ಬೀದರ್ ತಾಲೂಕಿನ ತಡಪಳ್ಳಿ ಗ್ರಾಮದಲ್ಲಿಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಸುಟ್ಟುಹೋಗಿದೆ.
ತಡಪಳ್ಳಿ ಗ್ರಾಮದ ಭೀಮಣ್ಣ ತುಕ್ಕಪ್ಪಾ ಹಾಗೂ ಯಶೋಧ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಸರ್ವೇ ನಂ-111ರಲ್ಲಿ ಬೆಳೆದಿದ್ದ ಒಟ್ಟು 4.20 ಎಕರೆ ಕಬ್ಬು ಸುಟ್ಟು ಕರಕಲಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಶಾರ್ಟ್ ಸರ್ಕ್ಯೂಟ್ ದುರಂತದಿಂದ ಅಂದಾಜು ₹4.50 ಲಕ್ಷ ಮೌಲ್ಯದ ಕಬ್ಬು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ನಂದಿಸಿದ್ದಾರೆ. ಆದರೆ, ಕಟಾವಿಗೆ ಬಂದಿದ್ದ ಬಹುತೇಕ ಕಬ್ಬು ಸುಟ್ಟು ಭಸ್ಮವಾಗಿದೆ ಎಂದು ರೈತರು ತಿಳಿಸಿದ್ದಾರೆ.

ಬ್ಯಾಂಕ್ ಸಾಲ ಪಡೆದು ಕಬ್ಬು ಬೆಳೆದು, ಉತ್ತಮ ಆದಾಯ ನಿರೀಕ್ಷೆಯಲ್ಲಿದ್ದೆ. ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?





