ಬೀದರ್‌ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ

Date:

ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳ ಶೀಘ್ರ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಧರಿಸಿದೆ.

ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಂಘದ ರಾಜ್ಯಮಟ್ಟದ ವಿಷಯ ಸಭೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರು ಮಾತನಾಡಿ, ʼಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅರಣ್ಯ ಸಚಿವರ ಜತೆಗೆ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸರ್ಕಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒಪ್ಪಿಗೆ ಸೂಚಿಸಿದೆ. ಈ ದಿಸೆಯಲ್ಲಿ ತ್ವರಿತ ಆದೇಶಕ್ಕಾಗಿ ಆಡಳಿತದ ಗಮನ ಸೆಳೆಯಲು ನಿರ್ಣಯಿಸಲಾಗಿದೆʼ ಎಂದು ತಿಳಿಸಿದರು.

ಸೆ. 17 ರಂದು ಕಲಬುರಗಿಯಲ್ಲಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗುವುದು. 1995 ರ ನಂತರ ಆರಂಭವಾದ ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಕೂಡಲೇ ಆದೇಶ ಹೊರಡಿಸದಿದ್ದರೆ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಸಿಬ್ಬಂದಿಯೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸಂಘವು ಈ ಬಾರಿ ನ್ಯಾಯಕ್ಕಾಗಿ ʼಮಾಡು ಇಲ್ಲವೇ ಮಡಿʼ ಮಾದರಿಯಲ್ಲಿ ಹೋರಾಟಕ್ಕೆ ಅಣಿಯಾಗಲಿದೆ. ಇದಕ್ಕಾಗಿ ರಾಜ್ಯದಾದ್ಯಂತ ಸಂಘಟನೆ ಸಂಚರಿಸಿ ಸಂಘಟನೆ ಬಲಪಡಿಸಲಿದೆʼ ಎಂದು ಹೇಳಿದರು.

ಬೇಡಿಕೆಗಳೇನು?

1995 ರ ನಂತರ ಆರಂಭಿಸಲಾದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಬಡ ಮಕ್ಕಳಿಗೆ ಆಸರೆಯಾಗಿದ್ದ ಆರ್‍ಟಿಇ ಖಾಸಗಿ ಶಾಲೆಗಳಲ್ಲಿ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲೆ, ಕಾಲೇಜುಗಳ ಖಾಲಿ ಹುದ್ದೆ ಭರ್ತಿ ಮಾಡಬೇಕು. ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜು ಕಟ್ಟಡಗಳಿಗೆ ಕರ ವಿನಾಯಿತಿ ನೀಡಬೇಕು. ಉಚಿತ ವಿದ್ಯುತ್ ಒದಗಿಸಬೇಕು. ಕನ್ನಡ ಶಾಲೆ ಬಂದ್ ಮಾಡಿ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆಯುವುದನ್ನು ಕೈಬಿಡಬೇಕು. ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳ ನವೀಕರಣ ಪ್ರಕ್ರಿಯೆ ಸರಳೀಕರಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಾಲೆ, ಕಾಲೇಜುಗಳಿಗೆ ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಅನ್ವಯ ಸೌಲಭ್ಯ ಕಲ್ಪಿಸಬೇಕು ಎನ್ನುವುದು ಪ್ರಮುಖ ಸಂಘದ ಪ್ರಮುಖ  ಬೇಡಿಕೆಗಳಾಗಿವೆ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣಕುಮಾರ ಶಹಾಪುರ ಹಾಗೂ ಮಾಧ್ಯಮಿಕ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಜಾಧ್ಯಕ್ಷ ಸಂದೀಪ್ ಬೂದಿಹಾಳ್ ಸಂಘದ ಹೋರಾಟವನ್ನು ಬೆಂಬಲಿಸುವುದಾಗಿ ಪ್ರಕಟಿಸಿದರು.

ಇದನ್ನೂ ಓದಿ : ನಮಗ್ಯಾರಿಗೂ ಬರೆಯಲು ಆಗದೇ ಇದ್ದದ್ದನ್ನು ತೇಜಸ್ವಿ ಬರೆದರು ಎಂದ ಅನಂತಮೂರ್ತಿ

ಸಂಘದ ರಾಜ್ಯ ಸಂಚಾಲಕ ಜೆ.ಸಿ. ಶಿವಪ್ಪ, ಉಪಾಧ್ಯಕ್ಷರಾದ ಎಂ.ಮೌಲಾಲಿ, ಡಿ.ಬಿ.ನದಾಫ್, ನಂಜುಂಡಸ್ವಾಮಿ ಮೈಸೂರು, ಕೃಷ್ಣಮೂರ್ತಿ ಬೆಂಗಳೂರು, ಕೃಷ್ಣಪ್ಪ ಕೋಲಾರ್, ಐ.ಎಸ್. ಸ್ವರ್ಗಿನಮಠ ಬೆಳಗಾವಿ, ಕಾರ್ಯದರ್ಶಿ ಕೆ.ಗುರುನಾಥ ರೆಡ್ಡಿ, ಹುಬ್ಬಳ್ಳಿ ವಿಭಾಗ ಪ್ರಮುಖ ಅನಿಲ್ ಜಾಧವ್, ಕಲಬುರ್ಗಿ ವಿಭಾಗ ಪ್ರಮುಖರಾದ ರಾಜೇಂದ್ರ ಯರನಾಳೆ, ಮಹಾಲಿಂಗಗೌಡ, ಜಿ.ಎಸ್.ದೇಸಾಯಿ, ಮಾಣಿಕಪ್ಪ ಗೊರನಾಳೆ ಬೀದರ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...