ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನದಂದು ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷರೂ ಆದ ಅಭಿಯಾನದ ಸಂಚಾಲಕ ಮಹೇಶ ಗೊರನಾಳಕರ್ ತಿಳಿಸಿದ್ದಾರೆ.
ʼಡಿ.6 ರಿಂದ 2026ರ ಏಪ್ರಿಲ್ 14ರವರೆಗೆ ನಡೆಯುವ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನದ ಚಾಲನೆ ಕಾರ್ಯಕ್ರಮವು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದಂದು ಬೀದರ್ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಸಂಜೆ 4 ಗಂಟೆಗೆ ಸಾಂಕೇತಿಕವಾಗಿ ಚಾಲನೆ ದೊರೆಯಲಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂಜ್ಯ ಭಂತೆ ವರಜ್ಯೋತಿ ಚಾಲನೆ ನೀಡುವವರು. ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಅಧ್ಯಕ್ಷತೆ ವಹಿಸುವರು. ಅಭಿಯಾನ ಅನುಷ್ಠಾನ ಸಮಿತಿ ಸರ್ವ ಪದಾಧಿಕಾರಿಗಳು ಅತಿಥಿಗಳಾಗಿ ಭಾಗವಹಿಸುವರು.
ಇದನ್ನೂ ಓದಿ : ಬೀದರ್ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ
ಕಾರ್ಯಕ್ರಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಗಳು, ಬೌದ್ಧ ಉಪಾಸಕ, ಉಪಾಸಕಿಯರು , ಹೋರಾಟಗಾರರು, ಸಾಹಿತಿಗಳು, ಚಿಂತಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಭಿಯಾನದ ಸಂಚಾಲಕರಾದ ಮಹೇಶ ಗೋರನಾಳಕರ್ ಕೋರಿದ್ದಾರೆ.





