ಬೀದರ್‌ | ಶ್ರೀಕಾಂತ ಸ್ವಾಮಿ ವಿರುದ್ಧದ ಸುಳ್ಳು ಆಪಾದನೆಗೆ ಖಂಡನೆ

Date:

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಮುಖಂಡರೂ ಆದ ಸಾಮಾಜಿಕ ಹೋರಾಟಗಾರ ಶ್ರೀಕಾಂತ ಸ್ವಾಮಿ ಅವರ ವಿರುದ್ಧ ಬ್ರಾಹ್ಮಣ ಸಮುದಾಯದ ಮುಖಂಡರು ಮಾಡಿರುವ ಸುಳ್ಳು ಮಾನಹಾನಿ ಆರೋಪಗಳು ಖಂಡನಾರ್ಹ ಎಂದು ವಿವಿಧ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು ತಿಳಿಸಿದ್ದಾರೆ.

ಈ ಸಂಬಂಧ ಗುರುವಾರ ಜಂಟಿ ಪ್ರಕಟಣೆ ಹೊರಡಿಸಿ ತಿಳಿಸಿದ ಸಾಮಾಜಿಕ ಹೋರಾಟಗಾರರಾದ ಬಾಬುರಾವ್‌ ಹೊನ್ನಾ, ಮಚ್ಚೇಂದ್ರ ವಾಘಮಾರೆ, ವಿಶ್ವಗುರು ಬಸವಧರ್ಮ ಕೇಂದ್ರದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ, ನಿವೃತ್ತ ಪ್ರಾಚಾರ್ಯರಾದ ವಿಠ್ಠಲದಾಸ್‌ ಪ್ಯಾಗೆ, ನಿಜಾಮುದ್ದೀನ್‌ ಸ್ವಾಮಿ ವಿರುದ್ಧದ ಆರೋಪಕ್ಕೆ ಖಂಡಿಸಿದ್ದಾರೆ.

ʼಕಳೆದ ಅಕ್ಟೋಬರ್ 17ರಂದು ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಶ್ರೀಕಾಂತ ಸ್ವಾಮಿ ಅವರು ಆರ್‌ಎಸ್‌ಎಸ್ ವಿರುದ್ಧ ತಮ್ಮ ಅನುಭವದ ಆಧಾರದ ಮೇಲೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಕೆಲವು ಬ್ರಾಹ್ಮಣ ಮುಖಂಡರು ಅದನ್ನು ವಿಕೃತಗೊಳಿಸಿ ಅವರ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶ್ರೀಕಾಂತ ಸ್ವಾಮಿ ಅವರು ಲಿಂಗಾಯತ ಸಮುದಾಯದ ಗೌರವಯುತ ನಾಯಕರಾಗಿದ್ದಾರೆ. ಧರ್ಮ, ಜಾತಿ ಭೇದವಿಲ್ಲದೆ ಅಭಿವೃದ್ಧಿ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿದ್ದಾರೆ. ಕೋವಿಡ್ ಸಮಯದಲ್ಲಿ ಜೀವದ ಹಂಗಿಲ್ಲದೆ ಜನಸೇವೆ ಮಾಡಿದ್ದಾರೆ. ಬ್ರಾಹ್ಮಣ ಸಮುದಾಯದ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿ ಬೆಂಬಲ ನೀಡಿರುವುದು ಎಲ್ಲರಿಗೂ ತಿಳಿದ ಸಂಗತಿʼ ಎಂದು ತಿಳಿಸಿದ್ದಾರೆ.

ಈ ಆರೋಪಗಳು ರಾಜಕೀಯ ಷಡ್ಯಂತ್ರದಿಂದ ಕೂಡಿವೆ. ಬ್ರಾಹ್ಮಣ–ಲಿಂಗಾಯತ ಸಮಾಜಗಳ ನಡುವೆ ಅಸಮಾಧಾನ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಖಂಡನಾರ್ಹ. ಶ್ರೀಕಾಂತ ಸ್ವಾಮಿ ಅವರ ವಿರುದ್ಧದ ಮಾನಹಾನಿ ಆರೋಪ ತಕ್ಷಣ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾರು ಡಿಕ್ಕಿ : ವೃದ್ಧ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...