ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣಿಗೆ ಶರಣಾದ ಘಟನೆ ಔರಾದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ರವೀಂದ್ರ ತಂದೆ ಸೋಪಾನ ಕುಂಬಾರಗೆರೆ (30) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಸೊಯಾಬೀನ್ ಮತ್ತು ತೊಗರಿ ಬೆಳೆ ಬೆಳೆದಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರು.
ಕೃಷಿಗಾಗಿ ಬ್ಯಾಂಕ್ ಮತ್ತು ಕೈಸಾಲ ತೆಗೆದುಕೊಂಡಿದ್ದರು. ಅದನ್ನು ಹೇಗೆ ತೀರಿಸಬೇಕೆಂಬ ಮನನದೊಂದು ಅ.25ರಂದು ನಸುಕಿನ ಜಾವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.





