ಬೀದರ್‌ | ವರ್ಷಕ್ಕೆ 8 ತಿಂಗಳು ಬೋಧನೆಗೆ ಅವಕಾಶ ಕಲ್ಪಿಸಲು ಪದವಿ ಕಾಲೇಜು ಉಪನ್ಯಾಸಕರ ಆಗ್ರಹ

Date:

ಬಸವಕಲ್ಯಾಣ ತಾಲ್ಲೂಕಿನ ಖಾಸಗಿ ಪದವಿ ಕಾಲೇಜುಗಳಲ್ಲಿ ಪ್ರತಿ ವರ್ಷಕ್ಕೆ ನಾಲ್ಕು ತಿಂಗಳು ಮಾತ್ರ ಪಠ್ಯ ಬೋಧನೆಗೆ ಅವಕಾಶ ನೀಡತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ಬಸವಕಲ್ಯಾಣ ತಾಲೂಕು ಖಾಸಗಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ದೂರಿದ್ದಾರೆ.

ಈ ಸಂಬಂಧ ಸಂಘದ ಪದಾಧಿಕಾರಿಗಳು ಗುರುವಾರ ಬೀದರ್‌ ವಿಶ್ವವಿದ್ಯಾಲಯ ಕುಲಪತಿ ಬಿ.ಎಸ್.ಬಿರಾದರ್‌, ಮೌಲ್ಯಮಾಪನ ಕುಲಸಚಿವ ಪರಮೇಶ್ವರ ನಾಯಕ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ʼಬಸವಕಲ್ಯಾಣ ತಾಲ್ಲೂಕಿನ ಖಾಸಗಿ ಪದವಿ ಕಾಲೇಜುಗಳಲ್ಲಿ ಸುಮಾರು 150 ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪದವಿ ಕಾಲೇಜಿನ ಪ್ರತಿ ಸೆಮಿಸ್ಟರ್‌ಗೆ ನಾಲ್ಕು ತಿಂಗಳು ಬೋಧನೆ ಮಾಡಬೇಕು. ಆದರೆ, ಪ್ರತಿ ಸೆಮಿಸ್ಟರ್‌ಗೆ ಎರಡು ತಿಂಗಳು ಮಾತ್ರ ಉಪನ್ಯಾಸಕರನ್ನು ನೇಮಿಸಿಕೊಂಡು ಬೋಧಿಸುತ್ತಿದ್ದು, ಇದರಿಂದ ಉಪನ್ಯಾಸಕರು ಉಳಿದ ಎರಡು ತಿಂಗಳು ಕೆಲಸ ಇಲ್ಲದೆ ಜೀವನ ನಡೆಸಲು ತೊಂದರೆ ಅನುಭವಿಸುತ್ತಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪ್ರತಿ ವರ್ಷ ಒಂದು ಸೆಮಿಸ್ಟರ್‌ಗೆ ನಾಲ್ಕು ತಿಂಗಳು ಬೋಧನೆಗೆ ಅವಕಾಶ ನೀಡಬೇಕು. ಆದರೆ, ಇಲ್ಲಿನ ಕಾಲೇಜುಗಳಲ್ಲಿ ಎರಡು ತಿಂಗಳಲ್ಲೇ ಒಂದು ಸೆಮಿಸ್ಟರ್‌ ಪಠ್ಯ ಬೋಧನೆಗೆ ನೇಮಿಸಿಕೊಂಡು ಉಳಿದ ಎರಡು ತಿಂಗಳು ಕೆಲಸದಿಂದ ತೆಗೆಯುತ್ತಿದ್ದಾರೆ. ಇದರಿಂದ ವೃತ್ತಿಯನ್ನೇ ನಂಬಿದ ಉಪನ್ಯಾಸಕರು ಆರ್ಥಿಕ ತೊಂದರೆಗೆ ಒಳಗಾಗುತ್ತಿದ್ದಾರೆ. ಎರಡು ತಿಂಗಳಲ್ಲಿ ಪಠ್ಯಕ್ರಮ ಪೂರ್ಣಗೊಳ್ಳದ ಹಿನ್ನೆಲೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆʼ ಎಂದು ಹೇಳಿದರು.

ಉಪನ್ಯಾಸಕರಿಗೆ ವರ್ಷಕ್ಕೆ ಎಂಟು ತಿಂಗಳು ಬೋಧನೆಗೆ ನೇಮಿಸಿಕೊಳ್ಳಬೇಕು. ಪ್ರತಿ ಸೆಮಿಸ್ಟರ್‌ ನಾಲ್ಕು ತಿಂಗಳಂತೆ ವರ್ಷಕ್ಕೆ ಎಂಟು ತಿಂಗಳು ಬೋಧನಾ ಅವಧಿ ವಿಸ್ತರಿಸಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಖಾಸಗಿ ಪದವಿ ಕಾಲೇಜುಗಳಿಗೆ ಸೂಚಿಸಬೇಕು ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಈ ಸಂದರ್ಭದಲ್ಲಿ ಸಂಘದ ಪ್ರಫುಲ್‌ ಕುಮಾರ್‌, ಉಪಾಧ್ಯಕ್ಷ ಮಹೇಶ ಎಸ್.‌, ಕಾರ್ಯದರ್ಶಿ ಆಕಾಶ ಖಂಡಾಳೆ, ಜಂಟಿ ಕಾರ್ಯದರ್ಶಿ ಡಾ.ಜಿಯಾವುದ್ದಿನ್‌, ಸದಸ್ಯ ಅನೀಲಕುಮಾರ್‌ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...