ಬೀದರ್‌ | ರೈತರ ತಾಳ್ಮೆ ಪರೀಕ್ಷಿಸಬೇಡಿ, ಕಬ್ಬಿಗೆ ₹3,100 ಬೆಲೆ ಕೊಡಿ : ಅರವಿಂದಕುಮಾರ್‌ ಅರಳಿ

Date:

ಕಬ್ಬಿಗೆ ₹3,100 ಬೆಲೆ ನಿಗದಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಪರೀಕ್ಷಿಸಬೇಡಿ. ಕೂಡಲೇ ಬೆಲೆ ನಿಗದಿಪಡಿಸಿ ಕಬ್ಬು ಬೆಳೆಗಾರರ ಹಿತ ಕಾಪಾಡಬೇಕೆಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಈ ಹಿಂದೆ ರೈತರನ್ನು ಬೆಂಬಲಿಸಿ ತಮಗೆ ಪತ್ರ ಬರೆದು ಪ್ರತಿ ಟನ್ ಕಬ್ಬಿಗೆ ₹3,000 ನೀಡುವಂತೆ ಮನವಿ ಸಲ್ಲಿಸಿದ್ದೇನೆ. ಆದರೆ ತಮ್ಮ ಮಾತಿಗೆ ಸಕ್ಕರೆ ಕಾರ್ಖಾನೆ ಮಾಲಿಕರು ಬಗ್ಗುತ್ತಿಲ್ಲದಂತೆ ಕಾಣುತ್ತದೆ ಅಥವಾ ಯಾವುದಾದರು ಒತ್ತಡಕ್ಕೆ ಮಣಿಯುತ್ತಿರುವ ಅನುಮಾನ ಮೂಡುತ್ತಿದೆʼ ಎಂದು ಮಂಗಳವಾರ ಜಿಲ್ಲಾಧಿಕಾರಿಗಳ ಹೆಸರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ನೇತ್ರತ್ವ ರಾಜ್ಯ ಸರ್ಕಾರ ರೈತರ ಬೇಡಿಕೆಯಂತೆ 11.25 ರಿಕವರಿಗೆ ₹3,300 ಹಾಗೂ 10.25ರಷ್ಟು ಇರುವ ರಿಕವರಿಗೆ ₹3,200 ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಯಾವುದೇ ಸಕ್ಕರೆ ಕಾರ್ಖಾನೆಯು 10 ರಿಕವರಿ ಇರುವ ಕಬ್ಬು ನುರಿಸುತ್ತದೆ. ಅದರಂತೆ ನಮ್ಮ ಜಿಲ್ಲೆಯ ರೈತರು ಪ್ರತಿ ಟನ್ ಕಬ್ಬಿಗೆ ₹3,100 ರೂಪಾಯಿ ಕೇಳುತ್ತಿರುವುದರಲ್ಲಿ ತಪ್ಪೆನಿದೆ. ಅದಕ್ಕೆ ನಾನು ₹3,100 ಬೇಡ ಕನಿಷ್ಠ ₹3,000 ಆದರೂ ಘೋಷಿಸಿ ಎಂದು ಮನವಿ ಮಾಡಿದೆ. ಆದರೆ ಜಿಲ್ಲಾಡಳಿತ ಸಕ್ಕರೆ ಕಾರ್ಖಾನೆಯವರ ಮನವೋಲಿಸಿ ರೈತರಿಗೆ ವೈಜ್ಞಾನಿಕ ದರ ಕೊಡಿಸುವಲ್ಲಿ ವಿಫಲರಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತರು ಅನ್ನದಾತರು ಅವರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ನಮ್ಮ ಜಿಲ್ಲೆ ರೈತರು ಮಗ್ಧರು, ಹೀಗಾಗಿ ಜಿಲ್ಲಾಡಳಿತಕ್ಕೆ ಸಹಕಾರ ಮಾಡುತ್ತಾರೆ. ಆದರೆ, ರೈತರನ್ನು ಬೀದಿಗೆ ತಳ್ಳುವುದು ಸರಿಯಾದ ಬೆಳವಣಿಗೆ ಅಲ್ಲ. ರೈತರ ಬೇಡಿಕೆಗೆ ಕಾರ್ಖಾನೆ ಮಾಲೀಕರು ಒಪ್ಪದಿದ್ದಲ್ಲಿ ಕಾರ್ಖಾನೆಗಳು ರೈತರಿಗೆ ಹಸ್ತಾಂತರಿಸಲಿ. ರೈತರನ್ನು ಮತ್ತೆ ರಸ್ತೆಗೆ ಇಳಿಯುವಂತೆ ಅವಕಾಶ ಮಾಡಿಕೊಡಬೇಡಿʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಪರವಾಗಿದ್ದಾರೆ. ಅದನ್ನು ಮರೆಯದೆ ಮೂರನಾಲ್ಕು ಜನರ ಮಾತು ಕೇಳಿ ಲಕ್ಷಾಂತರ ರೈತರನ್ನು ದಮನ ಮಾಡಲು ಹೋಗಬೇಡಿ. ರೈತರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕಾರ್ಖಾನೆಯವರಿಗೆ ಒಪ್ಪಿಸಿ ಕಬ್ಬಗೆ ₹3,100 ಬೆಲೆ ನಿಗದಿಪಡಿಸದಿದ್ದರೆ ನಾನು ಜಿಲ್ಲಾಡಳಿತ ಮತ್ತು ಕಾರ್ಖಾನೆಗಳ ವಿರುದ್ಧ ರೈತರೊಂದಿಗೆ ಧರಣಿ ನಡೆಸುವೆʼ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...