ಬೀದರ್‌ | ಮಕ್ಕಳ ಸಹಾಯವಾಣಿ-1098 ಬರಹ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

Date:

ಜಿಲ್ಲೆಯ ಎಲ್ಲ ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ-1098 ಅಳವಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.

ʼರಾಜ್ಯ ಸರ್ಕಾರದಿಂದ ಮಕ್ಕಳ ಸಹಾಯವಾಣಿ-1098 ನಾಮ ಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸುವಂತೆ ಸೂಚಿಸಿ, ಸುತ್ತೋಲೆ ಹೊರಡಿಸಿದೆ ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆʼ ಎಂದು ಪ್ರಕಟಣೆಯಲ್ಲಿ ಹೇಳಿದರು.

ʼಈಗಾಗಲೇ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯೂ ಮಕ್ಕಳ ಅಭಿವೃದ್ಧಿ ಹಾಗೂ ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದ್ದು, ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತ ರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೆ ಹಾಗೂ ಪುನರ್ವಸತಿ ಸೇವೆ ಒದಗಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಡಿ.13ರಂದು ಬೃಹತ್‌ ಲೋಕ ಅದಾಲತ್

ಬಾಲ್ಯವಿವಾಹ, ಪೋಕ್ಸೋ, ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಇತ್ಯಾದಿ ಸುರಕ್ಷಿತ ಬೆಂಬಲ ವ್ಯವಸ್ಥೆ ಇರುವುದರ ಕುರಿತು ಮಕ್ಕಳಿಗೆ ಮಾಹಿತಿ ಇರಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೂ ಸಹ ಈ ಕುರಿತು ಮಾಹಿತಿ ಇದ್ದಲ್ಲಿ ಮಕ್ಕಳಿಗೆ ಸಕಾಲದಲ್ಲಿ ಸ್ಪಂದನೆ ಮತ್ತು ಅಗತ್ಯ ಬೆಂಬಲ ಪಡೆಯಲು ಸಾಧ್ಯವಾಗುತ್ತದೆʼ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...