ಬೀದರ್ | ಕಳ್ಳತನ ಪ್ರಕರಣ : ಖಾಸಗಿ ಶಾಲಾ ಶಿಕ್ಷಕ ಸೇರಿ ಐವರ ಬಂಧನ; ₹30.80 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

Date:

ಬೀದರ್ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿರುವ 8 ಕಳ್ಳತನ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಬೆಲೆ ಬಾಳುವ ಚಿನ್ನಾಭರಣ ಸ್ವತ್ತುಗಳನ್ನು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

8 ಪ್ರಕರಣಗಳಲ್ಲಿ 5 ಆರೋಪಿಗಳನ್ನು ಬಂಧಿಸಲಾಗಿದೆ. ಕಳ್ಳತನವಾದ ಸ್ವತ್ತುಗಳಲ್ಲಿನ 307 ಗ್ರಾಂ ಚಿನ್ನ, 980 ಗ್ರಾಂ ಬೆಳ್ಳಿ, ಎರಡು ದ್ವಿಚಕ್ರ, ಒಂದು ಕಾರು ಹಾಗೂ ನಕಲಿ ಪಿಸ್ತೂಲ್ ಸೇರಿ ಒಟ್ಟು ₹30.80 ಲಕ್ಷ ಮೌಲ್ಯದ ಸ್ವತ್ತು ಪತ್ತೆಯಾಗಿದೆ. ಕಳ್ಳತನವಾದ ಚಿನ್ನಾಭರಣ ಮರಳಿ ಪಡೆದುಕೊಂಡ ವಾರಸುದಾರರು ಸಂತಸದಿಂದ ಮರಳಿದರು.

1003720898
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾಗೋಷ್ಠಿ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘8 ಮನೆಗಳ್ಳತನ ಪ್ರಕರಣಗಳಲ್ಲಿ 5 ಆರೋಪಿಗಳನ್ನು ಬಂಧಿಸಲಾಗಿದ್ದು , ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.‌ ಆರೋಪಿಗಳ ಪತ್ತೆಗೆ ವೈಜ್ಞಾನಿಕ ಸಾಕ್ಷಿಗಳು ಸಾಕಷ್ಟು ನೆರವಾಗಿವೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಗಳ್ಳತನ ಪ್ರಕರಣದಲ್ಲಿ ಖಾಸಗಿ ಶಾಲೆ ಶಿಕ್ಷಕ :

‘ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಇಬ್ಬರೂ ಈ ಹಿಂದೆ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅದರಲ್ಲಿ ಓರ್ವ ಆರೋಪಿ ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಇನ್ನೋರ್ವ ಬೀದರ್‌ನಲ್ಲಿ ಆಟೋ ಚಾಲಕನಾಗಿದ್ದಾನೆ’ ಎಂದು ಮಾಹಿತಿ ನೀಡಿದರು.

‘ಕಳ್ಳತನ, ದರೋಡೆ ಪ್ರಕರಣಗಳ ತಡೆಗೆ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು. ಕಳ್ಳತನ ಪ್ರಕರಣ ತಡೆಗಟ್ಟುವ ಉದ್ದೇಶದಿಂದ ನಗರದ ಚಿದ್ರಿ, ನೌಬಾದ್ ಹಾಗೂ ಶಹಾಪುರ ಗೇಟ್ ಬಳಿ ಚೆಕ್ ಪೋಸ್ಟ್‌ಗಳು ತೆರೆಯಲಾಗಿದ್ದು, ನಗರಕ್ಕೆ ಪ್ರವೇಶಿಸುವವರನ್ನು ತಪಾಸಣೆ ನಡೆಸಿ ಕಟ್ಟೆಚ್ಚರ ವಹಿಸಲಾಗುತ್ತಿದೆ’ ಎಂದರು.

1003720899
ಕಳ್ಳರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ ಸಂಬಂಧಿಸಿದ ವಾರಸುದಾರರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವಿತರಿಸಿದರು

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಬೀದರ್ ಗ್ರಾಮೀಣ ಸಿಪಿಐ ಜಿ.ಎಸ್.ಬಿರಾದರ್, ಗಾಂಧಿ ಗಂಜ ಪೊಲೀಸ್ ಠಾಣೆ ಪಿಎಸ್ಐ ಆನಂದರಾವ್ ಎಸ್.ಎನ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ಕಾನೂನು ಬಾಹಿರ ಚಟುವಟಿಕೆ : ಏಪ್ರಿಲ್ ತಿಂಗಳಲ್ಲಿ 184 ಪ್ರಕರಣ; ₹30.32 ಲಕ್ಷ ಮೌಲ್ಯದ ವಸ್ತು ಜಪ್ತಿ

ಕಾರ್ಯಾಚರಣೆಯಲ್ಲಿ ಗಾಂಧಿ ಗಂಜ ಪೊಲೀಸ್ ಠಾಣೆ ಸಿಬ್ಬಂದಿಗಳಾದ ನವೀನ್, ಅನೀಲ್, ಆರೀಫ್, ಇರ್ಫಾನ್, ಗಂಗಾಧರ, ಸುಧಾಕರ್, ಇಮ್ರಾನ್, ಪ್ರಶಾಂತ, ಮಲ್ಲಿಕಾರ್ಜುನ, ನಿಂಗಪ್ಪ, ರಾಹುಲ್ ಹಿಬ್ಬಾರೆ, ವಿಜಯಕುಮಾರ್ ಬಾಳೂರೆ, ಅಶೋಕ್ ಕೋಟೆ ಮತ್ತು ತಾಂತ್ರಿಕ ಅಧಿಕಾರಿಗಳಾದ ಹರ್ಷಾ, ವಿ.ಎಸ್.ಮಂಕಣಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...