ಬೀದರ್‌ | ದೇವನಹಳ್ಳಿ ರೈತ-ಹೋರಾಟಗಾರರ ಬಂಧನ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

Date:

ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಹುಮನಾಬಾದ್‌ ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ʼಕಳೆದ 1,177 ದಿನಗಳಿಂದ ಶಾಂತಿಯುತವಾಗಿ ನಡೆದಿದ್ದ ದೇವನಹಳ್ಳಿ ರೈತರ ಪ್ರತಿಭಟನೆಯನ್ನು ಸರ್ಕಾರವು ವಿಪರೀತ ಪೊಲೀಸ್ ಬಲ ಬಳಸಿ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಮಹಿಳೆಯರು-ಮಕ್ಕಳನ್ನೂ ಒಳಗೊಂಡು ಎಲ್ಲ ಮುಂದಾಳುಗಳನ್ನೂ ಅನಾಗರಿಕವಾಗಿ ಎಳೆದಾಡಿ ವಶಕ್ಕೆ ಪಡೆದಿದೆʼ ಎಂದು ಅಕ್ಷಮ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ʼರೈತರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತೇವೆಂದು ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮದ ಭೂಮಿಯನ್ನು ಬಂಡವಾಳಿಗರ ಒಪ್ಪಿಸಲು ನಾಚಿಕೆಡಿನ ಸಂಗತಿ. ರೈತ, ಕಾರ್ಮಿಕ, ದಲಿತ, ಮಹಿಳಾ ಹಾಗೂ ಜನ ವಿರೋಧಿ ಸರ್ಕಾರಗಳ ತುಂಬಾ ದಿನ ಅಧಿಕಾರ ನಡೆಸಲು ಸಾಧ್ಯವಿಲ್ಲ. ಈ ನೆಲ ಇಂತಹ ದರ್ಪ ದೌರ್ಜನ್ಯವನ್ನು ಮೆಟ್ಟಿ ನಿಂತ ಇತಿಹಾಸವನ್ನು ನೋಡಿದೆ. ಸಿದ್ದರಾಮಯ್ಯ ಸರ್ಕಾರ ಮುಂದಿನ ಪರಿಣಾಮ ಎದುರಿಸಲು ಸಿದ್ದವಾಗಬೇಕಿದೆʼ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸರ್ಕಾರ ರೈತ ವಿರೋಧಿ ಸಂವಿಧಾನದ ಹಕ್ಕುಗಳ ವಿರೋಧಿ ಭೂಸ್ವಾಧಿನ ನೀತಿಗಳನ್ನು ಯಾವುದೇ ಕಾರಣಕ್ಕೂ ಮುಂದುವರೆಸಬಾರದು. ಹೋರಾಟ ನಿರತ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿದ್ದು ಖಂಡನೀಯ. ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಭೂಸ್ವಾಧಿನ ಪ್ರಕ್ರಿಯೆಯಿಂದ ಹಿಂಜರಿಯಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ

ಪ್ರತಿಭಟನೆಯಲ್ಲಿ ಪ್ರಮುಖರಾದ ಅಂಬುಬಾಯಿ ಮಾಳಗೆ, ಶ್ರೀದೇವಿ ಚೂಡೆ, ಪ್ರಭು ಸಂತೋಷಕರ್‌, ರೇಷ್ಮಾ ಹಂಸರಾಜ್‌, ಶಶಿಕಾಂತ ಡಾಂಗೆ, ಬಸವರಾಜ ಮಾಳಗೆ, ರೇಖಾ ಸಿಂದಬಂದಗಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...