ಬೀದರ್ | ಜಗತ್ತಿಗೆ ಶಾಂತಿ, ಸಮಾನತೆ ಸಾರಿದ ಭಗವಾನ್ ಬುದ್ಧ : ಸಚಿವ ಈಶ್ವರ ಖಂಡ್ರೆ

Date:

ಭಗವಾನ್ ಬುದ್ಧ ಜಗತ್ತಿಗೆ ಶಾಂತಿ, ಸಮಾನತೆ, ಸರಳತೆಯ ಸಂದೇಶ ನೀಡಿದರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭಗವಾನ್ ಬುದ್ಧ ಜಯಂತ್ಯುತ್ಸವ ಅಂಗವಾಗಿ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

‘ಅಂದಿನ ಸಮಾಜದಲ್ಲಿ ಮೌಢ್ಯ, ಅಸಮಾನತೆ, ದೌರ್ಜನ್ಯ ಮುಂತಾದ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದವು. ಅವುಗಳ ವಿರುದ್ಧವಾಗಿ ಗೌತಮ ಬುದ್ಧರು ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸಮಾನತೆ, ಪ್ರೀತಿ, ವಿಶ್ವಾಸಗಳನ್ನು ಮೂಡಿಸಿದರು. ರಾಜಮನೆತನದಲ್ಲಿ ಹುಟ್ಟಿದರು. ಸಹ ಸರ್ವವವೂ ತ್ಯಾಗಗೈದು, ಬೋಧಿವೃಕ್ಷದ ಕೆಳಗೆ ತಪಸ್ಸು ಮಾಡಿ ಜ್ಞಾನವನ್ನು ಪಡೆದರು. ದೇಶದ ಹಲವೆಡೆ ಸಂಚಾರ ಕೈಗೊಂಡು ತಮ್ಮ ತತ್ವಗಳನ್ನು ಬೋಧಿಸಿದರು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003710223

‘ಜಗತ್ತಿನಲ್ಲಿ ನಡೆಯುವ ಅನಾಹುತಗಳಿಗೆ ಆಸೆಯೇ ಕಾರಣ, ಆಸೆ ದುಃಖಕ್ಕೆ ಮೂಲ ಕಾರಣವಾಗಿದೆ, ಆಸೆ ತ್ಯಾಗದಿಂದ ದುಃಖ ಕಡಿಮೆಯಾಗುತ್ತದೆ. ಆಸೆ ಹೋಗಬೇಕೆಂದರೆ ಅಷ್ಟಾಂಗ ಮಾರ್ಗ ಪಾಲನೆ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗೌತಮಬುದ್ಧರ ಭಾವಚಿತ್ರದ ರಥ ಮೆರವಣಿಗೆಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ವಿವಿಧ ಮುಖಂಡರು, ಅಧಿಕಾರಿಗಳು ಇದ್ದರು.

ಬಳಿಕ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಉದ್ಘಾಟಿಸಿದರು.

1003710178
ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿದರು.

‘ಭಗವಾನ್ ಬುದ್ಧರು ಮಾನವೀಯತೆ, ಸಮಾನತೆ, ಸಹಬಾಳ್ವೆಯಿಂದ ಬದುಕಲು ಮಾರ್ಗ ಹಾಕಿಕೊಟ್ಟಿದ್ದಾರೆ. ನಾವೆಲ್ಲರೂ ಸರಳತೆ ಜೀವನವನ್ನು ಅನುಸರಿಸಿ, ಪ್ರೀತಿ ವಿಶ್ವಾಸದಿಂದ ಕೂಡಿ ಬಾಳಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಮಾರ್ಗದಲ್ಲಿ ನಡೆದು ಉತ್ತಮವಾದ ಸಮಾಜವನ್ನು ಕಟ್ಟಬೇಕು’ ಎಂದು ತಿಳಿಸಿದರು.

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಅವರು ಅತಿಥಿ ಉಪನ್ಯಾಸ ನೀಡಿ, ‘ಬುದ್ಧರ ಜೀವನ ಹಾಗೂ ಬೌದ್ಧ ಧಮ್ಮದ ಕುರಿತು ತಿಳಿಸಿದರು.

ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಭಂತೆ ಅಶೋಕ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ ಸೊನಾರೆ ಮುಖಂಡರಾದ ಮಾರುತಿ ಬೌದ್ಧೆ, ಅನೀಲ ಬೆಲ್ದಾರ, ಬಾಬು ಪಾಸ್ವಾನ್, ಕಾಶಿನಾಥ ಚೆಲುವಾ, ರಾಜಪ್ಪ ಗೂನಳ್ಳಿ, ತಾನಾಜಿ ಸಗರ, ಶಿವಶರಣಪ್ಪ ಹುಗ್ಗೆ ಪಾಟೀಲ್, ಓಂಪ್ರಕಾಶ್ ರೊಟ್ಟೆ, ಚಕ್ರಧರ ಹೊಸಳ್ಳಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...