ಬೀದರ್ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ : ಸಚಿವ ಈಶ್ವರ ಖಂಡ್ರೆ

Date:

ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಬೀದರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ನೀರಿನ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಈಗಾಗಲೇ 632 ಕಾಮಗಾರಿಗಳು ಪೂರ್ಣಗೊಂಡಿವೆ. ಶಾಶ್ವತ ನೀರಿನ ವಲಯ ಬಳಸಿ ನೀರು ಸರಬರಾಜು ಯೋಜನೆ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಡಯಾಲಿಸಿಸ್‌ ರೋಗಿಗಳಿಗೆ ಬ್ರಿಮ್ಸ್‌ನಲ್ಲಿ ಚಿಕಿತ್ಸೆಗೆ ಕಾಯುವ ಸ್ಥಿತಿ ಇದೆ ಎಂದು ಸಾಕಷ್ಟು ದೂರುಗಳು ಬಂದಿವೆ. ಇನ್ನೂ ಹೆಚ್ಚಿನ ಡಯಾಲಿಸಿಸ್‌ ಮಶೀನ್‌ಗಳು ಬೇಕಿದ್ದಲ್ಲಿ ಕೆಕೆಆರ್‌ಡಿಬಿ ಅನುದಾನದಿಂದ ಒದಗಿಸಲಾಗುವುದು. ಆದರೆ, ರೋಗಿಗಳಿಗೆ ಚಿಕಿತ್ಸೆಗಾಗಿ ಕಾಯುವಂತೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ಜಿಲ್ಲೆಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ‌ಸೂಕ್ತ ಔಷಧೋಪಚಾರ, ಚಿಕಿತ್ಸೆ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರಿಗೆ ಸೂಚಿಸಿದ ಅವರು, ಬ್ರಿಮ್ಸ್‌ನಲ್ಲಿ ಅವ್ಯವಸ್ಥೆ ಸರಿಪಡಿಸಬೇಕು. ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಬ್ರಿಮ್ಸ್ ನಿರ್ದೇಶಕರು ಚರ್ಚಿಸಿ ಸಹಕಾರದಿಂದ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಬೇಕು. ಮಾರ್ಚ್‌ ಒಳಗೆ ಕ್ಯಾಥ್‌ಲ್ಯಾಬ್ ಆರಂಭಿಸುವಂತೆ ಸೂಚಿಸಿದರು.

‘ಕ್ಯಾನ್ಸರ್ ಪೀಡಿತ ರೋಗಿಗಳು ಜಿಲ್ಲೆಯ ಹೊರಗೆ ಕಿಮೋಥೆರೆಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಿಮ್ಸ್‌ನಲ್ಲಿ ಈಗಾಗಲೇ ‘ಡೇ ಕೇರ್’ ಕೀಮೋ ಕೇಂದ್ರ ಆರಂಭಿಸಿರುವ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು’ ಎಂದರು.’ಜಿಲ್ಲೆಯಿಂದ ಹಾದು ಹೋಗಿರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ. ಖಂಡ್ರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ವರ್ಷಕ್ಕೆ 300 ಅಪಘಾತಗಳು ಆಗುತ್ತಿವೆ. ಜಿಲ್ಲೆಯ ಎಲ್ಲ ವಾಹನಗಳಿಗೆ ರೇಡಿಯಂ ಸೈಕಲ್ ಕಡ್ಡಾಯವಾಗಿ ಅಂಟಿಸಬೇಕು. ಎಲ್ಲ ಪ್ರಮುಖ ರಸ್ತೆಗಳಲ್ಲಿ ವೃತ್ತಗಳಲ್ಲಿ ಉತ್ತಮ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ಸೂಚಿಸಿದರು.

‘ನೌಬಾದ್ ನಿಲಂಗಾ ರಸ್ತೆ ಹಾಗೂ ಬೀದರ್ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ತಗ್ಗುಗಳು ಹಾಗೂ ಉಬ್ಬುಗಳಿವೆ. ಅದರಿಂದ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ಸರಿಪಡಿಸಬೇಕು: ಎಂದರು.

ಹೊರ ಜಿಲ್ಲೆಯ ಮೀನುಗಾರರು ಸ್ಥಳೀಯ ಜಲಾಶಯಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಸ್ಥಳೀಯ ಮೀನುಗಾರರ ಸಂಘ ನಿರ್ಮಿಸಿ ಸ್ಥಳೀಯರಿಗೆ ಅನುಕೂಲವಾಗುವಂತೆ ಮಾಡಬೇಕು’ ಎಂದು ಹೇಳಿದರು.ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೊಳಪಡುವ ವಸತಿ ನಿಲಯ, ವಸತಿ ಶಾಲೆಗಳಿಗೆ ಕಟ್ಟಡ ಅಥವಾ ನಿವೇಶನ ಕೊರತೆ ಇರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವರದಿ ನೀಡಬೇಕು’ ಎಂದರು.

ಹಿಂದುಳಿದ, ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಪರಿಶಿಷ್ಟ ಪಂಗಡ ಅಭಿವೃದ್ಧಿ ಹಾಗೂ ಇತರೆ ಇಲಾಖೆಗಳು ಮುಂಬರುವ ಸಾಲಿನಲ್ಲಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಅನಾನುಕೂಲವಾಗದಂತೆ ವಸತಿ ನಿಲಯಕ್ಕೆ ಪ್ರವೇಶ ದೊರಕುವ ನಿಟ್ಟಿನಲ್ಲಿ ಜಿಲ್ಲೆಗೆ ಅಗತ್ಯವಿರುವ ವಸತಿ ನಿಲಯದ ನಿವೇಶನ ಹಾಗೂ ಕಟ್ಟಡಗಳ ವಿವರವನ್ನು ನೀಡಿದಲ್ಲಿ ಮುಂಬರುವ ಕ್ಯಾಬಿನೆಟ್‍ನಲ್ಲಿ ಚರ್ಚಿಸುವುದಾಗಿ ಸಚಿವರು ತಿಳಿಸಿದರು.

‘ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಅಂಗನವಾಡಿ ಕಟ್ಟಡಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶವ ಹಾಗೂ ಸ್ಥಾನವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ನೆನಪು | ವಿಶಿಷ್ಟ ಮ್ಯಾನರಿಸಂಗಳ ಮರೆಯಲಾರದ ನಟ ಜೀನ್‌ ಹ್ಯಾಕ್‌ಮನ್‌

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ.ರಂದೀಪ, ಶಾಸಕರಾದ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಡಾ.ಸಿದ್ದು ಪಾಟೀಲ, ಬಸವಕಲ್ಯಾಣ ಶಾಸಕ ಶರಣು ಸಲಗರ, ಭೀಮರಾವ ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ.ಗಿರೀಶ ಬದೋಲೆ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...