ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

Date:

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.

ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು ಸಂಜೆ ರೈತ ರಾಜಕುಮಾರ ನಾಗಪ್ಪಾ ಮಟ್ಟೆ ಅವರು ಕೆಲಸ ಮಾಡುತ್ತಿರುವ ಜಮೀನಿಗೆ ತೆರಳಿ ಸಾಲದ ಕಂತಿನ ಹಣ ಯಾಕೆ ಕಟ್ಟಿಲ್ಲ ಎಂದು ಅವಾಚ್ಯ ಶಬ್ದಗಳಿಂದ‌ ನಿಂದಿಸಿ ರಾಜಕುಮಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ರೈತ ರಾಜಕುಮಾರ್ ನಾಗಪ್ಪ ಮಟ್ಟೆ ಅವರ ಪತ್ನಿ ವಿಜಯಲಕ್ಷ್ಮಿಅವರು ಭಾಲ್ಕಿ ಪಟ್ಟಣದಲ್ಲಿರುವ ಸಿದ್ಧಶ್ರೀ ಬ್ಯಾಂಕ್‌ನಲ್ಲಿ ₹35 ಸಾವಿರ ಸಾಲ ಪಡೆದಿದ್ದರು. ಬ್ಯಾಂಕ್‌ ನಿಯಮದಂತೆ ಪ್ರತಿ ವಾರ ಸಾಲದ ಕಂತು ಮರುಪಾವತಿಸಿದ್ದಾರೆ. ಆದರೆ ಉಳಿದಿರುವ ಬಾಕಿ ₹9,180 ಹಣ ಯಾಕೆ ಕಟ್ಟಿಲ್ಲವೆಂದು ಪ್ರಶ್ನಿಸಿ ಎಂದು ಬ್ಯಾಂಕ್‌ ಸಿಬ್ಬಂದಿ ರಾಜಕುಮಾರ್‌ ಅವರಿಗೆ ಬಡಿಗೆಯಿಂದ ಹೊಡೆದು ಗಾಯಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ರೈತ ರಾಜಕುಮಾರ್‌ ಮಟ್ಟೆ ಅವರನ್ನು ಕೂಡಲೇ ಹುಲಸೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಚಿಕಿತ್ಸೆ ಮುಂದುವರೆದಿದೆ.

ʼಸಾಲದ ಕಂತು ಕಟ್ಟುವುದು ಯಾವುದೂ ಬಾಕಿ ಇಲ್ಲ. ಅಂದು ಮುಂಜಾನೆ ಕಟ್ಟಬೇಕಾದ ಸಾಲದ ಕಂತು ಕಟ್ಟಿಲ್ಲವೆಂದು ಸಂಜೆ ಜಮೀನಿಗೆ ಬಂದು ನನ್ನ ತಲೆ, ಬೆನ್ನಿನ ಮೇಲೆ ಹೊಡೆದು ಗುಪ್ತಗಾಯ ಮಾಡಿದ್ದಾರೆ. ಈ ಹಿಂದೆ ಕೂಡ ಒಮ್ಮೆ ಸಾಲದ ಮರುಪಾವತಿ ವಿಚಾರಕ್ಕೆ ಬ್ಯಾಂಕ್‌ ಸಿಬ್ಬಂದಿಯೊಂದಿಗೆ ಜಗಳವಾಗಿತ್ತುʼ ಎಂದು ಹಲ್ಲೆಗೊಳಗಾದ ರಾಜಕುಮಾರ್‌ ಮಟ್ಟೆ ಅವರು ʼಈದಿನ.ಕಾಮ್‌ʼ ಜೊತೆ ಮಾತನಾಡಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ : ಅರಣ್ಯ ಪಾಲಕ ದಸ್ತಗಿರಿಸಾಬ ಅಮಾನತುಈ ಸುದ್ದಿ ಓದಿದ್ದೀರಾ?

ರೈತ ರಾಜಕುಮಾರ್‌ ಮಟ್ಟೆ ಅವರು ನೀಡಿದ ದೂರಿನ ಮೇರೆಗೆ ಭಾಲ್ಕಿ ಸಿದ್ಧಶ್ರೀ ಬ್ಯಾಂಕ್‌ ಸಿಬ್ಬಂದಿಗಳಾದ ಸಂಗಮೇಶ ಚಮಕೋಡೆ, ಸಂಗಮೇಶ ಬಿರಾದರ್‌, ಕಿರಣ ಪಾಟೀಲ್‌ ಹಾಗೂ ಸುನೀಲ್‌ ಎಂಬುವವರ ಮೇಲೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...