ಬೀದರ್‌ | ಬಸವಕಲ್ಯಾಣದಲ್ಲಿ ʼದಸರಾ ದರ್ಬಾರ್‌ʼ : ಅಡ್ಡಪಲ್ಲಕ್ಕಿ ವಿರೋಧಿಸಿ ಹಿಂದೆ ಸರಿದ ಹಾರಕೂಡ ಶ್ರೀ!

Date:

ಬಸವಣ್ಣನವರ ಕಾಯಕದ ಪುಣ್ಯ ಭೂಮಿಯಲ್ಲಿ ಬಸವಣ್ಣನವರ ಆಶಯದಂತೆ ಮತ್ತು ತತ್ವ ಸಿದ್ಧಾಂತಕ್ಕೆ ಧಕ್ಕೆ ಬರಬಾರದೆಂಬ ಉದ್ದೇಶದಿಂದ ಬಸವಕಲ್ಯಾಣ ನಗರದಲ್ಲಿ ಸೆ.22ರಿಂದ ಅ.2ರವರೆಗೆ ರಂಭಾಪುರಿ ಸ್ವಾಮೀಜಿ ನೇತ್ರತ್ವದಲ್ಲಿ ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್‌ ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಬಸವಕಲ್ಯಾಣ ಹಾರಕೂಡ ಸಂಸ್ಥಾನ ಮಠದ ಚನ್ನವೀರ ಶಿವಚಾರ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ರಂಭಾಪುರಿ ಪೀಠದ ʼಮಾನವ ಧರ್ಮಕ್ಕೆ ಜಯವಾಗಲಿʼ ಎಂಬ ಘೋಷ ವಾಕ್ಯದ ಉದ್ದೇಶದಂತೆ ಅಡ್ಡಪಲ್ಲಕ್ಕಿ ಮೆರವಣಿಗೆಯನ್ನು ನಮ್ಮ ಸಮಿತಿಯ ತೀರ್ಮಾನದಂತೆ ಭಕ್ತರು ಹೊರುವ ಬದಲು ಅಲಂಕೃತ ವಾಹನದಲ್ಲಿ ಮಾಡಬೇಕೆಂದು ಈ ಹಿಂದೆ ತೀರ್ಮಾನಿಸಲಾಗಿತ್ತು. ಈಗ ರಂಭಾಪುರಿ ಶ್ರೀಗಳು ಅವರ ಪೀಠದ ಪರಂಪರೆಯಂತೆ ಭಕ್ತರ ಹೆಗಲ ಮೇಲೆಯೇ ಪಲ್ಲಕ್ಕಿ ಉತ್ಸವ ಮಾಡಿಕೊಳ್ಳುತ್ತೇವೆ ಎಂದು ಹಠ ಹಿಡಿದಿರುವ ಕಾರಣ ಈ ಸಮಾರಂಭದಿಂದ ಹಿಂದೆ ಸರಿದಿದ್ದೇನೆ ಎಂದು ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀಗಳ ಬರೆದ ಪತ್ರದಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೆಲ ತಿಂಗಳ ಹಿಂದೆ ಭಕ್ತರು ಮತ್ತು ಕೆಲವು ಮಠಾಧೀಶರು ಸಭೆ ಸೇರಿ ರಂಭಾಪುರಿ ಜಗದ್ಗುರುಗಳ ವಾರ್ಷಿಕ ʼದಸರಾ ದರ್ಬಾರ್ ಸಮಾರಂಭವನ್ನು ಬಸವಣ್ಣನವರ ಕಾಯಕದ ಪುಣ್ಯ ಭೂಮಿ ಬಸವಕಲ್ಯಾಣದಲ್ಲಿ ಆಚರಿಸಲು ತೀರ್ಮಾನಿಸಲಾಯಿತು.

ದಸರಾ ದರ್ಬಾರ್‌ ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷರಾದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅನುಮತಿ ಮೇರೆಗೆ ಸಮಿತಿಯ ಕಾರ್ಯಧ್ಯಕ್ಷರಾದ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ಸಮ್ಮುಖದಲ್ಲಿ 2025ರ ಆ.10ರಂದು ಹಾರಕೂಡ ಶ್ರೀಮಠದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಸಭೆ ಸೇರಿ ಹಾರಕೂಡ ಶ್ರೀಗಳ ನೇತೃತ್ವದಲ್ಲಿ ಎಲ್ಲರ ಸಹಮತದೊಂದಿಗೆ ವಿಜಯ ದಶಮಿ ದಿನದಂದು ಬಸವಕಲ್ಯಾಣದಲ್ಲಿ ನಡೆಯುವ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿಯ ಮೆರವಣಿಗೆಯನ್ನು ಭಕ್ತರ ಹೆಗಲ ಮೇಲೆ ಮಾಡದೆ ಅಲಂಕೃತ ವಾಹನದಲ್ಲಿ ನಡೆಸಬೇಕೆಂದು ಎಲ್ಲರ ಒಮ್ಮತದಿಂದ ತೀರ್ಮಾನಿಸಲಾಯಿತು.

WhatsApp Image 2025 08 15 at 2.50.49 PM
2025ರ ಫೆಬ್ರವರಿ ತಿಂಗಳಲ್ಲಿ ʼದಸರಾ ದರ್ಬಾರ್ʼ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಿ ಗೌರವಿಸಿದರು.

ಆದರೆ, ಆ.13 ತಡೋಳಾ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು 20 ಸ್ವಾಮೀಜಿಗಳು ಹಾರಕೂಡ ಮಠಕ್ಕೆ ಆಗಮಿಸಿದರು. ʼಬಸವಕಲ್ಯಾಣದಲ್ಲಿ ವಿಜಯ ದಶಮಿಯ ದಿನ ದಸರಾ ದರ್ಬಾರ್ ಸಮಾರಂಭದಲ್ಲಿ ನಾವು ರಂಭಾಪುರಿ ಸ್ವಾಮೀಜಿಯವರ ಅಡ್ಡಪಲ್ಲಕ್ಕಿಯನ್ನು ಭಕ್ತರ ಹೆಗಲ ಮೇಲೆಯೇ ಮಾಡುತ್ತೇವೆʼ ಎಂದು ಹಠ ಹಿಡಿದು ನಿರ್ಗಮಿಸಿದರು.

ʼನಾವು ಈ ಮೊದಲು ಸಮಿತಿಯವರು ತೆಗೆದುಕೊಂಡ ನಿರ್ಣಯ ಬದಲಿಸಲು ನಿರಾಕರಿಸಿ ʼದಸರಾ ದರ್ಬಾರ್ʼ ದಿಂದ ನಾನು ದೂರ ಸರಿಯಲು ತೀರ್ಮಾಸಿದ್ದೇವೆ. ಕೋಟ್ಯಂತರ ಬಸವ ಭಕ್ತರಿಗೂ ಮತ್ತು ಮಾನವೀಯತೆಯಲ್ಲಿ ನಂಬಿಕೆಯಿಟ್ಟ ಜನರ ಮನಸ್ಸುಗಳನ್ನು ಘಾಸಿಗೊಳಿಸಬಾರದೆಂದು ದಸರಾ ದರ್ಬಾರ್‌ದಿಂದ ನಾವು ದೂರ ಸರಿದಿದ್ದೇವೆʼ ಎಂದು ಹಾರಕೂಡ ಶ್ರೀಗಳು ತಿಳಿಸಿದ್ದಾರೆ.

ʼಈ ಸಮಾಜದಲ್ಲಿ ಒಡಕು ಉಂಟಾಗಬಾರದೆಂದು ನಮ್ಮ ನಿರ್ಣಯಕ್ಕೆ ಬದ್ಧವಾಗಿ ದಸರಾ ದರ್ಬಾರ್‌ ಸಮಾರಂಭದಿಂದ ದೂರ ಉಳಿಯುವ ನಿರ್ಧಾರಕ್ಕೆ ಬಂದಿದ್ದೇವೆ. ನಾವುಗಳು, ನಮ್ಮ ಮಠ ಮತ್ತು ನಾನು ಎಂದೂ ಯಾರಿಗೂ ಮನಸ್ಸು ನೋಯಿಸಿಲ್ಲ, ಮುಂದೆಯೂ ನೋಯಿಸುವುದಿಲ್ಲ. ಆದರೆ, ಅವರ ಪರಂಪರೆ ಬೇಡ ಎನ್ನಲು ನಮಗೆ ಹಕ್ಕಿಲ್ಲ, ಅವರು ಆಚರಿಸುವ ದಸರಾ ದರ್ಬಾರ್‌ಕ್ಕೆ ನಮ್ಮ ಶುಭ ಹಾರೈಕೆ ಇರುತ್ತದೆʼ ಎಂದು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | 79ನೇ ಸ್ವಾತಂತ್ರ್ಯ ದಿನಾಚರಣೆ : ಧ್ವಜಾರೋಹಣ ನೆರೆವೇರಿಸಿದ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಹಾರಕೂಡದ ಚನ್ನವೀರ ಶಿವಚಾರ್ಯ ಸ್ವಾಮೀಜಿ ಅವರು ʼಈದಿನ.ಕಾಮ್‌ʼ ಜೊತೆ ಮಾತನಾಡಿ, ʼಬಸವಕಲ್ಯಾಣದಲ್ಲಿ ಅಡ್ಡಪಲ್ಲಕಿಯಿಂದ ಸಮಸ್ಯೆಯಾಗುತ್ತದೆ. ಬೇಕಾದರೆ ಅಲಂಕೃತ ವಾಹನದಲ್ಲಿ ಮಾಡೋಣ ಎಂದು ತೀರ್ಮಾನಿಸಿದರೂ ರಂಭಾಪುರಿ ಶ್ರೀಗಳು ನಮ್ಮ ತೀರ್ಮಾನಕ್ಕೆ ಒಪ್ಪದೆ ʼನಮ್ಮ ಪರಂಪರೆಯಂತೆ ಅಡ್ಡಪಲ್ಲಕ್ಕಿ ಉತ್ಸವ ಮಾಡುತ್ತೇವೆʼ ಎಂದು ಹೇಳಿದ್ದಾರೆ. ಆದರಿಂದ, ದಸರಾ ದರ್ಬಾರ್‌ದಿಂದ ಹಿಂದೆ ಸರಿದಿದ್ದು, ಯಾವುದೇ ಕಾರಣಕ್ಕೂ ಆ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...