ಬೀದರ್‌ | ಜನಿವಾರ ಪ್ರಕರಣದ ಹಿಂದೆ ಬಿ.ವೈ.ವಿಜಯೇಂದ್ರ ಷಡ್ಯಂತ್ರ : ಅರವಿಂದಕುಮಾರ್‌ ಅರಳಿ ಆರೋಪ

Date:

ಬೀದರ್‌ನಲ್ಲಿ ಜನಿವಾರ ಧರಿಸಿದ ಕಾರಣಕ್ಕಾಗಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಪ್ರಕರಣದ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಷಡ್ಯಂತ್ರ ಆಗಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ ಗಂಭೀರ ಆರೋಪ ಮಾಡಿದ್ದಾರೆ.

ʼವಿದ್ಯಾರ್ಥಿ ಸುಚಿವೃತನ ಜನಿವಾರದ ಪ್ರಕರಣದಲ್ಲಿ ವಾಸ್ತವವಾಗಿ ನಡೆದದ್ದೇನು? ಎಂಬುವುದು ತಿಳಿದುಕೊಳ್ಳಬೇಕು. ಈ ಪ್ರಕರಣ ಇಷ್ಟೊಂದು ದೊಡ್ಡದು ಮಾಡಲು ಕಾರಣವೇನೆಂಬುದು ಜನರು ಅರ್ಥ ಮಾಡಿಕೊಳ್ಳವುದು ಬಹಳ ಅವಶ್ಯಕತೆ ಇದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ಸುಚಿವೃತ‌ ಕುಲಕರ್ಣಿ ಮೊದಲನೆ ದಿನ ಕೆ-ಸಿಇಟಿ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗಿಲ್ಲ. ಬೀದರ್‌ ನಗರಕ್ಕೆ ಬಿಜೆಪಿಯ ಜನಾಕ್ರೋಶ ಜಾಥಾ ಬರುವ ಸಂದರ್ಭದಲ್ಲೇ ಈ ಪ್ರಕರಣ ಬೆಳಕಿಗೆ ಬರಲು ಕಾರಣವೇನು? ಇನ್ನು, ಸುಚಿವೃತನು ಜನಿವಾರದೊಂದಿಗೆ ಒಂದು ಗೋಲಾಕರದ ಲೋಹದ ವಸ್ತು ಕಟ್ಟಿಕೊಂಡು ಬಂದಿದ್ದರು. ಅದನು ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದ್ದಕ್ಕೆ ಅವರು ಅದಕ್ಕೆ ಒಪ್ಪದೆ ಮನೆಗೆ ವಾಪಸ್ ಹೋಗಿದ್ದಾರೆ. ಆದರೆ, ಬಿಜೆಪಿಯವರು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಮ್ಮಕ್ಕು ನೀಡುತ್ತಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಈ ಪ್ರಕರಣ ಸತ್ಯವಿದ್ದಲ್ಲಿ ತೀವ್ರವಾಗಿ ಖಂಡಿಸುತ್ತೇನೆ, ದೇಶದಲ್ಲಿ ಎಲ್ಲ ಧರ್ಮದವರಿಗೆ ಅವರವರ ಪದ್ದತಿ ಅನುಸರಿಸಲು ಯಾರೂ ಅಡ್ಡಿ ಪಡಿಸುವಂತಿಲ್ಲ. ಹಾಗಾಗಿ ಈ ಕೃತ್ಯವನ್ನು ಜರುಗಿಸಿದ ವ್ಯಕ್ತಿಗೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ʼರಾಜ್ಯ ಸರ್ಕಾರವು ಜಾತಿ ಸಮೀಕ್ಷೆಯ ವರದಿ ಸಾರ್ವಜನಿಕವಾಗಿ ಪ್ರಕಟಿಸಲು ಮುಂದಾಗಿರುವ ಸಂದರ್ಭದಲ್ಲೇ ಬಿಜೆಪಿ ಪಟಾಲಂ ಈ ಕೆಲಸ ಮಾಡಿದೆ. ಇದರ ಹಿಂದಿನ ರಾಜಕೀಯ ಪಿತೂರಿ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಅವರವರ ಧರ್ಮ ಅನುಸರಿಸಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಸಿಲಿಂಡರ್‌ ಸೇರಿದಂತೆ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಈ ವಿಷಯಗಳನ್ನು ಮರೆಮಾಚಲು ಬಿಜೆಪಿ ರಾಜಕೀಯ ಷಡ್ಯಂತ್ರ ಮಾಡಿರಬಹುದು. ಆದಕಾರಣ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆʼ ಎಂದು ಅರಳಿ ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...