ಬೀದರ್‌ | ಮುಂಗಾರು ಬೆಳೆಗೆ ಜಿಂಕೆ‌ಗಳ ಹಾವಳಿ; ರೈತರು ಹೈರಾಣು

Date:

ಮೊಳಕೆಯೊಡೆದ ಮುಂಗಾರು ಬೆಳೆ ತಿನ್ನಲು ನುಗ್ಗುವ ನೂರಾರು ಸಂಖ್ಯೆಯ ಜಿಂಕೆಗಳ‌ ಕಾಟಕ್ಕೆ ಬೀದರ್ ಜಿಲ್ಲೆಯ ರೈತರು ಬೇಸತ್ತಿದ್ದಾರೆ.

“ಬೀದರ್ ಜಿಂಕೆಗಳ ತಾಣವಾಗಿದೆ. ಆದರೆ, ರೈತರು ಬೆಳೆದ ಬೆಳೆಯೇ ಆಹಾರವಾಗಿ ಮಾಡಿಕೊಂಡ ಜಿಂಕೆ ಹಾಗೂ ಕೃಷ್ಣಮೃಗಗಳ ಹಿಂಡು ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ಸರ್ವನಾಶ ಮಾಡುತ್ತಿವೆ” ಎಂದು ರೈತರು ಆರೋಪಿಸಿದರು.

ಎರಡು ದಿನಗಳ ಹಿಂದೆ ಔರಾದ ತಾಲೂಕಿನ ಚಟ್ನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗಗಳು ಓಡಾಡುತ್ತಿರುವ ದೃಶ್ಯಗಳನ್ನು ಅರಣ್ಯಾಧಿಕಾರಿಗಳು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಂಕೆಗಳಿಗೆ ರೈತರ ಬೆಳೆಯೇ ಆಹಾರ

ಔರಾದ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಅರಣ್ಯ ಪ್ರದೇಶದಲ್ಲಿ ಸಾವಿರಾರು ಕೃಷ್ಣಮೃಗಗಳು ವಾಸಿಸುತ್ತಿವೆ. ತಮ್ಮ ಹಸಿವು ನೀಗಿಸಿಕೊಳ್ಳುವ ತವಕದಲಿದ್ದ ಕಾಡುಪ್ರಾಣಿಗಳು ಕಾಡಿನಲ್ಲಿ ಅಗತ್ಯವಾದ ಆಹಾರ ಸಿಗದ ಕಾರಣ ವಾಸ್ತವ್ಯ ತೊರೆದು ರೈತರ ಹೊಲಗಳಿಗೆ ನುಗ್ಗುತ್ತಿವೆ.

“ಮುಂಗಾರು ಬೆಳೆಗಳಾದ ಸೋಯಾಬೀನ್,‌ ಉದ್ದು, ತೊಗರಿ ಸೇರಿದಂತೆ ಇತರೆ ಬೆಳೆಗಳು ಜಿಂಕೆಗಳಿಗೆ ಪ್ರಿಯವಾದ ಆಹಾರ ಎನ್ನುವಂತಿದೆ.‌ ನೂರಾರು ಸಂಖ್ಯೆಯ ಹಿಂಡು ಒಮ್ಮೆ ಹೊಲಗಳಿಗೆ ನುಗ್ಗಿದ್ದರೆ ಸಾಕು ಇಡೀ ಹೊಲದ ಬೆಳೆಯನ್ನು ಮಣ್ಣುಪಾಲು ಮಾಡುತ್ತಿವೆ. ಬೆಳೆ ರಕ್ಷಿಸಿಕೊಳ್ಳಲು ರೈತರು ರಾತ್ರಿ ವೇಳೆ ಹೊಲದಲ್ಲೇ ವಾಸ್ತವ್ಯ ಹೂಡಿದರೂ ಕದ್ದುಮುಚ್ಚಿ ಬಂದು ನಾಶಪಡಿಸುತ್ತಿವೆ” ಎಂದು ರೈತರು ಅವಲತ್ತುಕೊಂಡಿದ್ದಾರೆ.

ಜಿಂಕೆ 01

ಸೋಲಾರ್ ತಂತಿ ಬೇಲಿ ಮೊರೆ ಹೋದ ರೈತರು

ಒಂದು ಕಡೆ ಮಳೆಯ ಅಭಾವ, ಇನ್ನೊಂದು ಕಡೆ ಜಿಂಕೆಗಳ ಕಾಟದಿಂದ ರೈತರು ಹೈರಾಣಾಗಿದ್ದಾರೆ. ಹಿಂಡು ಹಿಂಡಾಗಿ ಹೊಲಗಳಿಗೆ ನುಗ್ಗುವ ಜಿಂಕೆಗಳು ಎಕರೆಗಟ್ಟಲೆ ಬೆಳೆಯನ್ನು ತಿನ್ನುತ್ತಿವೆ. ಸಾಲ ಸೋಲ ಮಾಡಿ ಬೆಳೆದ ಬೆಳೆಯ ರಕ್ಷಣೆಗೆ ರೈತರೇ ಹಗಲು ರಾತ್ರಿ ಕಾವಲು ಕಾಯುವಂತಾಗಿದೆ.

ಎರಡ್ಮೂರು ವರ್ಷಗಳ ಹಿಂದೆ ಬೆಳೆ ರಕ್ಷಣೆಗೆ ಹೊಲದ ಸುತ್ತಲೂ ಸೀರೆ ಕಟ್ಟುವ ಉಪಾಯ ಮಾಡಿದರು.‌‌ ಆದರೆ ಅದರಿಂದಲೂ ರಕ್ಷಣೆಯಾಗದ ಹಿನ್ನೆಲೆಯಲ್ಲಿ ಇದೀಗ ಸೋಲಾರ್ ಬಳಕೆಗೆ ಮುಂದಾಗಿದ್ದಾರೆ.

ಜಿಂಕೆಗಳ ಕಾಟದ ಕುರಿತು ಅರಣ್ಯಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದ ಕಾರಣ ರೈತರು ಹೊಲದ ಸುತ್ತ ಕಬ್ಬಿಣದ ತಂತಿ ಬೇಲಿ ಹಾಕಿ ಸೋಲಾರ್ ಅಳವಡಿಸುವ ಮೂಲಕ ಬೆಳೆ ರಕ್ಷಿಸಿಕೊಳ್ಳಲು ಹೊಸ ಉಪಾಯ ಕಂಡುಕೊಂಡಿದ್ದಾರೆ.

ಜಿಂಕೆ

ಕೃಷ್ಣಮೃಗಗಳ ಸಂರಕ್ಷಣಾ ಮೀಸಲು ಪ್ರದೇಶ ಸಂರಕ್ಷಣೆಗೆ 2 ಕೋಟಿ ರೂ. ಅನುದಾನ

ಜಿಲ್ಲೆಯಲ್ಲಿ ಕೃಷ್ಣಮೃಗಗಳು ಹೆಚ್ಚಾಗಿ ಕಂಡು ಬರುವುದರಿಂದ ಕೃಷ್ಣಮೃಗಗಳ ಸಂರಕ್ಷಣಾ ಮೀಸಲು ಪ್ರದೇಶ ಘೋಷಣೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಶಾಸಕರಿಗೆ ತರಬೇತಿ ಕೊಟ್ಟಂತೆ ಪತ್ರಕರ್ತರಿಗೂ ತರಬೇತಿ ಅಗತ್ಯ: ಯು ಟಿ ಖಾದರ್‌

ಈ ಸಂರಕ್ಷಣಾ ಮೀಸಲು ಪ್ರದೇಶ ರಕ್ಷಣೆ ಮತ್ತು ನಿರ್ವಹಣೆಗೆ 2 ಕೋಟಿ ರೂ. ಅನುದಾನ ಕೂಡ ಘೋಷಿಸಿದ್ದಾರೆ. ಬೀದರ್ ಉಸ್ತುವಾರಿ ಸಚಿವ, ಅರಣ್ಯ ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆಯವರು ಜಿಲ್ಲೆಯವರೇ ಆಗಿರುವ ಕಾರಣ  ಹೆಚ್ಚಿನ ಆದ್ಯತೆ ಕೊಟ್ಟು ಜಿಂಕೆಗಳ ಸಂರಕ್ಷಣೆಗೆ ಮುಂದಾದರೆ ಜಿಲ್ಲೆಯ ರೈತರು ನಿಟ್ಟುಸಿರು ಬಿಡುವಂತಾಗುತ್ತದೆ ಎಂದು ರೈತರು‌‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಕೃಷ್ಣಮೃಗಗಳ ಸಂರಕ್ಷಣಾ ಮೀಸಲು ಪ್ರದೇಶ ಗುರುತಿಸಿ ಜಿಲ್ಲೆಯ ಹಲವೆಡೆ ವಾಸವಾಗಿರುವ ಜಿಂಕೆಗಳನ್ನು ಸಂರಕ್ಷಿಸಲು ‘ಜಿಂಕೆ ವನ’ ನಿರ್ಮಾಣದ ಅಗತ್ಯವಿದೆ” ಎಂದು ವನ್ಯಜೀವಿ ಪ್ರೇಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...