ಬೀದರ್ ನಗರದಲ್ಲಿ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ಪ್ರಜಾ ಸೌಧ ನಿರ್ಮಾಣ ಕಾರ್ಯ ಆರಂಭವಾಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಇರುವ ವಿವಿಧ ಇಲಾಖೆಯ ಕಚೇರಿಗಳನ್ನು ಜುಲೈ10 ರಂದು ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆ ನೂತನ ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯ ಆಗುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳು ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವ ಕಚೇರಿ ಎಲ್ಲಿಗೆ ಸ್ಥಳಾಂತರ :
ಬೀದರ್ ಜಿಲ್ಲಾಧಿಕಾರಿಗಳ ಕಚೇರಿ – ಚಿಕ್ಕಪೇಟ ರಸ್ತೆಯ ಗಾಂಧಿ ಭವನ ಸಹಾಯಕ ಆಯುಕ್ತರ ಕಚೇರಿ – ಜನವಾಡ ರಸ್ತೆಯ ಕೇಂದ್ರ ಗ್ರಂಥಾಲಯ ಕಟ್ಟಡ ಮೊದಲನೇ ಮಹಡಿ, ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ- ರೇಷ್ಮೆ ಇಲಾಖೆ ಕಟ್ಟಡ ಮೊದಲನೇ ಮಹಡಿಯ ಉಪ ನಿರ್ದೇಶಕರ ಕಚೇರಿ, ಉಪ ನೋಂದಣಾಧಿಕಾರಿಗಳ ಕಚೇರಿ – ಮೌಲಾನಾ ಆಜಾದ್ ಭವನ ಚಿಕ್ಕಪೇಟ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರ ಕಚೇರಿ -ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕರ ಕಚೇರಿ -ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆ ಸಹಾಯಕ ನಿರ್ದೇಶಕರು – ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಚೇರಿ – ಮೌಲಾನಾ ಆಜಾದ್ ಭವನ ಚಿಕ್ಕಪೇಟ
ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ, ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿ ಕಚೇರಿ-ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಪ್ರವಾಸೋದ್ಯಮ ಇಲಾಖೆ ಕಚೇರಿ- ಗುರುನಾನಕ ರಸ್ತೆಯ ಕನ್ನಡ ಭವನ ಚಿಕ್ಕಪೇಟ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರ ಕಚೇರಿ – ಚಿಕ್ಕಪೇಟ ಬೊಮ್ಮಗೊಂಡೇಶ್ವರ ಸಮುದಾಯ (ಗೊಂಡ) ಭವನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಸೋರುವ ಕೊಠಡಿಯಲ್ಲಿ ಮಕ್ಕಳ ಕಲಿಕೆ : ಜೋರು ಮಳೆ ಬಂದ್ರೆ ಶಾಲೆಗೆ ರಜೆ!





