ಬೀದರ್‌ | ದೇಶದಾದ್ಯಂತ 10 ಲಕ್ಷ ಸಸಿ ನೆಡುವ ಅಭಿಯಾನ : ಅನ್ವರಿ ಬೇಗಂ

Date:

ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಷನ್ ದೇಶದಲ್ಲಿ ಶೇ 24 ರಷ್ಟು ಇರುವ ಅರಣ್ಯ ಪ್ರದೇಶವನ್ನು ಶೇ 33 ಕ್ಕೆ ಹೆಚ್ಚಿಸುವ ಗುರಿ ಇಟ್ಟುಕೊಂಡಿದೆ. ಸಂಘಟನೆಯಿಂದ ಜೂನ್ 25 ರಿಂದ ಆರಂಭಿಸಲಾದ ದೇಶದಾದ್ಯಂತ 10 ಲಕ್ಷ ಸಸಿ ನೆಡುವ ಅಭಿಯಾನ ಜುಲೈ 25ಕ್ಕೆ ಮುಕ್ತಾಯಗೊಳ್ಳಲಿದೆʼ ಎಂದು ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಷನ್ ಸಂಚಾಲಕಿ ಅನ್ವರಿ ಬೇಗಂ ಹೇಳಿದರು.

ಜಮಾ ಅತೆ ಇಸ್ಲಾಮಿ ಹಿಂದ್ ಬೀದರ್ ಘಟಕ ಹಾಗೂ ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಷನ್ ವತಿಯಿಂದ ನಗರದ ಡೀಸೆಂಟ್ ಫಂಕ್ಷನ್ ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಸಸಿ ನೆಡುವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ʼಮಣ್ಣಿನಲ್ಲಿ ಕೈಗಳು- ತಾಯ್ನಾಡಿನೊಂದಿಗೆ ಹೃದಯ’ ಅಭಿಯಾನದ ಘೋಷವಾಕ್ಯವಾಗಿದೆ. ಹೊಸ ಪೀಳಿಗೆಗೆ ತಾಯ್ನಾಡು ಹಾಗೂ ಮಣ್ಣಿನ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಲು ಪ್ರೇರಣೆ ನೀಡುವುದು ಈ ಘೋಷವಾಕ್ಯದ ಉದ್ದೇಶವಾಗಿದೆ ಎಂದು ಸಂಚಾಲಕ ಡಾ. ಇರ್ಷಾದ್ ನವೀದ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳಾದ ಶೇಕ್ ರಾಯನ್ ಅಹಮ್ಮದ್, ಸೈಯದ್ ಆರೀಬ್ ರೆಜಾ, ಸೈಯದ್ ಮುಂಜಾ ಅನಮ್, ಮೆಹ್ರೂಜ್ ಅಫಿಯಾ ಅರುಷ್, ಅರೀಬಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ ವತಿಯಿಂದ 200 ಮಾವು, ಪೇರಲ್, ನೇರಳೆ ಹಾಗೂ ಕರಿಬೇವು ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು. ಇದಕ್ಕೂ ಮುನ್ನ ಮಕ್ಕಳಿಂದ ನೂರ್‍ಖಾನ್ ತಾಲೀಂನಿಂದ ಚೌಬಾರಾ, ಮಹಮೂದ್ ಗವಾನ್ ಮದರಸಾ, ಕೋಟೆ ಮಾರ್ಗವಾಗಿ ಫಂಕ್ಷನ್ ಹಾಲ್‍ವರೆಗೆ ಪರಿಸರ ಜಾಗೃತಿ ಮೆರವಣಿಗೆ ನಡೆಯಿತು. 

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

ಜಮಾ ಅತೆ ಇಸ್ಲಾಮಿ ಹಿಂದ್ ಬೀದರ್ ಘಟಕದ ಅಧ್ಯಕ್ಷ ಮಹಮ್ಮದ್ ಮೊಅಜಂ, ಉಪಾಧ್ಯಕ್ಷ ಮಹಮ್ಮದ್ ಆರಿಫುದ್ದೀನ್, ಮಹಿಳಾ ವಿಭಾಗದ ಸಂಚಾಲಕಿ ಆಸ್ಮಾ ಸುಲ್ತಾನಾ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ವಿಜ್ಡಂ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮಹ್ಮದ್ ಆಸಿಫುದ್ದೀನ್, ಮೌಲಾನಾ ಮೋನಿಸ್ ಕಿರ್ಮಾನಿ, ಮುಹಮ್ಮದ್ ಸಿರಾಜ್ ನೆಲವಾಡ, ಜಮಾ ಅತೆ ಇಸ್ಲಾಮಿ ಹಿಂದ್ ಸಹಾಯಕ ಮಾಧ್ಯಮ ಉಸ್ತುವಾರಿ ಸೈಯದ್ ಅತಿಕುಲ್ಲಾ ಇದ್ದರು. ವಿದ್ಯಾರ್ಥಿನಿ ಎ. ರೆಹಾನ್ ಕುರಾನ್ ಪಠಣ ಮಾಡಿದರು. ಅನ್ವರಿ ಬೇಗಂ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...