆಟಕಾ‌ರ ಮತ್ತು ಇತರರ ಮೇಲೆ ಗುರುತರ ಆರೋಪಗಳಿದ್ದು, ಇವರ ಕರ್ತವ್ಯಲೋಪ, ನಿರ್ಲಕ್ಷ್ಯದಿಂದಾಗಿ ರೋಗಿಗಳು ನರಳುವಂತಾಗಿದೆʼ ಎಂದಿದ್ದಾರೆ.

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ʼಬ್ರಿಮ್ಸ್‌ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಂಡು, ಆದಷ್ಟು ಶೀಘ್ರದಲ್ಲಿ ಆಸ್ಪತ್ರೆಗೆ ಸಂಪೂರ್ಣ ಕಾಯಕಲ್ಪ ನೀಡಿ, ಸಮಸ್ಯೆಗಳನ್ನು ಪರಿಹರಿಸಿ ಶ್ರೀಸಾಮಾನ್ಯರಿಗೆ ಉತ್ತಮ ಮತ್ತು ಗುಣಮಟ್ಟದ ಆರೋಗ್ಯ ಸೇವೆ ದೊರಕುವಂತೆ ಮಾಡಬೇಕುʼ ಎಂದು ಸಚಿವ ಈಶ್ವರ ಖಂಡ್ರೆ ಅವರು ನಡವಳಿ ಪತ್ರದ ಮೂಲಕ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...