ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘ ಆಗ್ರಹ

Date:

ಈ ಬಾರಿಯ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾಳಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಘೋಷಿಸಿದಂತೆ ಬೆಳೆ ಹಾನಿ ಪರಿಹಾರ ಜಮೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಬಸವಕಲ್ಯಾಣ ತಾಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-‌2 ತಹಸೀಲ್ದಾರ್‌ ಡಾ.ರಮೇಶ ಅವರಿಗೆ ಸಲ್ಲಿಸಿದರು.

ʼಅ.30 ರಿಂದ ಜಿಲ್ಲೆಯ ಎಲ್ಲ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿತು. ಆದರೆ, ಇಲ್ಲಿಯವರೆಗೆ ಹುಮನಾಬಾದ್‌, ಬಸವಕಲ್ಯಾಣ, ಹುಲಸೂರ ಹಾಗೂ ಬೀದರ್‌ ತಾಲೂಕಿನ ರೈತರಿಗೆ ಪರಿಹಾರ ಹಣ ಜಮೆಯಾಗಿಲ್ಲ. ಜಿಲ್ಲಾಡಳಿತ ತಕ್ಷಣ ಪರಿಹಾರ ಹಣ ರೈತರ ಖಾತೆಗೆ ಪಾವತಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳೆ ಹಾನಿಯಾದ ಪ್ರತಿ ಹೆಕ್ಟೇರ್‌ಗೆ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್ ನಿಯಮಾವಳಿಯಂತೆ ಪರಿಹಾರ ಘೋಷಿಸಲಾಗಿದೆ. ಆದರೆ, ಜಿಲ್ಲೆಯ ಕೆಲ ತಾಲೂಕಿನ ರೈತರಿಗೆ ಮಾತ್ರ ಹಣ ಜಮೆಯಾಗಿದೆ. ಯಾವುದೇ ತಾರತಮ್ಯ ಮಾಡದೆ ಎಲ್ಲ ರೈತರಿಗೂ ಹಣ ನೀಡಬೇಕು. ಜಿಲ್ಲೆಯಲ್ಲಿ ಕಬ್ಬಿಗೆ 2950 ಬೆಲೆ ನಿಗದಿ ಮಾಡಲಾಗಿದೆ. ಇದು ನ್ಯಾಯಯುತ ಬೆಲೆ ಅಲ್ಲ. ಹೀಗಾಗಿ ಕನಿಷ್ಠ ಪ್ರತಿ ಟನ್‌ಗೆ 3,000 ದರ ನೀಡಬೇಕು. ರೈತರ ಜಮೀನಿಗೆ ರಾತ್ರಿ ವೇಳೆ ವಿದ್ಯುತ್‌ ಪೂರೈಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಧರ್ಮದಾರಿತ ದೇಶ ವಿಭಜನೆ ಸಲ್ಲದು: ಮಾವಳ್ಳಿ ಶಂಕರ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ ಗುದಗೆ, ತಾಲೂಕಾಧ್ಯಕ್ಷ ರುದ್ರಯ್ಯಾ ಸ್ವಾಮಿ, ಉಪಾಧ್ಯಕ್ಷ ಬಾಬು ಗೌರ, ತಾಲೂಕು ಪ್ರಧಾನ ಕಾರ್ಯದರ್ಶಿ ಅಣವೀರ ಬಿರಾದರ್‌ ಸೇರಿದಂತೆ ವೀರಾರೆಡ್ಡಿ ಕಿಟ್ಟಾ, ಕಾಶಿನಾಥ ಬಿರಾದರ್‌, ರಾಜಕುಮಾರ ಹೊಳ್ಳೆ, ಕಲ್ಲಪ್ಪಾ ಗೌದೆ, ಬಾಬುರಾವ್‌, ಸೂರ್ಯಕಾಂತ ಮದಕಟ್ಟೆ ಸೇರಿದಂತೆ ಮತ್ತಿತರರಿದ್ದರು.

WhatsApp Image 2025 11 24 at 4.19.22 PM 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...