ಬೀದರ್‌ | ಬತ್ತಿದ ಜಲಮೂಲ : ವನ್ಯಜೀವಿಗಳ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

Date:

ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನ-ಜಾನುವಾರುಗಳಿಗೆ ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ಕಾಡು ಒಣಗಿ ಹೋಗುತ್ತಿದೆ. ಕಾಡಿನಲ್ಲಿರುವ ಹಳ್ಳ, ಕೊಳ್ಳ, ಕೆರೆಕಟ್ಟೆಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ. ಇದರಿಂದ ನೀರಿನ ಅಭಾವ ಎದುರಾಗಿದ್ದು, ವನ್ಯಜೀವಿಗಳ ದಾಹ ನೀಗಿಸಲು ಟ್ಯಾಂಕರ್‌ಗಳ ಮೂಲಕ ಕೃತಕ ತೊಟ್ಟಿ ತುಂಬಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಔರಾದ್-ಕಮಲನಗರ ತಾಲ್ಲೂಕು ಸೇರಿ ಸುಮಾರು 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಜಿಂಕೆ, ನವಿಲು, ಕೃಷ್ಣ ಮೃಗ, ನರಿ, ಕಾಡು ಹಂದಿ, ಮುಳ್ಳಹಂದಿ, ತೋಳ ಸೇರಿದಂತೆ ವಿವಿಧ ಜಾತಿಯ ಪ್ರಾಣಿ, ಪಕ್ಷಿಗಳು ಈ ಅರಣ್ಯ ಪ್ರದೇಶದಲ್ಲಿವೆ.

ಪ್ರಾಣಿ-ಪಕ್ಷಿಗಳಿಗೆ ಕಾಡಿನಲ್ಲಿರುವ ಕೆರೆ ಕಟ್ಟೆಗಳೇ ನೀರಿನ ಮೂಲ. ಅವು ಆ ನೀರು ಕುಡಿಯಬೇಕು, ಅಲ್ಲೇ ವಿಶ್ರಾಂತಿ ಪಡೆದು ಜೀವ ತಂಪಾಗಿಸಿಕೊಳ್ಳಬೇಕು. ಆದರೆ ಕೆಂಡದಂತಹ ಬಿಸಿಲಿಗೆ ತಾಲ್ಲೂಕಿನ ಜಲಮೂಲ ಬತ್ತಿ ಹೋಗಿದ್ದು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ಪ್ರದೇಶದ ಒಳಭಾಗದಲ್ಲಿರುವ ಕೆರೆ–ಕಟ್ಟೆ, ಹಳ್ಳಗಳು ಬತ್ತಿ ಹೋಗಿದ್ದು, ಎಲ್ಲೆಡೆ ನೀರಿಗಾಗಿ ಹಾಹಾಕಾರ ಕಂಡು ಬಂದಿದೆ. ವನ್ಯಜೀವಿಗಳು ನೀರನ್ನು ಅರಸಿ ವಸತಿ ಪ್ರದೇಶಗಳು ಹಾಗೂ ರೈತರ ತೋಟಗಳತ್ತ ಧಾವಿಸುತ್ತಿವೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಅರಣ್ಯ ಇಲಾಖೆ ಅಧಿಕಾರಿಗಳು ವಿವಿಧ ಅರಣ್ಯ ಪ್ರದೇಶಗಳಲ್ಲಿ ನೀರು ಸಂಗ್ರಹ ತೊಟ್ಟಿ ವ್ಯವಸ್ಥೆ ಮಾಡಿದ್ದಾರೆ.

ಔರಾದ್‌-ಕಮಲನಗರ ಅವಳಿ ತಾಲ್ಲೂಕಿನ ಚಟ್ನಾಳ, ಗಡಿಕುಶನೂರ, ಆಲೂರ(ಕೆ), ಬಾಲೂರ್(ಕೆ), ಖಾನಾಪುರ, ಆಲೂರ(ಬಿ) ಹಾಗೂ ಚಿಂತಾಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ 5 ಅಡಿ ಆಳ ಮತ್ತು 3 ಮೀಟರ್ ಸುತ್ತಳತೆಯ ಕೃತಕ ಸಿಮೆಂಟ್ ತೊಟ್ಟಿಗಳು ನಿರ್ಮಿಸಲಾಗಿದೆ.

WhatsApp Image 2025 03 16 at 8.19.11 PM
ಔರಾದ್‌ ತಾಲ್ಲೂಕಿನ ಗಡಿಕುಶನೂರ ಅರಣ್ಯ ಪ್ರದೇಶ ನಿರ್ಮಿಸಲಾದ ಸಿಮೆಂಟ್‌ ತೊಟ್ಟಿಯಲ್ಲಿ ನೀರು ತುಂಬುತ್ತಿರುವ ಅರಣ್ಯ ಸಿಬ್ಬಂದಿ

ʼಕಳೆದ ಎರಡ್ಮೂರು ವರ್ಷದ ಹಿಂದೆ ಔರಾದ್ ವಲಯದ ಅರಣ್ಯ ಪ್ರದೇಶದಲ್ಲಿ 7 ನೀರಿನ ಸಿಮೆಂಟ್‌ ಗುಂಡಿ ನಿರ್ಮಿಸಲಾಗಿದೆ. ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ನೀರು ತುಂಬಿಸಿ ವನ್ಯಜೀವಿಗಳಿಗೆ ಅನುಕೂಲ ಮಾಡಲಾಗುತ್ತಿದೆ. ಪ್ರತಿಯೊಂದು ನೀರಿನ ಗುಂಡಿಗೆ 2 ಟ್ಯಾಂಕರ್‌ ನೀರನ್ನು ಪ್ರತಿ 20 ರಿಂದ 25 ದಿನಗಳಿಗೆ ಒಮ್ಮೆ ಪೂರೈಕೆ ಮಾಡಲಾಗುತ್ತಿದೆʼ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ʼಬೇಸಿಗೆಯಲ್ಲಿ ಸಹಜವಾಗಿ ನೀರಿನ ಮೂಲಗಳು ಬತ್ತಿ ಹೋಗುತ್ತವೆ. ಪ್ರತಿ ವರ್ಷದಂತೆ ಈ ಬಾರಿಯೂ ಅರಣ್ಯ ಪ್ರದೇಶದ ವಿವಿಧೆಡೆ ಸಿಮೆಂಟ್‌ ತೊಟ್ಟಿಗಳಲ್ಲಿ ಟ್ಯಾಂಕರ್ ಮೂಲಕ ನೀರು ತುಂಬಿಸಿ ವನ್ಯಜೀವಿಗಳ ಬಾಯಾರಿಕೆ ತಣಿಸಲಾಗುತ್ತಿದೆ. ಬೇಸಿಗೆ ಮುಗಿಯುವರೆಗೆ ನೀರಿನ ತೊಟ್ಟಿಗಳಲ್ಲಿ ನೀರು ಸಂಗ್ರಹ ಮಾಡಲಾಗುತ್ತದೆʼ ಎಂದು ವಲಯ ಅರಣ್ಯಾಧಿಕಾರಿ ಮುದಾಶೀರ್‌ ಅಹ್ಮದ್‌ ʼಈದಿನ.ಕಾಮ್‌ʼಗೆ ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...