ಬೀದರ್ | ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಿಜಿ ಪ್ರವೇಶ ಪರೀಕ್ಷೆ 2023; 3ನೇ ಸುತ್ತಿಗೆ ಒತ್ತಾಯ

Date:

2023ರ ಪಿಜಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನಿಂದ 3ನೇ ಸುತ್ತಿಗೆ ಮುಂದುವರೆಯಲು 2023ರ ನೀಟ್ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಲು ಒಂದು ವ್ಯವಸ್ಥೆಯ ಅವಶ್ಯಕತೆಯಿದೆ. ನಿಸ್ಪಕ್ಷಪಾತ ಧೋರಣೆಯೊಂದಿಗೆ ಎಲ್ಲರಿಗೂ ನ್ಯಾಯಬದ್ಧ ಶಿಕ್ಷಣ ಒದಗಿಸಲು ಕರ್ನಾಟಕ ಪರೀಕ್ಷಾ ಅಧಿಕಾರವು ವಿದ್ಯಾರ್ಥಿಗಳಿಗೆ ಸಮರ್ಪಕ ಅವಕಾಶಗಳನ್ನು ಕಲ್ಪಿಸಬೇಕು ಎಂದು ಎಐಡಿಎಸ್ಒ ಬೀದರ್ ಜಿಲ್ಲಾ ಸಂಚಾಲಕ ಹಣಮಂತ ಎಸ್ ಎಚ್ ಒತ್ತಾಯಿಸಿದರು.

ನೀಟ್ ಕೌನ್ಸಿಲಿಂಗ್ ವಿಷಯದ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಇವರು, “ಮೆಡಿಕಲ್ ಸೆಂಟ್ರಲ್ ಕೌನ್ಸಿಲ್‌ನ 3ನೇ ಮತ್ತು ಕರ್ನಾಟಕ ಪಿಜಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನ ಕೌನ್ಸಿಲಿಂಗ್ ಎರಡೂ ಕೂಡ ಒಂದೇ ಸಮಯದಲ್ಲಿ ನಡೆಯುತ್ತಿವೆ. ಮೂರನೇ ಸುತ್ತಿಗೆ ಅವಕಾಶ ನೀಡದಿದ್ದಲ್ಲಿ ಉತ್ತಮ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳು ಎರಡನೇ ಸುತ್ತಿನ ಸೀಟುಗಳನ್ನೇ ಪಡೆಯುವ ಅನಿವಾರ್ಯತೆಗೆ ಒಳಪಡುತ್ತಾರೆ. ಮೂರನೇ ಸುತ್ತಿಗೆ ಮುಂಬಡ್ತಿ ದೊರೆತಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಕಾಲೇಜನ್ನು ಪ್ರವೇಶಿಸುವ ಅವಕಾಶ ಪಡೆಯುತ್ತಾರೆ. ನೀಟ್ 2023ರಲ್ಲಿ ಅವರು ಪಡೆದಿರುವ ಅಂಕಗಳಿಗೆ ಇದು ನ್ಯಾಯಸಮ್ಮತವಾಗಿರುತ್ತದೆ” ಎಂದು ತಿಳಿಸಿದರು.

“ಮೆಡಿಕಲ್ ಸೆಂಟ್ರಲ್ ಕೌನ್ಸಿಲಿಂಗ್‌ನ ಮೂರನೇ ಸುತ್ತಿನ ಅಕ್ಟೋಬರ್ 6 ರವರೆಗೂ ಪಿಜಿ ಪ್ರವೇಶ ಪರೀಕ್ಷೆಯ ಎರಡನೇ ಸುತ್ತನ್ನು ತಡೆ ಹಿಡಿದಲ್ಲಿ ಮೆಡಿಕಲ್ ಸೆಂಟ್ರಲ್ ಕೌನ್ಸಿಲಿಂಗ್‌ನಲ್ಲಿ ಸೀಟುಗಳನ್ನು ಪಡೆದಿರುವ ವಿದ್ಯಾರ್ಥಿಗಳು ಕರ್ನಾಟಕ ಪಿಜಿ ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನಿಂದ ಹೊರ ಹೋಗುತ್ತಾರೆ. ಇದರಿಂದಾಗಿ ಬಾಕಿ ಉಳಿದ ಸೀಟುಗಳು ಕರ್ನಾಟಕದ ಆಕಾಂಕ್ಷಿಗಳಿಗೆ ಲಭ್ಯವಾಗುತ್ತವೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಪರಿಶ್ರಮಕ್ಕೆ ಇದು ನ್ಯಾಯ ಒದಗಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಒಂದು ಸಾವಿರ ವಿದ್ಯಾರ್ಥಿಗಳು ಇದರಿಂದ ಪ್ರಯೋಜನ ಪಡೆಯುತ್ತಾರೆ. ನಿಜವಾದ ಸಾಮರ್ಥ್ಯ ಮತ್ತು ಅರ್ಹತೆಯೊಂದಿಗೆ ಪ್ರವೇಶ ಪಡೆಯುವ ಸಮಾನ ಹಕ್ಕನ್ನು ಎಲ್ಲ ಆಕಾಂಕ್ಷಿಗಳು ಹೊಂದುವಂತೆ ಮಾಡುವುದು ಅತ್ಯವಶ್ಯಕವಾಗಿದೆ. ಅಸಂಖ್ಯಾತ ಅಭ್ಯರ್ಥಿಗಳ ಕನಸು ಮತ್ತು ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆಯನ್ನು ಅತ್ಯಂತ ಸೂಕ್ತವೆಂದು ಪರಿಗಣಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

“ಮೆಡಿಕಲ್ ಸೆಂಟ್ರಲ್ ಕೌನ್ಸಿಲಿಂಗ್‌ನ ಮೂರನೇ ಸುತ್ತು ಮುಗಿಯುವವರೆಗೂ ಕರ್ನಾಟಕ ಪಿಜಿ ಪ್ರವೇಶ ಪರೀಕ್ಷೆಯ ಎರಡನೇ ಸುತ್ತನ್ನು ತಡವಾಗಿ ಪ್ರಾರಂಭಿಸಬೇಕು. ಆಲ್ ಇಂಡಿಯಾ ಕೋಟಾದ ಅಭ್ಯರ್ಥಿಗಳ ಪ್ರವೇಶಾತಿ ಮುಗಿದು ಅವರು ಪಿಜಿ ಪ್ರವೇಶ ಪರೀಕ್ಷೆಯ ಕೌನ್ಸಿಲಿಂಗ್‌ನಿಂದ ಹೊರಹೋದ ಬಳಿಕ ಎರಡನೇ ಸುತ್ತಿನ ಕೌನ್ಸಿಲಿಂಗ್ ನಡೆಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸಿಲಿಂಗ್‌ನಲ್ಲಿ ಎರಡನೇ ಸುತ್ತಿನಿಂದ ಮೂರನೇ ಸುತ್ತಿಗೆ ಮುಂಬಡ್ತಿ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...