ಬೀದರ್‌ | ಮಹಿಳೆಯರನ್ನು ವಿಶೇಷ ಸ್ಥಾನಮಾನ ನೀಡಿದ ದಾಸರು : ರೇಣುಕಾ ಸ್ವಾಮಿ

Date:

ಸಾಂಪ್ರದಾಯಿಕ ಅನಿಷ್ಠ ಪದ್ದತಿಗಳಿಂದ ತುಷ್ಠಿಕರಿಸಿ ಮೂಲೆಗೆ ತಳ್ಳಿದ ಮಹಿಳೆಯರನ್ನು ದಾಸರು ವಿಶೇಷ ಸ್ಥಾನಮಾನ ನೀಡಿದ್ದಾರೆ ಎಂದು ಸಾಹಿತಿ ಡಾ.ಡಾ.ರೇಣುಕಾ ಎಂ.ಸ್ವಾಮಿ ಹೇಳಿದರು.

ಬೀದರ ನಗರದ ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆಯಲ್ಲಿ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ಆಯೋಜಿಸಿದ ʼದಾಸರ ದೃಷ್ಠಿಯಲ್ಲಿ ಸ್ತ್ರೀ ಪರಿಕಲ್ಪನೆʼ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸ್ತ್ರೀ ಸಮಾಜದ ಬುನಾದಿ, ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಹೆಣ್ಣು ಕಾರಣ. ಮಹಿಳೆ ಮನೆ, ಮನ, ಮಾನವನನ್ನು ಉದ್ಧರಿಸಬಲ್ಲಳು ಎಂಬುದಕ್ಕೆ ಪುರಂದರದಾಸರ ಜೀವನವೇ ಸಾಕ್ಷಿಯಾಗಿದೆ’ ಎಂದರು.

ʼಮಹಿಳೆಯು ತಾಯಿ, ಮಡದಿ, ಅಕ್ಕ ಹೀಗೆ ಹಲವು ಪಾತ್ರಗಳಿಂದ ಜೀವನವನ್ನು ಕಟ್ಟುವಳು. ಅದಕ್ಕೆ ಹೆಣ್ಣಿನ ಸಂತತಿ ಸಾವಿರವಾಗಲಿ, ವನಿತೆ ಬಿಟ್ಟು ತಪವಿಲ್ಲ ಎಂದಿದ್ದಾರೆ. ಹರಪನಹಳ್ಳಿ ಭೀಮವ್ವ, ಹೇಳವನಕಟ್ಟೆ ಗಿರಿಯಮ್ಮ, ಗಲಗಲಿ ಅವ್ವ , ಜೀವೂಬಾಯಿ ಅಂಬಾಬಾಯಿ, ಯಾದಿಗಿರಿಯಮ್ಮ ಇತರರು ಮಹಿಳಾ ಹರಿದಾಸರಾಗಿ ದಾಸ ಸಾಹಿತ್ಯ ಮತ್ತು ಸಮಾಜಕ್ಕೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆ ಮುಖ್ಯಗುರು ಸೈಯದ್ ಸಲಾವೋದ್ದೀನ್ ಮಾತನಾಡಿ, ʼಭಾರತೀಯ ಭಕ್ತಿ ಸಾಹಿತ್ಯ ಕ್ಷೇತ್ರದಲ್ಲಿ ದಾಸ ಸಾಹಿತ್ಯಕ್ಕೆ ವಿಶಿಷ್ಟವಾದ ಸ್ಥಾನವಿದೆ. ಅದಮ್ಯ ಭಕ್ತಿ ತಳಹದಿಯಲ್ಲಿ ರಚಿತಗೊಂಡ ಈ ಸಾಹಿತ್ಯ ಭಗವಂತ ಭಕ್ತಿ, ಬದುಕು, ಸಾಹಿತ್ಯ ಸಂಗೀತ ಗುಣಗಳ ಸಂಗಮವಾಗಿದೆ. ಧರ್ಮ, ಸತ್ಯ ಸಿದ್ಧಾಂತದ ಚೌಕಟ್ಟಿನಲ್ಲಿ ಮನುಷ್ಯನ ವ್ಯಕ್ತಿತ್ವ ವಿಕಾಸನಗೊಳಿಸುತ್ತಾ ಬದುಕು ಕಟ್ಟಿದ ಸಂಸ್ಕೃತಿ ಚಿಂತಕರು ಹರಿದಾಸರುʼ ಎಂದು ಬಣ್ಣಿಸಿದರು.

ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಅಧ್ಯಕ್ಷ ಡಾ.ರವೀಂದ್ರ ಲಂಜವಾಡಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಆರೋಗ್ಯಕರ ಸಮಾಜ ರಚನೆಗೆ ಆರೋಗ್ಯಕರ ಮನಸ್ಸುಗಳ ಅಗತ್ಯವಿದೆ. ಹರಿದಾಸರು ಆರೋಗ್ಯ ಸೂತ್ರಗಳಾದ ಸತ್ಯ, ಧರ್ಮ, ಭಕ್ತಿ, ಮಾನವೀಯತೆ, ಸತ್ಕರ್ಮಾಚರಣೆ, ಸದಾಚಾರಣೆಗಳನ್ನು ಅಮೂಲಾಗ್ರವಾಗಿ ಬೋಧಿಸಿದ್ದಾರೆ. ದಾಸರು ಜನರಲ್ಲಿ ಮನುಷ್ಯನ್ನು ಜಾಗೃತಗೊಳಿಸಿ, ಸ್ವಾಭಿಮಾನ ಮತ್ತು ನೈತಿಕ ಜೀವನ ನಡೆಸಲು ಪ್ರೇರೇಪಿಸಿದ್ದಾರೆ. ಜನ ಮನ್ನಣೆ ಪಡೆದ ಅತ್ಯಮೂಲ್ಯ ಹರಿದಾಸರ ಸಾಹಿತ್ಯವನ್ನು ಸಮಾಜಕ್ಕೆ ತಿಳಿಸುವುದು ಅಗತ್ಯವಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತುಕ್ಕು ಹಿಡಿಯುತ್ತಿವೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ ಘಟಕ!

ಕಾರ್ಯಕ್ರಮದಲ್ಲಿ ಬಾಲಮ್ಮಾ, ರಾಜಕುಮಾರ ಶೇರಿಕಾರ, ಅಹಿಲ್ಯಾವತಿ, ಬಾಲಮ್ಮಾ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...