ಬೀದರ್‌ | ಅಲೆಮಾರಿ ಜನಾಂಗಕ್ಕೆ ನಿವೇಶನ ನೀಡಿ ಸ್ಥಳಾಂತರಿಸಲು ಆಗ್ರಹ

Date:

ಬೀದರ್‌ ನಗರದ ನೌಬಾದ್‌ ಚೌಳಿ ಕಮಾನ್‌ ಸಮೀಪದ ಖಾಲಿ ಜಾಗದಲ್ಲಿ ವಾಸಿಸುವ ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡಿ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಅಲೆಮಾರಿಗಳು ಪ್ರತಿಭಟನೆ ನಡೆಸಿದರು.

ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನ ಅಂಗವಾಗಿ ಬುಧವಾರ ವಿಶ್ವಕ್ರಾಂತಿ ದಿವ್ಯಪೀಠ ಸಂಘಟನೆ ನೇತ್ರತದಲ್ಲಿ ಅಲೆಮಾರಿ ಸಮುದಾಯದ ಮಹಿಳೆಯರು, ಮಕ್ಕಳು ನಗರದ ಮಡಿವಾಳ ಮಾಚಿದೇವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಪ್ರತಿಭಟನೆ ನೇತ್ರತ್ವ ವಹಿಸಿದ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, ʼನೌಬಾದ್‌ ಸಮೀಪದ ಚೌಳಿ ಕಮಾನ್ ಹತ್ತಿರದ ಬೀದಿ ಬದಿಯಲ್ಲಿ ಸುಮಾರು 25 ವರ್ಷಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ಸುಮಾರು 84 ಅಲೆಮಾರಿ ಕುಟುಂಬಗಳು ವಾಸಿಸುತ್ತಿವೆ. ಜಿಲ್ಲಾಡಳಿತ ಇಲ್ಲಿಯವರೆಗೆ ಜಾಗ ಕೊಡುವ ಭರವಸೆ ನೀಡುತ್ತಲ್ಲೇ ಇದೆ. ಹೊರತು ಶಾಶ್ವತವಾಗಿ ನಿವೇಶನ ಒದಗಿಸಲು ಕ್ರಮಕೈಗೊಂಡಿಲ್ಲʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಲೆಮಾರಿಗಳಿಗೆ ಶಾಶ್ವತ ನಿವೇಶನ ಮಂಜೂರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಕಳೆದ ಎರಡ್ಮೂರು ವರ್ಷಗಳಿಂದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸಿ ಬೇಡಿಕೆ ಸಲ್ಲಿಸಿದರೂ ಜಿಲ್ಲಾಡಳಿತ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಅಲೆಮಾರಿಗಳು ಕನಿಷ್ಠ ಮೂಲ ಸೌಲಭ್ಯ ಇಲ್ಲದೆ ಬದುಕು ದೂಡಬೇಕಾದ ಪರಿಸ್ಥಿತಿ ಇದೆʼ ಎಂದರು.

ಬೀದರ್‌ ಹೊರವಲಯದ ಬಾಗೆ ಕಾರಂಜಾ ಗ್ರಾಮದ ಸರ್ವೆ ನಂ. 45/1ರಲ್ಲಿ ಜಾಗ ಗುರುತಿಸಿ ಅಲೆಮಾರಿ ಜನಾಂಗದವರಿಗೆ ನಿವೇಶನ ಮಂಜೂರಾತಿ ನೀಡಿ ಅಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಸದರಿ ನಿವೇಶನವನ್ನು ಸಮೀಕ್ಷೆ ನಡೆಸಿ ಅಲೆಮಾರಿಗಳಿಗೆ ಹಸ್ತಾಂತರಿಸುವಂತೆ ತಹಸೀಲ್ದಾರ್‌ ಅವರಿಗೆ ಜಿಲ್ಲಾಡಳಿತ ಸೂಚಿಸಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬಾಲಗಂಗಾಧರ ತಿಲಕರ ‘ಭಗವದ್ಗೀತಾವಾದ’ ಬಗ್ಗುಬಡಿದ ಬಾಬಾಸಾಹೇಬರು

2026ರ ಜನವರಿ 1ರ ಒಳಗಾಗಿ ಚೌಳಿ ಕಮಾನ್‌ ಸಮೀಪ ಜೋಪಡಿಗಳಲ್ಲಿ ವಾಸಿಸುವ ಅಲೆಮಾರಿ ಸಮುದಾಯಕ್ಕೆ ಬಾಗ ಕಾರಂಜಾ ಸಮೀಪದಲ್ಲಿ ನಿವೇಶನ ಒದಗಿಸಿ ಎಲ್ಲಾ ಕುಟುಂಬಗಳನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ತತ್‌ಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜನವರಿ 2ರಂದು ಜಿಲ್ಲಾಧಿಕಾರಗಳ ಕಚೇರಿ ಎದುರೆ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರೊಟ್ಟೆ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...