ಬೀದರ್‌ | ಸಿನಿಮಾ, ಮೊಬೈಲ್‌ ಹಾವಳಿಯಿಂದ ಕಲೆ ನಾಶ : ದುರ್ಗಾದಾಸ

Date:

ಸಿನಿಮಾ ಹಾಗೂ ಮೊಬೈಲ್‌ ಹಾವಳಿಯಿಂದ ಪಾರಂಪರಿಕ ಕಲೆಗಳು ನಶಿಸುತ್ತಿವೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ. ಕೆ.ಆರ್.ದುರ್ಗಾದಾಸ ಅವರು ಕಳವಳ ವ್ಯಕ್ತಪಡಿಸಿದರು.

ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಬಾಗಲಕೋಟೆ ಹಾಗೂ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕಲ್ಯಾಣ ಕರ್ನಾಟಕ ಬಯಲಾಟಗಳು’ ಕುರಿತಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘1980ರಲ್ಲಿ ಬೀದರ್ ಜಿಲ್ಲೆಯ ವಿವಿಧೆಡೆ ದೊಡ್ಡಾಟ ತಂಡಗಳಿದ್ದವು. ಈಗ ಜಿಲ್ಲೆಯಲ್ಲಿ ಒಂದು ತಂಡಗಳು ಸಹ ಇಲ್ಲದಿರುವುದು ಬೇಸರದ ಸಂಗತಿ. ಬಯಲಾಟ ಬರೀ ರಂಜನೆಗಷ್ಟೇ ಸೀಮಿತ ಅಲ್ಲ, ಅದರಲ್ಲಿ ಲೌಕಿಕ ಬದುಕಿಗೆ ಅಗತ್ಯವಾದ ಮೌಲಿಕ ನೀತಿ ತತ್ವಗಳು ಅಡಗಿವೆ. ಇಂತಹ ಅಪರೂಪದ ಪಾರಂಪರಿಕ ಕಲೆ ಇಂದಿನ ಯುವ ಪೀಳಿಗೆಗೆ ಉಳಿಸುವ ಕೆಲಸ ಮಾಡುವುದು ತುಂಬಾ ಅಗತ್ಯವಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 19 at 6.52.23 AM
ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ. ಕೆ.ಆರ್.ದುರ್ಗಾದಾಸ ಅವರು ಮಾತನಾಡಿದರು.

ಜಾನಪದ ವಿದ್ವಾಂಸ ಡಾ.ವೀರಣ್ಣ ದಂಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಅಳಿವಿನಂಚಿನಲ್ಲಿರುವ ಜಾನಪದ ಕಲೆ, ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ತಲುಪಿಸುವ ಕೆಲಸ ಆಗಬೇಕಾಗಿದೆ. ಬಯಲಾಟದಲ್ಲಿ ಬೀದಿ ಬಯಲಾಟ ಎಂಬ ಪ್ರಕಾರವು ಬೀದರ್ ಜಿಲ್ಲೆಯ ಕೊಡುಗೆಯಾಗಿದೆ’ ಎಂದು ಸ್ಮರಿಸಿದರು.

‘ಆಧುನಿಕತೆಯ ಭರಾಟೆಯಲ್ಲಿ ನಮ್ಮತನ ಮರೆಯುತ್ತಿದ್ದೇವೆ. ಇಂದಿನ ಸಾಮಾಜಿಕ ಮಾಧ್ಯಮಗಳಿಂದ ಮುಂದೊಂದು ದಿನ ಬೇಸತ್ತು ಪುನಃ ಹಳೆಯ ಕಲೆ, ಸಂಸ್ಕೃತಿಗೆ ಮರಳುವ ಕಾಲ ದೂರವಿಲ್ಲʼ ಎಂದು ನುಡಿದರು.

ಸಂಸ್ಕೃತಿ ಚಿಂತಕರಾದ ಡಾ.ಮೀನಾಕ್ಷಿ ಬಾಳಿ ಅವರು ಮಾತನಾಡಿ, ‘ರಾಜ್ಯದ 15 ಜಿಲ್ಲೆಗಳಲ್ಲಿ ಬಯಲಾಟ ಕಲೆ ಜೀವಂತವಿದೆ. ಆದರೆ, ಉಳಿದ ಕಲೆಗೆ ದೊರೆತ ಆಧುನಿಕ ಸ್ಪರ್ಶ ಬಯಲಾಟ ಕಲೆಗೆ ದಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು

‘ನಮ್ಮ ಭಾಗದ ಕಲೆ, ಸಾಹಿತ್ಯ ಹೆಚ್ಚು ಪ್ರಚಾರಕ್ಕೆ ಬರಬೇಕಾದರೆ ಯುವ ಸಮೂಹ ಹೆಚ್ಚು ಅಭಿರುಚಿ ಬೆಳೆಸಿಕೊಳ್ಳಬೇಕು. ನಾಡಿನ ಜಾನಪದ ಕಲೆಗಳಿಗೆ ಅದರದೇ ಆದ ಇತಿಹಾಸ, ಸಂಸ್ಕೃತಿ ಇದೆ. ಪ್ರಾದೇಶಿಕ ಕಲಾ ಶ್ರೀಮಂತಿಕೆ ಅತ್ಯಂತ ಮೌಲ್ಯಯುತವಾಗಿದ್ದ, ಅವುಗಳಲ್ಲಿ ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಬಿಕ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ, ʼಜಾತಿ,ಮಾತು ಭೇದಗಳಿಲ್ಲದೆ ಸಮಾಜದಲ್ಲಿ ಸಮಾನತೆ ಬೀಜ ಬಿತ್ತುವ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸುವುದು ಅಗತ್ಯವಾಗಿದೆ. ಕಲೆ ಸಾಹಿತ್ಯದಿಂದ ಮನುಷ್ಯನ ಒತ್ತಡದ ಬದುಕು ನಿವಾರಣೆ ಆಗಬಲ್ಲದುʼ ಎಂದರು.

WhatsApp Image 2025 11 19 at 6.56.29 AM
‘ಭೀಮವಿಲಾಸ ಅರ್ಥಾತ್ ಕೀಚಕನ ವಧ’ ಎಂಬ ದೊಡ್ಡಾಟ ಪ್ರದರ್ಶನ ಸಭಿಕರ ಮನಸೂರೆಗೊಳಿಸಿತು.

ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ರಂಜನಾ ಪಾಟೀಲ್ ಮಾತನಾಡಿ, ʼವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನ ಜೊತೆಗೆ ಪಾರಂಪರಿಕ ಕಲೆಗಳ ಆಸಕ್ತಿ ಬೆಳೆಸಿಕೊಳ್ಳುವುದು ಅಗತ್ಯವಿದೆ. ನಮ್ಮ ಕಾಲೇಜಿನಲ್ಲಿ ಬಯಲಾಟ ಪ್ರದರ್ಶನ ಆಯೋಜಿಸಿರುವುದು ಹರ್ಷ ತಂದಿದೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ಮಕ್ಕಳಿಗೂ ಬಯಲಾಟ ಕಲಿಕೆಯಲ್ಲಿ ತೊಡಿಸಿಕೊಳ್ಳಲು ತಿಳಿಸಲಾಗುವುದುʼ ಎಂದು ಹೇಳಿದರು.

ಮಧ್ಯಾಹ್ನ ನಡೆದ ಗೋಷ್ಠಿಯಲ್ಲಿ ʼದೊಡ್ಡಾಟಗಳಲ್ಲಿ ಗ್ರಾಮೀಣ ಸಂಸ್ಕೃತಿʼ ಕುರಿತು ಪ್ರೊ.ಡಾ.ಸಾರಿಕಾದೇವಿ ಕಾಳಗಿ ಹಾಗೂ ʼಬೀದರ್ ಜಿಲ್ಲೆಯ ಸಾಂಸ್ಕೃತಿಕ ಪರಿಸರʼ ವಿಷಯ ಕುರಿತು ಪ್ರಾಧ್ಯಾಪಕರಾದ ಡಾ.ಜಯದೇವಿ ಗಾಯಕವಾಡ ಅವರು ಮಾತನಾಡಿದರು.

ಬಳಿಕ ವಿಜಯಪುರ ಜಿಲ್ಲೆಯ ಆಲಮಟ್ಟಿ ತಾಲೂಕಿನ ದೇವಣಗಾಂವ ಗ್ರಾಮದ ಶ್ರೀ ಮದ್ಗುರು ಲಿಂಗೇಶ್ವರ ಪ್ರಸಾಧಿಕ ಬೈಲಾಟ ಮಂಡಳಿಯಿಂದ ‘ಭೀಮವಿಲಾಸ ಅರ್ಥಾತ್ ಕೀಚಕನ ವಧ’ ಎಂಬ ದೊಡ್ಡಾಟ ಪ್ರದರ್ಶನ ಸಭಿಕರ ಮನಸೂರೆಗೊಳಿಸಿತು.

ಇದನ್ನೂ ಓದಿ : ಬೀದರ್‌ | ಸಕಲರ ಲೇಸು ಬಯಸಿದ ಬಸವಾದಿ ಶರಣರು : ಬಸವಲಿಂಗ ಪಟ್ಟದ್ದೇವರು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಮಹಾದೇವಿ ನಿರೂಪಿಸಿದರು. ಉಪನ್ಯಾಸಕಿ ಅಂಬಿಕಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...