ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

Date:

ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲೆಯ ಅತಿವೃಷ್ಟಿ ಹಾನಿ ವೀಕ್ಷಿಸಲು ಧಾವಿಸಬೇಕೆಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಮನವಿ ಮಾಡಿದರು.

ಮಳೆಯಿಂದ ಹಾನಿಗೊಳಗಾಗಿದ್ದ ಹುಲಸೂರ, ಅಂಬೆವಾಡಿ, ಸೊಲದಾಬಕಾ, ಗೋವರ್ಧನ ತಾಂಡಾ ಮತ್ತು ಅಂತರಭಾರತಿ ತಾಂಡಾ ಗ್ರಾಮದ ರೈತರ ಜಮೀನುಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.

ʼಕಳೆದ ಮೇ ತಿಂಗಳಿಂದ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಬಸವಕಲ್ಯಾಣ ಮತಕ್ಷೇತ್ರದ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಉದ್ದು, ಹೆಸರು, ತೊಗರಿ, ಹತ್ತಿ ಸೋಯಾಅವರೆ ಸೇರಿದಂತೆ ವಿವಿಧ ಬೆಳೆ ಸಂಪೂರ್ಣ ಹಾಳಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಚಿಂತೆಗೀಡಾಗಿದ್ದಾರೆ. ಸರ್ಕಾರ, ಈ ಪ್ರದೇಶವನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಬೇಕು. ಪ್ರತಿ ಎಕರೆಗೆ ₹25 ಸಾವಿರ ರೈತರಿಗೆ ಪರಿಹಾರ ನೀಡಬೇಕುʼ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಮ್ಮ ಭಾಗದ ರೈತರು ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿ ಸದಾ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಭಾರಿಯೂ ಅತಿವೃಷ್ಟಿಯಿಂದ ರೈತ ಮತ್ತೆ ಕಂಗಲಾಗಿದ್ದಾನೆ. ಮುಖ್ಯಮಂತ್ರಿಗಳು, ಸಚಿವರು ಕೇವಲ ಬೆಂಗಳೂರು ವ್ಯಾಪ್ತಿಗೆ ಸೀಮಿತರಾಗದೆ ನಮ್ಮ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾನಿ, ರೈತರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಿ, ಸೂಕ್ತ ಪರಿಹಾರ ಘೋಷಿಸಬೇಕುʼ ಎಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಮಳೆ, ಚರಂಡಿ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿ ಹಾನಿಯುಂಟಾದ ಮನೆಗಳಿಗೆ ಭೇಟಿ ನೀಡಿದ ಶಾಸಕರು ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಮತ್ತು ಪುನರ್ವಸತಿ ಕಾರ್ಯಕ್ಕೆ ಆದ್ಯತೆ ನೀಡಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಮತ್ತು ಭವಿಷ್ಯದಲ್ಲಿ ಪ್ರವಾಹದ ತಡೆಗಟ್ಟುವ ಕ್ರಮಗಳ ಕುರಿತು ಚರ್ಚೆ ನಡೆಸಿದರು.

WhatsApp Image 2025 09 26 at 7.22.28 AM
ಶಾಸಕ ಶರಣು ಸಲಗರ ಅವರು ಹುಲಸೂರ ತಾಲ್ಲೂಕಿನ ವಿವಿಧೆಡೆ ಅಧಿಕಾರಿಗಳೊಂದಿಗೆ ತೆರಳಿ ಬೆಳೆ ಹಾನಿ ವೀಕ್ಷಿಸಿದರು.

ಇದನ್ನೂ ಓದಿ : ಯಾದಗಿರಿ | ಕೊಡಲಿಯಿಂದ ಕೊಚ್ಚಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ!

ಹುಲಸೂರ ತಾ.ಪಂ ಇಒ ಮಹಾದೇವ ಜಮ್ಮು, ಪಿಡಿಒ ರಮೇಶ ಮಿಲಿಂದಕರ, ಕಂದಾಯ ನಿರೀಕ್ಷಕ ನಾಗರಾಜ, ಸೇರಿದಂತೆ ಅಶೋಕ ವಕಾರೆ, ಓಂಕಾರ ಪಟ್ನೆ, ಸುಧೀರ ಕಾಡಾದಿ, ಗೋವಿಂದರಾವ ಸೋಮವಂಶಿ, ಸೋಮನಾಥ ನಂದಗೆ, ರಣಜೀತ ಗಾಯಕವಾಡ, ರಾಮ ಸಾಯಗಾಂವೆ, ರೂಪಾತಾಯಿ ಜಾಧವ, ರಮೇಶ ಧಬಾಲೆ, ಅರವಿಂದ ಹರಿಪಲ್ಲೆ, ಜಗದೀಶ ದೆಟ್ನೆ, ಚಂದ್ರಕಾಂತ ದೆಟ್ನೆ, ದೇವಿಂದ್ರ ಭೋಪಳೆ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...