ಬೀದರ್ | ಭಿಕ್ಷಾಟನೆಯಲ್ಲಿ ತೊಡಗಿದ್ದ 19 ಜನರನ್ನು ರಕ್ಷಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಬೀದರ್ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ನಡೆಯುವ ಸ್ಥಳಗಳಲ್ಲಿ ಸ್ಥಳ ಪರಿಶೀಲಿಸಿ 19 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಒಟ್ಟು 19 ಜನ ಭಿಕ್ಷುಕರಲ್ಲಿ 14 ಜನ ಮಕ್ಕಳಿದ್ದಾರೆ. ಇಬ್ಬರು ಮಕ್ಕಳನ್ನು ಬ್ರೀಮ್ಸ್ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗಾಗಿ ದಾಖಲು ಮಾಡಲಾಗಿದೆ. 12 ಮಕ್ಕಳನ್ನು ಹಾಗೂ 3 ಜನ ಮಹಿಳೆಯರಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಡಲಾಗಿದೆ. ಇಬ್ಬರು ಪುರುಷರನ್ನು ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಪುನರ್ವಸತಿ ಕೇಂದ್ರದಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಬೀದರ ಜಿಲ್ಲೆಯಲ್ಲಿ ಪ್ರಮುಖ ಸಾರ್ವಜನಿಕ ಸ್ಥಳ ಹಾಗೂ ದೇವಸ್ಥಾನದಲ್ಲಾ ಭಿಕ್ಷಾಟನೆಗೆ ಸಂಬಂಧಿಸಿದಂತೆ ಚಿಕ್ಕ ಕಂದಮ್ಮ, ಮಕ್ಕಳನ್ನು ದಿನದ ಬಾಡಿಗೆ ಪಡೆದು ಭಿಕ್ಷಾಟನೆಯಲ್ಲಿ ತೊಡಗಿಸುವುದು, ಮಹಿಳೆಯರು ಹಸುಗೂಸುಗಳನ್ನು ಬಳಸಿಕೊಂಡು ಭಿಕ್ಷೆ ಬೇಡುತ್ತಿರುವುದು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಥಮಿಕ ಹಂತದಲ್ಲಿಯೇ ಸಂಘಟಿತ ಭಿಕ್ಷಾಟನೆಯ ಜಾಲಗಳ ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜು.11 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಕರ್ನಾಟಕ ಭಿಕ್ಷಾಟನಾ ನಿಷೇಧ ಅಧಿನಿಯಮ 1975ರನ್ವಯ ಕರ್ನಾಟಕ ಭಿಕ್ಷಾಟನಾ ನಿಷೇಧ ಭಿಕ್ಷುಕರ ನಿಯಂತ್ರಣಕ್ಕಾಗಿ ಟಾಸ್ಕ್ ಪೊರ್ಸ್ ಸಮತಿ ಸಭೆ ಕರೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರದಿಂದ ವಹಿಸಲಾದ ಜವಾಬ್ದಾರಿಗಳನ್ನು ನಿಯಮಾನುಸಾರ ಕಟ್ಟು ನಿಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

‘ಭಿಕ್ಷುಕರು ನಿಯಂತ್ರಣಕ್ಕೆ ಕೇವಲ ಕಾನೂನು ಪ್ರಾಯೋಗಿಕ ಕ್ರಮವಷ್ಟೇ ಸಾಲದು. ಮಾನವಿಯತೆ, ಪುನರ್ವಸತಿ ಮತ್ತು ಸಮಾನ ಹಕ್ಕುಗಳು ನೀಡಲು ಸಮಗ್ರ ಕ್ರಮ ಅಗತ್ಯವಿದೆ. ಸರ್ಕಾರ, ಸಮಾಜ, ಸಂಘ- ಸಂಸ್ಥೆಗಳು ಹಾಗೂ ನಾಗರಿಕರು ಕೈಜೊಡಿಸಿದಾಗ ಶಾಶ್ವತ ಪರಿಹಾರ ಸಾಧ್ಯ. ಭಿಕ್ಷಾಟನೆ ಒಂದು ಗಂಭಿರ ಸಾಮಾಜಿಕ ಸಮಸ್ಯೆ ಅಲ್ಲದೇ ನಗರಗಳ ಸೌಕರ್ಯ ಮತ್ತು ಶಿಸ್ತಿಗೆ ಅಡ್ಡಿಯಾಗುತ್ತಿರುವ ಪ್ರಕರಣವಾಗಿದೆ’ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಭಿಕ್ಷಾಟನೆಯನ್ನು ನಿಯಂತ್ರಣಕ್ಕೆ ಕರ್ನಾಟಕ ಭಿಕ್ಷಾಟನೆ ನಿಷೇಧ ಅಧಿನಿಯಮ 1975 ಈ ಕಾಯ್ದೆಯಂತೆ ಭಿಕ್ಷಾಟನೆ ಮಾಡುವುದು ನಿಷೇದಿಸಲಾಗಿದೆ. ಸಂಪತ್ತು ಇರುವ ಭಿಕ್ಷುಕರನ್ನು ಹಾಗೂ ಬಾಲ ನ್ಯಾಯ ಕಾಯ್ದೆ 2015ರ ಪ್ರಕಾರ ಮಕ್ಕಳನ್ನು ಬಿಕ್ಷಾಟನೆಗೆ ಬಳಸಿದ್ದಲ್ಲಿ 3 ವರ್ಷ ಜೈಲು ಹಾಗೂ 1 ಲಕ್ಷ ದಂಡ ಮತ್ತು ಹಂತವರ ವಿರುದ್ಧ ಕಠಿಣ ಶಿಕ್ಷೆ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬಂದರೆ ಕೂಡಲೇ 1098 ಗೆ ಕರೆ ಮಾಹಿತಿ ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಜಿಲ್ಲೆಯಲ್ಲಿ ಬೇಟರಮೆಂಟ ಫೌಡೇಶನ್ ವತಿಯಿಂದ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವರ ಸುಮಾರು 70 ಜನರಿಗೆ ರೇಷನ್ ಸರಬರಾಜು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದರಂತೆ ಜಿಲ್ಲೆಯ ಇನ್ನಿತರ ಸಂಸ್ಥೆಗಳು ಈ ಕಾರ್ಯಕ್ಕೆ ಮುಂದೆ ಬರಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...