ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

Date:

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೀದರ್‌ ನಗರದ ಶಹಾಗಂಜ ಬಡಾವಣೆಯು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ʼ2022ರಲ್ಲಿ ಮದುವೆ ಸಮಯದಲ್ಲಿ 5 ತೊಲೆ ಬಂಗಾರ ಹಾಗೂ ₹5 ಲಕ್ಷ ವರದಕ್ಷಿಣೆ ನೀಡುವುದಾಗಿ ಮಾತಾಗಿತ್ತು. 2022ರ ಡಿಸೆಂಬರ್‌ನಲ್ಲಿ ಮದುವೆ ನಿಗದಿಯಾಗಿತ್ತು. ಮದುವೆ ಮುಂಚೆಯೇ ₹5 ಲಕ್ಷ ವರದಕ್ಷಿಣೆ ಗಂಡನ ಮನೆಯವರು ತೆಗೆದುಕೊಂಡಿದ್ದರು. ಮದುವೆ ವೇಳೆ ನನ್ನ ಹಾಗೂ ಗಂಡನಿಗೆ 5 ತೊಲೆ ಬಂಗಾರದ ಆಭರಣಗಳು ಮಾಡಿಕೊಟ್ಟಿದ್ದರುʼ ಎಂದಿದ್ದಾರೆ.

ʼಮದುವೆಯಾದ ವರ್ಷದವರೆಗೆ ಎಲ್ಲರೂ ಚನ್ನಾಗಿಯೇ ಇದ್ದರು. ಬಳಿಕ ಮದುವೆ ಸಂದರ್ಭದಲ್ಲಿ ಹೆಚ್ಚಿನ ವರದಕ್ಷಿಣೆ ನೀಡಲಿಲ್ಲ. ಇನ್ನೂ 2 ತೊಲೆ ಬಂಗಾರ ₹2 ಲಕ್ಷ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಗಂಡ ಸೇರಿದಂತೆ ಅತ್ತೆ, ಮಾವ, ಮೈದುನ ಎಲ್ಲರೂ ಕಿರುಕುಳ ಕೊಟ್ಟು ನನ್ನ ಗಂಡ ದೈಹಿಕ ಹಲ್ಲೆ ಮಾಡಿದ್ದಾರೆ. ಈ ವಿಷಯ ನನ್ನ ತವರು ಮನೆಯವರಿಗೆ ತಿಳಿಸಿದಾಗ ನನ್ನ ತಂದೆ, ಸಹೋದರ ಬಂದು ಕಲಬುರಗಿ ಜಿಲ್ಲೆಯ ನನ್ನ ತವರೂರು ಆಳಂದಗೆ ಕರೆದುಕೊಂಡು ಹೋಗಿದ್ದರುʼ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎರಡು ತಿಂಗಳ ಕಳೆದ ನಂತರ ಗಂಡ ಸೇರಿದಂತೆ ಎಲ್ಲರೂ ನನ್ನ ತವರು ಮನೆಗೆ ಬಂದು ʼನಮ್ಮಿಂದ ತಪ್ಪಾಗಿದೆ, ಚನ್ನಾಗಿ ಇರುತ್ತೇವೆʼ ಎಂದು ಹೇಳಿ ಬೀದರ್‌ಗೆ ಕರೆದುಕೊಂಡು ಬಂದಿದ್ದರು. ಸ್ವಲ್ಪ ದಿನಗಳ ಬಳಿಕ ʼನಿನಗೆ ವರದಕ್ಷಿಣೆ ತರಲು ಹೇಳಿದರೂ ತಂದಿಲ್ಲʼ ಪುನಃ ಕಿರುಕುಳ ಕೊಟ್ಟು ಅವಾಚ್ಯ ಶಬ್ದಗಳಿಂದ ಬೈಯುವುದು ಮಾಡಿದ್ದಾರೆ. 2025ರ ಜುಲೈ 9ರಂದು ರಾತ್ರಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಗಂಡ, ಮಾವ, ಅತ್ತೆ, ಮೈದುನ ಹಾಗೂ ನೆಗೆಣಿ ಸೇರಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೊಡೆಯುವುದು ಮಾಡುತ್ತಿದ್ದರುʼ ಎಂದು ಆರೋಪಿಸಿದರು.

ʼಗಂಡ, ಮಾವ, ಅತ್ತೆ ಸೇರಿದಂತೆ ಮನೆಯವರೆಲ್ಲರೂ ನನ್ನನ್ನು ಹೊಡೆದು ಗಾಯಗೊಳಿಸಿದ್ದರು. ವರದಕ್ಷಿಣೆ ತರದಿದ್ದರೆ ನಮ್ಮ ಮನೆಗೆ ಬರಬೇಡಾ, ನಮ್ಮ ಮಗನಿಗೆ ಬೇರೆ ಮದುವೆ ಮಾಡುತ್ತೇವೆ. ಬಂದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಭಯದಿಂದ ನಮ್ಮ ಪೋಷಕರು ನನ್ನ ತವರು ಮನೆಗೆ ಜುಲೈ 10ರಂದು ತವರು ಮನೆಗೆ ಕರೆದು ಹೋಗಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯ : ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

ದೂರಿನ್ವಯ ಶಹಾಗಂಜನ ಮಹಿಳೆ ಪೂಜಾ ಅವರ ಪತಿ ಆಕಾಶ, ಮಾವ ಸೂರ್ಯಕಾಂತ, ಮೈದುನ ಸಾಗರ, ರಾಹುಲ್‌ ಹಾಗೂ ನೆಗೆಣಿ ವಿಜಯಲಕ್ಷ್ಮಿ ಸೇರಿ ಒಟ್ಟು ಏಳು ಜನರ ವಿರುದ್ಧ ವಿರುದ್ಧ ಐಪಿಸಿಯ ಕಲಂ 85, 115(2), 352, 351(2) ಜೊತೆ 3 (5) ಬಿಎನ್‌ಎಸ್ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಕಲಂ 3 ಮತ್ತು 4ರಡಿ ಬೀದರ್‌ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...