ಬೀದರ್ | ಸಮಾನತೆ ಪ್ರತಿಪಾದಿಸಿದ ಬುದ್ಧ, ಬಸವ, ಅಂಬೇಡ್ಕರ್ : ವಿಠ್ಠಲದಾಸ ಪ್ಯಾಗೆ

Date:

ಜಗತ್ತಿಗೆ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಸಮಾನತೆ ಸಾರಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಹೇಳಿದರು.

ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡ ಸಮತೆಯ ಮಾರ್ಗದಲ್ಲಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮತೆ ಸಾಧ್ಯವಾದರೆ ಪ್ರಪಂಚದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂಬುದನ್ನು ಅರಿಯಬೇಕಿದೆ, ಈ ನಿಟ್ಟಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆ ಪ್ರಸ್ತುತ ಎನಿಸುತ್ತವೆ. ಬುದ್ಧನ ಶಾಂತಿ ಸಂದೇಶ, ಬಸವಣ್ಣನವರ ಸಮಾನತೆ ಕಾಯಕ ಮತ್ತು ದಾಸೋಹ ಹಾಗೂ ಅಂಬೇಡ್ಕರ್ ಅವರ ಸಮ ಸಮಾಜದ ಪರಿಕಲ್ಪನೆ ಹಿಂದೆಂದಿಗಿಂತಲೂ ಇಂದು ಹೆಚ್ಚು ಅವಶ್ಯಕವಾಗಿವೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬುದ್ಧ, ಬಸವ, ಅಂಬೇಡ್ಕರ್ ಅವರ ವೈಚಾರಿಕ ನಿಲುವು ಭ್ರಮೆಯ ಲೋಕದಿಂದ ವಾಸ್ತವ ಲೋಕದ ಕಡೆಗೆ ಕರೆದೊಯ್ಯುತ್ತವೆ, ಹಾಗಾಗಿ ಈ ಮೂವರ ಚಿಂತನೆಗಳು ಪಾಲಿಸಿದರೆ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ’ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಬಿ.ಎಂ ಅಮರವಾಡಿ ಮಾತನಾಡಿ, ‘ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳಿಂದ ಬದುಕು ಕಟ್ಟಿಕೊಳ್ಳಬೇಕಿದೆ, ಅವರು ಬೆಳಗಿದ ದೀಪ ಸೀಮಾತೀತ. ಬುದ್ಧ ಬಸವ ಅಂಬೇಡ್ಕರ್ ಚಿಂತನೆಗಳು ಅಳವಡಿಸಿಕೊಳ್ಳದ ಭಾರತ ಊನವಾಗುತ್ತದೆ’ ಎಂದರು.

1003676202
ಕಸಾಪ ತಾಲೂಕು ಪದಾಧಿಕಾರಿಗಳಿಗೆ ಗೌರವಿಸಲಾಯಿತು.

ವಿಶೇಷ ಸನ್ಮಾನ ಸ್ವೀಕರಿಸಿದ ಅಡವೆಪ್ಪ ಪಟ್ನೆ ಜಾನಪದ ಗೀತೆಗಳ ಮೂಲಕ ಶರಣರ ವೈಚಾರಿಕ ವಿಚಾರಗಳನ್ನು ಪ್ರಸ್ತುತಪಡಿಸಿದರು. ಪ್ರಾಚಾರ್ಯ ಡಾ. ಗೌತಮ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಧಕ ವಿದ್ಯಾರ್ಥಿಗಳಿಗೆ ಗೌರವ:

ಎಸ್ಸೆಸ್ಸೆಲ್ಸಿ ವಿಭಾಗದಲ್ಲಿ ಸಾಧನೆಗೈದ ಆದರ್ಶ, ಆದಿತ್ಯ, ನಿವೇದಿತಾ, ಕಾರ್ತಿಕ ಮತ್ತು ಐಶ್ವರ್ಯ, ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಆರತಿ, ಶಿಫಾ, ಶಿವಕರ್ಣಾ, ಕಲಾ ವಿಭಾಗದ ಸುಧಾರಾಣಿ, ಕೀರ್ತನಾ, ವಾಣಿಜ್ಯ ವಿಭಾಗದ ಅಂಬಿಕಾ ಹಾಗೂ ಶ್ವೇತಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಬಳಿಕ ತಾಲೂಕು ಕಸಾಪ ಪದಾಧಿಕಾರಿಗಳಿಗೆ ಹಾಗೂ ವಿವಿಧ ವಲಯ ಘಟಕಗಳ ಅಧ್ಯಕ್ಷರಿಗೆ ನೇಮಕ ಪತ್ರ ನೀಡಿ ಅಭಿನಂದಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ ಮೇಲ್ದೋಡ್ಡಿ, ಆರ್.ಆರ್.ಕೆ ಸಮಿತಿ ಸದಸ್ಯ ರವೀಂದ್ರ ಮೀಸೆ, ಕಸಾಪ ಗೌರವಾಧ್ಯಕ್ಷ ಡಾ.ವೈಜಿನಾಥ ಬುಟ್ಟೆ, ಡಾ.ಮನ್ಮಥ ಡೋಳೆ, ಗುರುನಾಥ ದೇಶಮುಖ, ವೀರೇಶ ಅಲ್ಮಾಜೆ, ಮಲ್ಲಿಕಾರ್ಜುನ ಟಂಕಸಾಲೆ, ಜಗನ್ನಾಥ ದೇಶಮುಖ, ಮಹಾದೇವ ಘೂಳೆ, ಖಂಡೋಬಾ ಕಂಗಟೆ, ಸಂದೀಪ ಪಾಟೀಲ, ಅಮರಸ್ವಾಮಿ ಸ್ಥಾವರಮಠ, ಅಂಬಾದಾಸ ನೆಳಗೆ, ಧನರಾಜ ಮಾನೆ, ಗೋವಿಂದ ಪಾಟೀಲ, ಕೈಲಾಸಪತಿ ಕೇದಾರೆ, ಉತ್ತಮ ದಂಡೆ, ಉತ್ತಮ ಜಾಧವ, ಶ್ವೇತಾ ಆಲೂರ, ಶಿವರಾಮ ರಾಠೋಡ, ಕಪಿಲ ಡೋಣಗಾಂವೆ, ತುಳಸಿರಾಮ ಮಾನೆ, ಆರತಿ, ಪ್ರಿಯಾ ಮಿಲಿಂದ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...