ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ʼಬೀದರ್‌ ದರ್ಶನʼ ವಿಶೇಷ ಬಸ್‌ಗೆ ಚಾಲನೆ

Date:

ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಶನಿವಾರ ಬೀದರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅವರು ಪ್ರಸ್ತುತಪಡಿಸಿರುವ ವಿನೂತನ ಪ್ರವಾಸ ಕಾರ್ಯಕ್ರಮ ‘ಬೀದರ ದರ್ಶನ’ ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ʼಬೀದರ ಜಿಲ್ಲೆಯಲ್ಲಿರುವ ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಪರಿಸರ ಪ್ರವಾಸಿ ತಾಣಗಳಾದ ಬೀದರ ಕೋಟೆ, ಗುರುದ್ವಾರ, ಬರಿದ್ ಶಾಹಿ ಉದ್ಯಾನವನ, ಪಾಪನಾಶ ದೇವಸ್ಥಾನ, ಝರಣಿ ನರಸಿಂಹ ದೇವಸ್ಥಾನ, ಅಷ್ಟೂರ ಟೊಂಬ್ಸ್ ಮತ್ತು ಚೌಖಂಡಿ, ಬ್ಯಾಕ್ ಬಕ್ ಸಪಾರಿ, ಬಸವಕಲ್ಯಾಣದ ಅನುಭವ ಮಂಟಪ, ಬಸವಕಲ್ಯಾಣ ಕೋಟೆ, ಭಾಲ್ಕಿ ಕೋಟೆ, ಹುಮನಾಬಾದ ವಿರಭದ್ರೇಶ್ವರ ದೇವಸ್ಥಾನ, ಚಳಕಾಪುರ ಸಿದ್ಧಾರೂಢ ಮಠ, ಹನುಮಾನ ದೇವಸ್ಥಾನ ಸೇರಿದಂತೆ ಹಲವು ತಾಣಗಳಿಗೆ ಭೇಟಿ ನೀಡಲು ಈ ಬಸ್ ಸೌಲಭ್ಯ ಅನುಕೂಲ ಮಾಡಲಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪ್ರವಾಸಿಗರು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು, ವಯಸ್ಕರಿಗೆ ₹685 ಮತ್ತು ಶಾಲಾ ಮಕ್ಕಳಿಗೆ ₹400 ಟಿಕೆಟ್ ದರ ಇರುತ್ತದೆ. ರಾಜ್ಯ ಮತ್ತು ಜಿಲ್ಲೆಯ ಪ್ರವಾಸಿಗರಿಗೆ ಬಹಳ ಅನುಕೂಲವಾಗಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆʼ ಎಂದರು.

ಪ್ರವಾಸಿ ಬಸ್‌ ವೇಳಾಪಟ್ಟಿ ಹೀಗಿದೆ :

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಮಾತನಾಡಿ, ʼಪ್ರತಿದಿನ ಪ್ರವಾಸಿ ಬಸ್ ಬರಿದ್ ಶಾಹಿ ಉದ್ಯಾನವನದಿಂದ ಆರಂಭವಾಗಲಿದೆ, 6:30 ಪ್ರಾರಂಭವಾಗಿ 7:30ಕ್ಕೆ ಬ್ಲಾಕ್ ಬಕ್ ಸಪಾರಿ, 9:30ಕ್ಕೆ ಝರಣಾ, 11:30ಕ್ಕೆ ಅಷ್ಟೂರ ಟೊಂಬ್ಸ್ ಮತ್ತು ಚೌಖಂಡಿ, 1:30ಕ್ಕೆ ಗುರುನಾನಕ, 2:30 ಊಟದ ವಿರಾಮ, 4:30ಕ್ಕೆ ಬರಿದ್ ಶಾಹಿ ಉದ್ಯಾನ, 5:30ಕ್ಕೆ ಪಾಪನಾಶ ದೇವಸ್ಥಾನ, 6:30ಕ್ಕೆ ಮುಕ್ತಾಯವಾಗಲಿದೆ. ನೊಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗೆ (9845624001) ಸಂಪರ್ಕಿಸಬಹುದುʼ ಎಂದರು.

ಇದನ್ನೂ ಓದಿ : ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ಅನುರುದ್ಧ ದೇಸಾಯಿ, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಮ್ಯಾನೇಜರ್ ಶಿವಕುಮಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...