ಬೀದರ್ | ‘ಈದಿನ.ಕಾಮ್’ ಫಲಶೃತಿ; ರಾಜ್ಯದ ಅತೀ ಎತ್ತರದ ವ್ಯಕ್ತಿಗೆ ಕೆಎಎಸ್ ಅಧಿಕಾರಿ ನೆರವು

Date:

ಇಂದಿನ ಅಧಿಕಾರಶಾಹಿ, ಅಂತಸ್ತು, ವ್ಯವಹಾರಿಕ ಬದುಕಿನ ಜಂಜಾಟದಲ್ಲಿ ನೊಂದವರ ಬಗ್ಗೆ ಕಾಳಜಿ ತೋರುವ ಅಧಿಕಾರಿಗಳು ಸಿಗುವುದೇ ಬೆರಳೆಣಿಕೆಯಷ್ಟು. ಅಂತಹವರಲ್ಲೊಬ್ಬ ಅಧಿಕಾರಿ ಮರುಭೂಮಿಯ ʼಓಯಸಿಸ್ʼ ನಂತೆ ತಮ್ಮ ವೃತ್ತಿ ಬದುಕಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನವೀಯ ಮೌಲ್ಯಗಳ ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಕೆಎಎಸ್ ಅಧಿಕಾರಿ ಖಾಜಾ ಖಲೀಲ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯದ ಅತೀ ಎತ್ತರದ ವ್ಯಕ್ತಿಯ ವೈದ್ಯಕೀಯ ಖರ್ಚಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಬಡ ಕುಟುಂಬಕ್ಕೆ ಆಸರೆಯಾಗಿದ್ದಾರೆ.

ಬೀದರ್ ಜಿಲ್ಲೆಯ ಔರಾದ ತಾಲೂಕಿನ ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಚಿಂತಾಕಿ ಗ್ರಾಮದ ಮಾರುತಿ ಹಣಮಂತ ಕೋಳಿ ಅವರು ರಾಜ್ಯದ ಎತ್ತರದ ವ್ಯಕ್ತಿ ಎಂದು ಗುರುತಿಸಿಕೊಂಡಿದ್ದಾರೆ. ಅವರ ವಯಸ್ಸು 40ರ ಆಸುಪಾಸು. ಹಣಮಂತ ಅವರು ಬರೋಬ್ಬರಿ 7.5 ಅಡಿ ಎತ್ತರದ ದೇಹ ಹೊಂದಿದ್ದಾರೆ. ಇದೀಗ ಎರಡ್ಮೂರು ವರ್ಷಗಳಿಂದ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ. ನಿಶ್ಯಕ್ತಿಯಿಂದಾಗಿ ಕೆಲಸ ಮಾಡುವುದಿರಲಿ, ಓಡಾಡಲು ಆಗದ ಪರಿಸ್ಥಿತಿಯಲ್ಲಿರುವ ಮಾರುತಿ ಅವರಿಗೆ ‘ತನ್ನ ದೇಹವೇ ತನಗೆ ಭಾರವಾಗಿ’ ಮುಂದಿನ ಬದುಕು ಹೇಗಪ್ಪಾ ಎಂಬ ಚಿಂತೆ ಕಾಡಲಾರಂಭಿಸಿದೆ.

ಚಿಕ್ಕವರಿರುವಾಗಲೇ ತಂದೆಯನ್ನು ಕಳೆದುಕೊಂಡ ಸಹೋದರರು ತಾಯಿಯ ಪೋಷಣೆಯಲ್ಲಿ ಬೆಳೆದರು. ಮೊದಲೇ ಬಡತನ, ಕೂಲಿ ಮಾಡಿ ಬದುಕು ಸಾಗಿಸುವ ತಾಯಿ, ಕಡು ಬಡತನದಿಂದಾಗಿ ಯಾರಿಗೂ ಶಿಕ್ಷಣ ಕೊಡಿಸಲಿಲ್ಲ. ಇಬ್ಬರು ಸಹೋದರರು ಸಹಜವಾಗಿ ಬೆಳೆದು ಮದುವೆಯಾಗಿ ಸಂಸಾರ ನಡೆಸುತ್ತಿದ್ದಾರೆ. ಆದರೆ, ಮಾರುತಿ 15 ವರ್ಷ ವಯಸ್ಸಿನವರಿದ್ದಾಗ ಅವರ ದೇಹ ಇದ್ದಕ್ಕಿಂದ್ದಂತೆ ಎತ್ತರಕ್ಕೆ ಬೆಳೆಯಲಾರಂಭಿಸಿತು. ಮೂವತ್ತು ವರ್ಷ ತುಂಬುವ ವೇಳೆಗೆ ಅವರು ತುಂಬಾ ಎತ್ತರಕ್ಕೆ ಬೆಳೆದರು. ಮಾತ್ರವಲ್ಲದೆ, ಮಿತಿ ಮೀರಿ ಬೆಳೆದ ಎತ್ತರ ಬದುಕಿಗೆ ಭಾರವಾಗಿ ಪರಿಣಮಿಸಿ ಚರ್ಮ ರೋಗ ಸೇರಿದಂತೆ ವಿವಿಧ ರೋಗದಿಂದ ಹಾಸಿಗೆ ಹಿಡಿದಿದ್ದಾರೆ. ಕೂಲಿ ನಾಲಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುವ ಕುಟುಂಬಕ್ಕೆ ಮಾರುತಿ ಕೋಳಿ ಅವರ ಚಿಕಿತ್ಸೆ ವೆಚ್ಚ ಭರಿಸುವ ಸಾಮರ್ಥ್ಯ ಇಲ್ಲ. ಇದರಿಂದ ನೊಂದ ಕುಟುಂಬ ದಾನಿಗಳ ನೆರವು ಕೋರಿತ್ತು. ಅವರ ಬದುಕಿನ ಬಗ್ಗೆ ಈದಿನ.ಕಾಮ್ ವರದಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್‌ ವರದಿಗೆ ಸ್ಪಂದಿಸಿದ ಕೆಎಎಸ್‌ ಅಧಿಕಾರಿ ಖಾಜಾ ಖಲೀಲ್ (ಮೂಲತ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವಡಗಾಂವ(ದೇ) ಗ್ರಾಮದವರು. ಪ್ರಸ್ತುತ ಯಾದಗಿರಿ ಜಿಲ್ಲೆಯ ವಾಣಿಜ್ಯ ಮತ್ತು ತೆರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ) ಕೋಳಿ ಅವರಿಗೆ ಸಹಾಯಾಸ್ತ ಚಾಚಿಸಿದ್ದಾರೆ. ಮಾರುತಿ ಕೋಳಿ ಅವರಿಗೆ ಮಾಸಿಕ ಎರಡು ಸಾವಿರ ರೂ. ನೀಡುವುದಾಗಿ ತಿಳಿಸಿದ್ದಾರೆ.

ಆಗಸ್ಟ್ 20ರಂದು ಕೆಎಎಸ್ ಅಧಿಕಾರಿ ಖಲೀಲ್ ಅವರು ಯಾದಗಿರಿಯಿಂದ ಬೀದರ್‌ಗೆ ತೆರಳಿ, ಕೋಳಿ ಅವರ ಮನೆಗೆ ಭೇಟಿ ನೀಡಿದ್ದರು. ಮಾರುತಿ ಹಾಗೂ ಕುಟುಂಬದ ಪರಿಸ್ಥಿತಿಯನ್ನು ಕಂಡು ಮರುಗಿದ ಖಲೀಲ್ ‘ನಿಮ್ಮೊಂದಿಗೆ ನಾನಿದ್ದೇನೆ, ಧೈರ್ಯವಾಗಿರಿ, ನನ್ನ ಉಸಿರಿರುವರೆಗೂ ಪ್ರತಿ ತಿಂಗಳು ನಿಮ್ಮ ಅಕೌಂಟ್‌ಗೆ ಕಳುಹಿಸುವೆ. ಉತ್ತಮ ಚಿಕಿತ್ಸೆ ಪಡೆದುಕೊಳ್ಳಿ’ ಎಂದು ಆತ್ಮಸ್ಥೈರ್ಯ ತುಂಬಿದರು.

ಜೀವನಪೂರ್ತಿ 2 ಸಾವಿರ ನೀಡಲು ವಾಗ್ದಾನ:

ಕೆಎಎಸ್ ಅಧಿಕಾರಿ ಹಾಗೂ ಅವರ ಸ್ನೇಹಿತರು ವಿಶೇಷ ವ್ಯಕ್ತಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಿ ಮಾರುತಿ ಕೋಳಿ ಅವರಿಗೆ ಮೊದಲ ತಿಂಗಳ ಎರಡು ಸಾವಿರ ನೀಡಿದರು. ಕೆಎಎಸ್ ಅಧಿಕಾರಿ ಖಾಜಾ ಖಲೀಲ್ ಅವರು ಮಾತನಾಡಿ, “ಮಾರುತಿ ಕೋಳಿ ಅವರ ಆರೋಗ್ಯ ಪರಿಸ್ಥಿತಿ ಕುರಿತು ಈದಿನ.ಕಾಮ್ ವರದಿ ಪ್ರಕಟಿಸಿತ್ತು. ಅಂದು ನಾನು ಕಚೇರಿಯಲ್ಲಿದ್ದೆ, ತಕ್ಷಣ ಬಾಲಾಜಿ ಕುಂಬಾರ ಅವರಿಗೆ ಕರೆ ಮಾಡಿ ಸಹಾಧನ ನೀಡುವ ಬಗ್ಗೆ ವಾಗ್ದಾನ ಮಾಡಿದ್ದೆ, ನನ್ನ ಕಡೆಯಿಂದ ಇದೊಂದು ಅಳಿಲು ಸೇವೆ ಎಂದು ಪರಿಗಣಿಸುವೆ, ಪ್ರತಿತಿಂಗಳು ಹಣ ಮುಟ್ಟಿಸುವೆ, ಈದಿನ.ಕಾಮ್ ಇಂಥ ಸಾಮಾಜಿಕ ಕಳಕಳಿಯ ಬಗ್ಗೆ ಸುದ್ದಿ ಹೆಚ್ಚೆಚ್ಚು ಪ್ರಕಟಿಸಲಿ” ಎಂದು ಆಶಿಸಿದರು.

“ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಬಗ್ಗೆ ನಮ್ಮ ಜನಪ್ರತಿನಿಧಿಗಳು, ಅಧಿಕಾರಿಗಳು ಯೋಚಿಸಿದರೆ ಸಮಾಜ ಬದಲಾವಣೆಯಾಗಲು ಸಾಧ್ಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಬೀದರ್‌ |ಬ್ರಿಮ್ಸ್ ಹೊರಗುತ್ತಿಗೆಯಲ್ಲಿ ಲೂಟಿ; ಸಚಿವ ಖೂಬಾರನ್ನು ಸಂಪುಟದಿಂದ ವಜಾಕ್ಕೆ ಒತ್ತಾಯ

ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ನವೀಲಕುಮಾರ ಉತ್ಕಾರ್ ಮಾತನಾಡಿ, “ಮಾರುತಿ ಕೋಳಿ ಎಂಬ ಎತ್ತರದ ವಿಶೇಷ ವ್ಯಕ್ತಿಯ ಬಗ್ಗೆ ಈದಿನ.ಕಾಮ್ ವರದಿ ಪ್ರಕಟಿಸಿತು. ಈ ಬಗ್ಗೆ ಸ್ನೇಹಿತರೂ ಆದ ಕೆಎಎಸ್ ಅಧಿಕಾರಿ ಖಲೀಲ್ ಅವರು ಗಮನಕ್ಕೆ ಬಂದ ಕೂಡಲೇ ಸ್ಪಂದಿಸಿ ನೆರವಿಗೆ ಧಾವಿಸಿದ್ದಾರೆ. ಇಂಥ ಅಪರೂಪದ ಅಧಿಕಾರಿಗಳು ಸಿಗುವುದು ಇಂದಿನ ಕಾಲದಲ್ಲಿ ಅಪರೂಪ, ವರದಿ ಪ್ರಕಟಿಸಿದ ಈದಿನ.ಕಾಮ್ ತಂಡ ಹಾಗೂ ಆರ್ಥಿಕ ನೆರವು ನೀಡಲು ಮುಂದಾಗಿರುವ ಖಲೀಲ್ ಅವರ ಕಾರ್ಯಕ್ಕೆ ಸಮಾಜಕ್ಕೆ ಆದರ್ಶ” ಎಂದು ಹೇಳಿದರು.

ಸಮಾಜದಲ್ಲಿ ʼಸತ್ಯ-ನ್ಯಾಯ-ಪ್ರೀತಿʼ ಯೊಂದಿಗೆ ನೈಜ ಪತ್ರಿಕೋದ್ಯಮ ಉಳಿವಿಗಾಗಿ ಸದಾ ವಸ್ತುನಿಷ್ಠ, ಜನಪರ ಲೇಖನ, ಬರಹ, ಸುದ್ದಿಗಳನ್ನು ಪ್ರಕಟಿಸಲು ಈದಿನ.ಕಾಮ್ ಶ್ರಮಿಸುತ್ತಲೇ ಇದೆ. ನಿರ್ಗತಿಕರ, ಶೋಷಿತರ, ತಳ ಸಮುದಾಯಗಳ ನೋವಿಗೆ ದನಿಯಾಗುವ ಈದಿನ.ಕಾಮ್ ಗೆ ಇದೊಂದು ‘ಬಿಗ್ ಇಂಪ್ಯಾಕ್ಟ್’ ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಈ ಸಂದರ್ಭದಲ್ಲಿ ಸಾಮಾಜಿಕ ಚಿಂತಕ ರತಿಕಾಂತ ನೇಳಗೆ ಅಶೋಕ ಅಡಕೆ, ರಾಜಕುಮಾರ ಹೇಡೆ, ಸಂಜು ಚವ್ಹಾಣ, ಸಿದ್ದಪ್ಪ ನೇಳಗೆ, ರಾಹುಲ್, ಪ್ರಕಾಶ ಕೋಳಿ ಸೇರಿದಂತೆ ಗ್ರಾಮಸ್ಥರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...