ಬೀದರ್‌ | ಧರ್ಮದಾರಿತ ದೇಶ ವಿಭಜನೆ ಸಲ್ಲದು: ಮಾವಳ್ಳಿ ಶಂಕರ

Date:

ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಕಾರ್ಯ ಸಲ್ಲದು. ಆರ್‌ಎಸ್‌ಎಸ್ ಸಂಘಟನೆ ಮಾಡುವ ತಾರತಮ್ಯ ನೀತಿಗೆ ನಮ್ಮ ಬೆಂಬಲವಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ತಿಳಿಸಿದರು.

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‌ʼಇಂದು ದೇಶದಲ್ಲಿ ಉದಾರಿಕರಣ, ಜಾಗತಿಕರಣದಿಂದ ಎಲ್ಲವೂ ಖಾಸಗೀಕರಣಗೊಳಿಸುವ ಹುನ್ನಾರ ನಡೆಯುತ್ತಿದೆ. ದಲಿತರ, ಹಿಂದುಳಿದವರ ಮತ್ತು ಶೋಷಿತರ ಹಕ್ಕುಗಳನ್ನು ಕಸಿಯುವ ವ್ಯವಸ್ಥಿತ ಷಡ್ಯಂತ ನಡೆಯುತ್ತಿದೆʼ ಎಂದರು.

ʼಆರ್‌ಎಸ್‌ಎಸ್ ಮುಖಂಡ ಮೋಹನ ಭಾಗವತ್ ಅವರು ವಿಷಕಾರಿ ಮಾತುಗಳನ್ನು ಆಡುತ್ತಿರುತ್ತಾರೆ. ಆದರೆ, ದಲಿತರ, ರೈತರ ಮತ್ತು ಮಹಿಳೆಯರ ಮೇಲೆ ಆಗುವ ದೌರ್ಜನ್ಯದ ಬಗ್ಗೆ ಮಾತನಾಡುವುದಿಲ್ಲ. ಇದು ಹೀಗೆ ಮುಂದುವರೆದರೆ ಸಂವಿಧಾನ ಅಪಾಯಕ್ಕೆ ಸಿಲುಕುವ ಸಂಭವವಿದೆ. ʼಯಾವುದೇ ಸರ್ಕಾರಗಳಿರಲಿ ಅಖಂಡ ರಾಷ್ಟ್ರದ ಪರಿಕಲ್ಪನೆ ಹೊಂದಬೇಕೆ ವಿನಃ ವಿಭಜಿಸುವ ಕಾರ್ಯಕ್ಕೆ ಮುಂದಾಗಬಾರದುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಂವಿಧಾನದ ನಿಜಾಂಶಗಳು ಜನತೆಗೆ ತಲುಪುತ್ತಿಲ್ಲ. ಪ್ರಧಾನಮಂತ್ರಿಗಳ ಮಾತು ಕೇಳುತ್ತಿದ್ದರೆ ದೇಶ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬ ಆತಂಕ ಕಾಡುತ್ತಿದೆ. ದಲಿತ ಸಂಘರ್ಷ ಸಮಿತಿಯು ಜನತೆಗೆ ಸತ್ಯ ತಿಳಿಸುವ ಕಾರ್ಯ ಮಾಡುತ್ತಿದೆ. ಆರ್‌ಎಸ್‌ಎಸ್ ಮತ್ತು ಡಿಎಸ್‌ಎಸ್ ಮಾಡುವ ಕಾರ್ಯಗಳ ಕುರಿತು ಚರ್ಚೆ ಆಗಬೇಕಾಗಿದೆ ಎಂದರಲ್ಲದೆ, ಬೀದರನಿಂದಲೇ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವಕ್ಕೆ ಚಾಲನೆ ನೀಡುತ್ತಿದ್ದೇವೆ. ಜಾತಿ ಮತ ಪಂಥಗಳ ಭೇದವಿಲ್ಲದೆ ಸದಸ್ಯರಾಗಬಹುದು. 1 ಲಕ್ಷ ಸದಸ್ಯತ್ವದ ಗುರಿ ಹೊಂದಿದ್ದೇವೆ’ ಎಂದು ಶಂಕರ್ ತಿಳಿಸಿದರು.

WhatsApp Image 2025 11 26 at 7.28.21 PM
ದಲಿತ ಸಂಘರ್ಷ ಸಮಿತಿಯ ಸದಸ್ಯತ್ವಕ್ಕೆ ಚಾಲನೆ ನೀಡಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ದಲಿತ ಮಹಿಳಾ ಒಕ್ಕೂಟದ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ ಮಾತನಾಡಿ, ʼಸಂವಿಧಾನಾತ್ಮಕವಾಗಿ ನೊಂದಾಯಿತ ಸಂಘಟನೆ ಅಲ್ಲದಿದ್ದರೂ ಆರ್‌ಎಸ್‌ಎಸ್ ಸಂಘಟನೆ ಜನರಿಗೆ ಭಾವನಾತ್ಮಕವಾಗಿ ಉದ್ರೇಕಕ್ಕೆ ತಳ್ಳುತ್ತ ದೇಶದ ಮುಖ್ಯ ಅಂಶಗಳ ಕಡೆಗೆ ವಿಮುಖರನ್ನಾಗಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿಯು ನ್ಯಾಯ ಸಮಾನತೆ, ಸಮಸಮಾಜದ ಪರಿಕಲ್ಪನೆ ಇಟ್ಟುಕೊಂಡು ದುಡಿಯುತ್ತಿದೆʼ ಎಂದರು.

ಇದನ್ನೂ ಓದಿ : ನ.30ರಂದು ಕಲಬುರಗಿಯಲ್ಲಿ ʼಈ ದಿನʼ ಓದುಗರ ಸಮಾವೇಶ; ʼಜೈ ಹಿಂದ್-ಜಯ ಕರ್ನಾಟಕʼ ವಿಶೇಷ ಸಂಚಿಕೆ ಬಿಡುಗಡೆ

ಪತ್ರಕರ್ತ ಎನ್.ನಾಗರಾಜ್, ದಸಂಸ ಜಿಲ್ಲಾ ಸಂಚಾಲಕ ರಮೇಶ ಮಂದಕನಳ್ಳಿ ಹಾಗೂ ಪ್ರಮುಖರಾದ ರಾಜಕುಮಾರ ಬನ್ನೇರ್, ನಾಗಣ್ಣ ಬಡಿಗೇರ್, ರಾಮಣ್ಣ ಕಲದೇವನಹಳ್ಳಿ, ರಂಜಿತಾ ಜೈನೂರ್, ಜಗದೇವಿ ಭಂಡಾರಿ, ದೈವಶೀಲಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...