ಬೀದರ್‌ | ಸಾಂಸ್ಕೃತಿಕ ಅಧ್ಯಯನವು ಆಧುನಿಕ ಸಂಶೋಧನೆಯ ಭಾಗ : ದುಶಾನ್ ಡೀಕ್

Date:

ಸಾಂಸ್ಕೃತಿಕ ಅಧ್ಯಯನವು ಸಮಾಜ, ರಾಜಕಾರಣ, ಆರ್ಥಿಕತೆ, ಧಾರ್ಮಿಕತೆ ಹಾಗೂ ಲಿಂಗ ರಾಜಕಾರಣಗಳಲ್ಲಿ ಕಂಡು ಬರುವ ಅಧಿಕಾರ ಮತ್ತು ಅಧೀನತೆಯ ಸಂಕಥನವಾಗಿದೆ. ಹಲವು ಸಿದ್ಧಾಂತಗಳನ್ನು ಪರಿಕಾರವಾಗಿ ಬಳಸಿ ಸಾಂಸ್ಕೃತಿಕ ಅಧ್ಯಯನ ನಡೆಸಲಾಗುತ್ತಿದೆ ಎಂದು ಸ್ಲೋವಾಕಿಯಾದ ಕೊಮೆನಿಯಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ದುಶಾನ್ ಡೀಕ್ ಹೇಳಿದರು.

ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಶೋಧಕರೊಂದಿಗೆ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ʼಸಾಂಸ್ಕೃತಿಕ ಅಧ್ಯಯನವು ಆಧುನಿಕ ಸಂಶೋಧನೆಯ ಭಾಗವಾಗಿದೆ. ಇದೊಂದು ಬೌದ್ಧಿಕ ಮತ್ತು ವೈಚಾರಿಕ ಪ್ರಕ್ರಿಯೆಯಾಗಿದೆʼ ಎಂದರು.

ʼಅಧಿಕಾರದ ರಚನೆ, ಚಾರಿತ್ರಿಕ ಸಂದರ್ಭಗಳು, ಸಮಾಜದ ಸ್ತರ ವಿನ್ಯಾಸಗಳನ್ನು ಅರ್ಥಮಾಡಿಕೊಳ್ಳಲು ಸಾಂಸ್ಕೃತಿಕ ಅಧ್ಯಯನವು ಒದಗಿದ ಅರಿವಿನ ಕಣ್ಣಾಗಿದೆ. ಮಾರ್ಕ್ಸ್ ವಾದಿ, ಸ್ತ್ರೀವಾದಿ ಸಿದ್ಧಾಂತಗಳನ್ನು ಅನ್ವಯಿಸಿ ಮಾನವಶಾಸ್ತ್ರ, ಸಮಾಜಶಾಸ್ತ್ರ ಸೇರಿ ಅಂತರ್ಶಿಸ್ತೀಯ ಅಧ್ಯಯನದ ಕ್ರಮ ಸಾಂಸ್ಕೃತಿಕ ಅಧ್ಯಯನದಲ್ಲಿ ಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಚರಿತ್ರೆಯ ರೂಪುಗೊಳ್ಳುವ ಕ್ರಮ ಯಾವಾಗಲು ಕೇಂದ್ರದಿಂದಲೇ ಅನುಸರಿಸಿದ್ದೇವೆ. ಜನ ಸಮುದಾಯದ ಸಂಸ್ಕೃತಿ, ಆಚರಣೆ, ನಂಬಿಕೆಗಳ ಒಟ್ಟು ಮೌಲ್ಯಗಳನ್ನು ಗ್ರಹಿಸಿದರೆ, ಅಂಚಿನಲ್ಲಿನರಿಗೂ ಇರುವ ಐತಿಹಾಸಿಕ ಅಸ್ಮಿತೆಯನ್ನು ಕಟ್ಟಿಕೊಡಬಹುದು. ಜನ ಸಮುದಾಯದಿಂದಲೇ ಕಲ್ಯಾಣ ನೆಲದಲ್ಲಿ ಚಳುವಳಿ ಆರಂಭವಾಯಿತು. ಜನರ ತೀವ್ರವಾದ ಅನುಭವಗಳೇ ಸೃಜನಗೊಂಡು ವಚನಗಳಾದವು. ವಚನ ಸಾಹಿತ್ಯ ತನ್ನೊಳಗೆ ಹಲವು ತಾತ್ವಿಕತೆಗಳು ಇರಿಸಿಕೊಂಡು ಇಂದಿಗೂ ಸಾಂಸ್ಕೃತಿಕ ಅಧ್ಯಯನದ ವ್ಯಾಪ್ತಿಯಲ್ಲಿ ಹಲವು ಆಯಾಮಗಳಲ್ಲಿ ವಿಶ್ಲೇಷಣೆಗೆ ಒಳಗಾಗುತ್ತಿದೆʼ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಸಾಂಸ್ಕೃತಿಕ ಅಧ್ಯಯನವನ್ನು ವಿದ್ವತ್ ವಲಯದಲ್ಲಿ, ಬೌದ್ಧಿಕ ಲೋಕದಲ್ಲಿ ವಿಮರ್ಶೆಯ ಹೊಸ ಮಾದರಿಯಾಗಿ ಈ ಕಾಲದಲ್ಲಿ ಪರಿಗಣಿಸಲಾಗುತ್ತದೆ. ಬಹುತ್ವದ ಆಯಾಮವನ್ನು ಪ್ರತಿಪಾದಿಸುವ ಸಾಂಸ್ಕೃತಿಕ ಅಧ್ಯಯನವು ಜನಪ್ರಿಯ ಸಂಸ್ಕೃತಿಯ ಕುರಿತು ಅನುಸಂಧಾನ ನಡೆಸುತ್ತಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಾತಿ ಆದಾಯ ಪ್ರಮಾಣ ಪತ್ರಕ್ಕೆ ಸಹಾಯವಾಣಿ ಆರಂಭ : ಡಿಸಿ ಶಿಲ್ಪಾ ಶರ್ಮಾ

ಡಾ.ದುಶಾನ್ ಡೀಕ್ ಅವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ವಿವೇಕಾನಂದ ಶಿಂಧೆ, ಶ್ರೀನಿವಾಸ ಉಮಾಪುರೆ, ಪವನ ಪಾಟೀಲ, ನೀಲಮ್ಮ ಮೇತ್ರೆ, ನಾಗವೇಣಿ ಬಿರಾದಾರ,ರೋಶನ್ ಬಿ, ಸಂಗೀತಾ ಮಹಾಗಾವೆ, ಗುರುದೇವಿ ಕಿಚಡೆ, ಪ್ರವೀಣ ಬಿರಾದಾರ, ಕೃಷ್ಣ ಸಸ್ತಾಪುರ, ನಾಗರಾಜ ನಾಸೆ ಅನೇಕರಿದ್ದರು. ಚನ್ನಬಸಪ್ಪ ಗೌರ ನಿರೂಪಿಸಿದರು. ಗಂಗಾಧರ ಸಾಲಿಮಠ ಸ್ವಾಗತಿಸಿದರು. ಜಗದೇವಿ ಜವಳಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...