ಬೀದರ್‌ | ಮಕ್ಕಳಲ್ಲಿ ಕಲಿಕಾಸಕ್ತಿ ಹುಟ್ಟಿಸುವ ಪ್ರಯತ್ನ ನಡೆಯಲಿ : ಡಾ.ಶಶಿಕಾಂತ ಉಡಿಕೇರಿ

Date:

ಶಿಕ್ಷಕರಾದವರೂ ವಿನೂತನ ಪ್ರಯೋಗಳನ್ನು ಅನುಸರಿಸಿ ಮಕ್ಕಳಲ್ಲಿ ಕಲಿಕಾಸಕ್ತಿ ಹುಟ್ಟಿಸುವ ಪ್ರಯತ್ನ ಮಾಡಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶಶಿಕಾಂತ ಉಡಿಕೇರಿ ಹೇಳಿದರು.

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಕಲಿಕಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ʼಮಕ್ಕಳ ಮನಸ್ಸು ಹಸಿ ಮಣ್ಣು ಇದ್ದಂತೆ ಬೇಕಾದ ಮೂರ್ತಿ ತೆಗೆಯಬಹುದು. ಅಂತಹ ಮುಗ್ಧ ಮನಸ್ಸು ಹೊಂದಿರುವ ಮಕ್ಕಳಿಗೆ ಬಾಲ್ಯದಿಂದಲೇ ಮೌಲ್ಯಾಧಾರಿತ ಶಿಕ್ಷಣ ಕಲ್ಪಿಸಿದರೇ ಮುಂದೆ ಅವರು ದೇಶದ ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆʼ ಎಂದರು.

ʼಇಂದಿನ ಒತ್ತಡದ ವಿವಿಧ ಚಟುವಟಿಕೆಗಳ ಮಧ್ಯೆ ಶಿಕ್ಷಣದ ಮೌಲ್ಯ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಪ್ರಾಥಮಿಕ ಹಂತದ ಶಿಕ್ಷಣ ಮಕ್ಕಳ ಭವಿಷ್ಯ ನಿರ್ಧರಿಸುತ್ತದೆ. ಹಾಗಾಗಿ ಶಿಕ್ಷಕರು ಹೊಸತನ್ನು ತಿಳಿದುಕೊಂಡು ಮಕ್ಕಳ ಬುದ್ಧಿಮಟ್ಟಕ್ಕೆ ತಕ್ಕಂತೆ ಬೋಧಿಸುವ ಕೆಲಸವಾದರೇ ಮಾತ್ರ ಮಕ್ಕಳಲ್ಲಿ ಕಲಿಯುವ ಆಸಕ್ತಿ ಹೆಚ್ಚುತ್ತದೆ. ರಾಷ್ಟ್ರೀಯ ಹಬ್ಬಗಳ ಮಹತ್ವ, ಮಹಾತ್ಮರ ಜೀವನ ಚರಿತ್ರೆ ಹೇಳಿಕೊಡುವುದರ ಜತೆಗೆ ಕ್ರೀಡೆಗೆ ಹೆಚ್ಚಿನ ಆಸಕ್ತಿ ನೀಡಿದರೇ ಮಕ್ಕಳು ಶಿಕ್ಷಣ ಕಲಿಕೆಗೆ ಹೆಚ್ಚು ಉತ್ಸಾಹ ತೋರುತ್ತಾರೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನ್ನಿಧ್ಯ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೃಷ್ಟಿದೋಷ ಹೆಚ್ಚುತ್ತಿದೆ. ಹಾಗಾಗಿ ಮಕ್ಕಳನ್ನು ಮೊಬೈಲ್‌ನಿಂದ ಆದಷ್ಟು ದೂರ ಇಡುವ ಕೆಲಸ ನಮ್ಮೆಲ್ಲರ. ಇಂದಿನ ಮಕ್ಕಳು ಸಾಕಷ್ಟು ಬುದ್ಧಿವಂತರಿದ್ದಾರೆ. ಆದರೆ ಹೃದಯ ವೈಶ್ಯಾಲತೆ ಕಡಿಮೆ ಆಗುತ್ತಿದೆ. ಶಿಕ್ಷಕರು ಕಾಲಕ್ಕೆ ತಕ್ಕಂತೆ ಬೋಧನಾ ಪದ್ಧತಿ ಅನುಸರಿಸಿ ಮಕ್ಕಳಿಗೆ ಜೀವನದ ಪಾಠ ಹೇಳಿಕೊಡುವ ಕೆಲಸ ಮಾಡಬೇಕುʼ ಎಂದು ನುಡಿದರು.

ಪ್ರಗತಿಪರ ಚಿಂತಕ ಸಿದ್ದಪ್ಪ ಮೂಲಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕಿರಣ ಗಾಜನೂರು ಅವರು ದಿಕ್ಸೂಚಿ ಮಾತುಗಳನ್ನು ಹೇಳಿದರು.

ಕಲಬುರಗಿ ಡಾ.ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ಅರುಣ ಜೋಳದ ಕೂಡ್ಲಗಿ, ಡಾ.ಜ್ಯೋತಿ, ಡಾ.ದೇವಿಕಾ
ವಿಷಯವಾರು ಸಂವಾದ ನಡೆಸಿ ಕೊಟ್ಟರು. ಜ್ಯೋತ್ನಾ ಅಂಬೇವಾಡ್ಕರ್ ಯೋಗ ಶಿಕ್ಷಣ ಹೇಳಿಕೊಟ್ಟರು.

ಇದನ್ನೂ ಓದಿ : ಬೀದರ್‌ | ರೈತರ ಹೋರಾಟಕ್ಕೆ ಜಯ : ಟನ್ ಕಬ್ಬಿಗೆ‌ ₹2,950 ಬೆಲೆ ನಿಗದಿ : 8 ದಿನಗಳ ಧರಣಿ ಅಂತ್ಯ

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೆಟ್ ಸದಸ್ಯ ರಾಘವೇಂದ್ರ ಭೈರಪ್ಪ, ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ್, ಆಡಳಿತಾಧಿಕಾರಿ ಮೋಹನ ರೆಡ್ಡಿ ಸೇರಿದಂತೆ ಹಲವರು ಇದ್ದರು. ಸವಿತಾ ಭೂರೆ, ಸುಧಾ ನಾಯಕ ವಚನ ಗಾಯನ ನಡೆಸಿ ಕೊಟ್ಟರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಸ್ವಾಗತಿಸಿದರು. ಮಧುಕರ ಗಾಂವಕರ್ ನಿರೂಪಿಸಿದರು. ಬಾಲಾಜಿ ವಲ್ಲೂರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...